AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?

ಕೊಲೆ ಆರೋಪಿ ನಟ ದರ್ಶನ್​​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ.

ಬದಲಾಗಲಿದೆ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ; ಫ್ಯಾನ್ಸ್ ಮತ್ತೆ ಹಚ್ಚೆಹಾಕಿಸಿಕೊಳ್ತಾರಾ?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:05 PM

Share

ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ವಿಚಾರಣಾಧೀನ ಖೈದಿ ನಂ. 6106 ನೀಡಲಾಗಿತ್ತು. ಇದನ್ನು ಫ್ಯಾನ್ಸ್ ಸಂಭ್ರಮಿಸಿ ಹಚ್ಚೆ ಹಾಕಿಸಿಕೊಂಡಿದ್ದರು. ಕೆಲವರು ಕಾರುಗಳಿಗೆ ಈ ಸಂಖ್ಯೆಯನ್ನು ಬರೆದುಕೊಂಡಿದ್ದರು. ಈಗ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್​ ಆಗಲಿದ್ದಾರೆ. ಇದರಿಂದ ಅವರು ವಿಚಾರಣಾಧೀನ ಖೈದಿ ಸಂಖ್ಯೆ ಕೂಡ ಬದಲಾಗಲಿದೆ. ಈಗ ದರ್ಶನ್ ಫ್ಯಾನ್ಸ್ ಮತ್ತೆ ಹಚ್ಚೆ ಹಾಕಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಫ್ಯಾನ್ಸ್ ದರ್ಶನ್​ನ ಮೇಲೆ ಅಂಧಾಭಿಮಾನ ತೋರಿಸುತ್ತಿದ್ದಾರೆ. ಈ ಕಾರಣದಿಂದಲೇ ದರ್ಶನ್ ಜೊತೆ ಅನೇಕರು ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಯಿತು. ಅವರ ಖೈದಿ ಸಂಖ್ಯೆಯನ್ನು ಕೆಲವರು ಹಚ್ಚೆ ಹಾಕಿಸಿಕೊಂಡರೆ ಇನ್ನೂ ಕೆಲವರು ತಮ್ಮ ವಾಹನಗಳಿಗೆ ಈ ನಂಬರ್​ನ ಸ್ಟಿಕ್ಕರ್ ಅಂಟಿಸಿದರು. ಅತ್ತ ಮಗನಿಗೆ ಖೈದಿ ಡ್ರೆಸ್ ಹಾಕಿಸಿ ಫೋಟೋಶೂಟ್ ಮಾಡಿಸೋ ಕೆಲಸವೂ ಆಯಿತು. ಈಗ ದರ್ಶನ್ ಫ್ಯಾನ್ಸ್ ಆರೋಪಿ ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ ಬದಲಾವಣೆ ಪಕ್ಕಾ ಆಗಿದೆ.

ಬಳ್ಳಾರಿಗೆ ಶಿಫ್ಟ್​ ಆಗುತ್ತಿದ್ದಂತೆ ವಿಚಾರಣಾಧೀನ ಖೈದಿ ಸಂಖ್ಯೆ ಚೇಂಜ್ ಆಗಲಿದೆ. ಬಳ್ಳಾರಿ ಖೈದಿಗಳಂತೆ ನಟ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ಸಿಗಲಿದೆ. ಮೂರು ಅಂಕಿಯ ವಿಚಾರಣಾಧೀನ ನಂಬರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಬ್ಯಾರಕ್​​ಗೆ ಶಿಫ್ಟ್​​​ ಮಾಡಲಾಗುತ್ತದೆ.

ಇದನ್ನೂ ಓದಿ: ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ

ದರ್ಶನ್ ಅವರನ್ನು ನೋಡಲು ಈಗಲೇ ಬಳ್ಳಾರಿಯ ಕೇಂದ್ರ ಕಾರಾಗೃಹದ ಬಳಿ ಫ್ಯಾನ್ಸ್ ನೆರೆದಿದ್ದಾರೆ. ಜೈಲಿನಲ್ಲಿ ಸಿಗರೇಟ್ ಸೇದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಇಂದು (ಆಗಸ್ಟ್​ 28) ವಿಚಾರಣೆ ಮಾಡಬೇಕಿದೆ. ಆ ಬಳಿಕ ಸ್ಥಳಮಹಜರು ನಡೆಯಲಿದೆ. ಇದಾದ ಬಳಿಕ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Wed, 28 August 24

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ