AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೇಸ್: ಮುಂದಿನ ಕೋರ್ಟ್ ಪ್ರಕ್ರಿಯೆ ಬಗ್ಗೆ ದರ್ಶನ್ ಪರ ಲಾಯರ್ ಮಾಹಿತಿ

ಪವಿತ್ರಾ ಗೌಡ, ದರ್ಶನ್ ಸೇರಿದಂತೆ 17 ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಕ್ತಾಯ ಆಗದೆ. ಇನ್ಮುಂದೆ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಗ ಪಡೆದುಕೊಳ್ಳಲಿದೆ. ಇಂದು ಆದ ಪ್ರಕ್ರಿಯೆ ಏನು? ಮುಂದಿನ ವಿಚಾರಣೆ ಹೇಗಿರಲಿದೆ ಎಂದು ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೇಸ್: ಮುಂದಿನ ಕೋರ್ಟ್ ಪ್ರಕ್ರಿಯೆ ಬಗ್ಗೆ ದರ್ಶನ್ ಪರ ಲಾಯರ್ ಮಾಹಿತಿ
Darshan Lawyer
ಮದನ್​ ಕುಮಾರ್​
|

Updated on: Nov 03, 2025 | 6:50 PM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಇಂದು (ನವೆಂಬರ್ 3) ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮಾಡಲಾಗಿದೆ. ಎಲ್ಲ 17 ಆರೋಪಿಗಳ ಎದುರು ನ್ಯಾಯಾಧೀಶರು ದೋಷಾರೋಪಗಳನ್ನು ಓದಿ ಹೇಳಿದರು. ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ವಿಚಾರಣೆ ಮುಗಿದ ಬಳಿಕ ದರ್ಶನ್ (Darshan) ಪರ ವಕೀಲರು ಮಾಧ್ಯಮಗಳ ಜೊತೆ ಮಾತನಾಡಿದರು. ಇಂದು ನ್ಯಾಯಾಲಯದಲ್ಲಿ ನಡೆದಿದ್ದು ಏನು? ಮುಂದಿನ ಕೋರ್ಟ್ ಪ್ರಕ್ರಿಯೆ ಯಾವ ರೀತಿ ಇರಲಿದೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

‘ಕ್ರಿಮಿನಲ್ ಪ್ರಕರಣದಲ್ಲಿ ಇದೊಂದು ಪ್ರಕ್ರಿಯೆ. ಜೈಲಿನಲ್ಲಿ ಇರುವ ಆರೋಪಿಗಳು ಹಾಗೂ ಜಾಮೀನು ಪಡೆದಿರುವ ಆರೋಪಿಗಳು ನ್ಯಾಯಾಧೀಶರ ಎದುರು ಹಾಜರಾಗಿದ್ದರು. ಪೊಲೀಸರು ಇದುವರೆಗೂ ತನಿಖೆ ನಡೆಸಿ ಚಾರ್ಜ್​ಶೀಟ್ ಹಾಕಿದ್ದರು. ಅದು ಎವಿಡೆನ್ಸ್ ಅಲ್ಲ. ಇಂದು ಕೋರ್ಟ್ ದೋಷಾರೋಪಣೆ ಹೊರಿಸಿದೆ. ಈ ಆರೋಪಗಳ ಮೇಲೆ ಇನ್ಮುಂದೆ ವಿಚಾರಣೆ ಆರಂಭ ಆಗುತ್ತದೆ’ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ.

‘ನಿಮ್ಮ ಮೇಲೆ ಇರುವ ಇಂಥ ಪ್ರಕರಣ, ಸೆಕ್ಷನ್​​ಗಳು ಹಾಕಲಾಗಿದೆ ಎಂಬುದನ್ನು ಜಡ್ಜ್​ ಸಾಹೇಬರು ಎಲ್ಲ ಆರೋಪಿಗಳ ಎದುರು ಓದಿದ್ದಾರೆ. ಆದರೆ ಎಲ್ಲ ಆರೋಪಿಗಳು ಅದನ್ನು ನಿರಾಕರಿಸಿದ್ದಾರೆ. ಈ ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ, ವಿಚಾರಣೆ ನಡೆಯಲಿ. ವಿಚಾರಣೆ ಎದುರಿಸಲು ನಾವು ಸಿದ್ಧರಿದ್ದೇವೆ ಅಂತ ಆರೋಪಿಗಳು ಉತ್ತರ ಕೊಟ್ಟಿದ್ದಾರೆ’ ಎಂದಿದ್ದಾರೆ ವಕೀಲರು.

‘ಇನ್ಮುಂದೆ ಸಾಕ್ಷಿಗಳ ವಿಚಾರಣೆಗೆ ಒಂದು ದಿನಾಂಕ ನಿಗದಿ ಆಗುತ್ತದೆ. ಅದಕ್ಕೂ ಮುನ್ನ ಪ್ರಾಸಿಕ್ಯೂಷನ್​​ನವರು ಸಾಕ್ಷಿಗಳ ಪಟ್ಟಿಯನ್ನು ನೀಡಬೇಕು. ಈ ಪ್ರಕರಣದಲ್ಲಿ ಯಾರೆಲ್ಲ ಸಾಕ್ಷಿಗಳು ಇದ್ದಾರೆ? ಮೊದಲು ಯಾರ ವಿಚಾರಣೆ ನಡೆಸಬೇಕು ಎಂಬ ಮಾಹಿತಿಯನ್ನು ನ್ಯಾಯಾಲಯಕ್ಕೆ ಮತ್ತು ನಮಗೆ ಪ್ರಾಸಿಕ್ಯೂಷನ್​​ನವರು ನೀಡಬೇಕು. ಅದರ ಆಧಾರದ ಮೇಲೆ ಸಾಕ್ಷಿಗಳನ್ನು ಕರೆಯಲು ದಿನಾಂಕವನ್ನು ಕೋರ್ಟ್ ನಿಗದಿ ಮಾಡುತ್ತದೆ’ ಎಂದು ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಣೆಗೆ ಕುಂಕುಮ ಇಟ್ಟುಕೊಂಡು ಕೋರ್ಟ್ ವಿಚಾರಣೆಗೆ ದರ್ಶನ್ ಹಾಜರು; ಕಿಕ್ಕಿರಿದ ವಕೀಲರು

‘ಆರೋಪಿಗಳ ಸಮ್ಮುಖದಲ್ಲೇ ವಿಚಾರಣೆ ನಡೆಯಬೇಕಿರುವುದು. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕೋ ಅಥವಾ ಖುದ್ದಾಗಿ ಹಾಜರಾಗಬೇಕೋ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ನವೆಂಬರ್ 10ರಂದು ರೆಗ್ಯುಲರ್ ವಿಚಾರಣೆ ಇರುವುದರಿಂದ ಆರೋಪಿಗಳು ಅಂದು ಹಾಜರಾಗಬೇಕಾಗುತ್ತದೆ’ ಎಂದಿದ್ದಾರೆ ದರ್ಶನ ಪರ ವಕೀಲರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!