AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೇಸ್: ಮುಂದಿನ ಕೋರ್ಟ್ ಪ್ರಕ್ರಿಯೆ ಬಗ್ಗೆ ದರ್ಶನ್ ಪರ ಲಾಯರ್ ಮಾಹಿತಿ

ಪವಿತ್ರಾ ಗೌಡ, ದರ್ಶನ್ ಸೇರಿದಂತೆ 17 ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಕ್ತಾಯ ಆಗದೆ. ಇನ್ಮುಂದೆ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಗ ಪಡೆದುಕೊಳ್ಳಲಿದೆ. ಇಂದು ಆದ ಪ್ರಕ್ರಿಯೆ ಏನು? ಮುಂದಿನ ವಿಚಾರಣೆ ಹೇಗಿರಲಿದೆ ಎಂದು ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೇಸ್: ಮುಂದಿನ ಕೋರ್ಟ್ ಪ್ರಕ್ರಿಯೆ ಬಗ್ಗೆ ದರ್ಶನ್ ಪರ ಲಾಯರ್ ಮಾಹಿತಿ
Darshan Lawyer
ಮದನ್​ ಕುಮಾರ್​
|

Updated on: Nov 03, 2025 | 6:50 PM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಇಂದು (ನವೆಂಬರ್ 3) ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮಾಡಲಾಗಿದೆ. ಎಲ್ಲ 17 ಆರೋಪಿಗಳ ಎದುರು ನ್ಯಾಯಾಧೀಶರು ದೋಷಾರೋಪಗಳನ್ನು ಓದಿ ಹೇಳಿದರು. ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ವಿಚಾರಣೆ ಮುಗಿದ ಬಳಿಕ ದರ್ಶನ್ (Darshan) ಪರ ವಕೀಲರು ಮಾಧ್ಯಮಗಳ ಜೊತೆ ಮಾತನಾಡಿದರು. ಇಂದು ನ್ಯಾಯಾಲಯದಲ್ಲಿ ನಡೆದಿದ್ದು ಏನು? ಮುಂದಿನ ಕೋರ್ಟ್ ಪ್ರಕ್ರಿಯೆ ಯಾವ ರೀತಿ ಇರಲಿದೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

‘ಕ್ರಿಮಿನಲ್ ಪ್ರಕರಣದಲ್ಲಿ ಇದೊಂದು ಪ್ರಕ್ರಿಯೆ. ಜೈಲಿನಲ್ಲಿ ಇರುವ ಆರೋಪಿಗಳು ಹಾಗೂ ಜಾಮೀನು ಪಡೆದಿರುವ ಆರೋಪಿಗಳು ನ್ಯಾಯಾಧೀಶರ ಎದುರು ಹಾಜರಾಗಿದ್ದರು. ಪೊಲೀಸರು ಇದುವರೆಗೂ ತನಿಖೆ ನಡೆಸಿ ಚಾರ್ಜ್​ಶೀಟ್ ಹಾಕಿದ್ದರು. ಅದು ಎವಿಡೆನ್ಸ್ ಅಲ್ಲ. ಇಂದು ಕೋರ್ಟ್ ದೋಷಾರೋಪಣೆ ಹೊರಿಸಿದೆ. ಈ ಆರೋಪಗಳ ಮೇಲೆ ಇನ್ಮುಂದೆ ವಿಚಾರಣೆ ಆರಂಭ ಆಗುತ್ತದೆ’ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ.

‘ನಿಮ್ಮ ಮೇಲೆ ಇರುವ ಇಂಥ ಪ್ರಕರಣ, ಸೆಕ್ಷನ್​​ಗಳು ಹಾಕಲಾಗಿದೆ ಎಂಬುದನ್ನು ಜಡ್ಜ್​ ಸಾಹೇಬರು ಎಲ್ಲ ಆರೋಪಿಗಳ ಎದುರು ಓದಿದ್ದಾರೆ. ಆದರೆ ಎಲ್ಲ ಆರೋಪಿಗಳು ಅದನ್ನು ನಿರಾಕರಿಸಿದ್ದಾರೆ. ಈ ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ, ವಿಚಾರಣೆ ನಡೆಯಲಿ. ವಿಚಾರಣೆ ಎದುರಿಸಲು ನಾವು ಸಿದ್ಧರಿದ್ದೇವೆ ಅಂತ ಆರೋಪಿಗಳು ಉತ್ತರ ಕೊಟ್ಟಿದ್ದಾರೆ’ ಎಂದಿದ್ದಾರೆ ವಕೀಲರು.

‘ಇನ್ಮುಂದೆ ಸಾಕ್ಷಿಗಳ ವಿಚಾರಣೆಗೆ ಒಂದು ದಿನಾಂಕ ನಿಗದಿ ಆಗುತ್ತದೆ. ಅದಕ್ಕೂ ಮುನ್ನ ಪ್ರಾಸಿಕ್ಯೂಷನ್​​ನವರು ಸಾಕ್ಷಿಗಳ ಪಟ್ಟಿಯನ್ನು ನೀಡಬೇಕು. ಈ ಪ್ರಕರಣದಲ್ಲಿ ಯಾರೆಲ್ಲ ಸಾಕ್ಷಿಗಳು ಇದ್ದಾರೆ? ಮೊದಲು ಯಾರ ವಿಚಾರಣೆ ನಡೆಸಬೇಕು ಎಂಬ ಮಾಹಿತಿಯನ್ನು ನ್ಯಾಯಾಲಯಕ್ಕೆ ಮತ್ತು ನಮಗೆ ಪ್ರಾಸಿಕ್ಯೂಷನ್​​ನವರು ನೀಡಬೇಕು. ಅದರ ಆಧಾರದ ಮೇಲೆ ಸಾಕ್ಷಿಗಳನ್ನು ಕರೆಯಲು ದಿನಾಂಕವನ್ನು ಕೋರ್ಟ್ ನಿಗದಿ ಮಾಡುತ್ತದೆ’ ಎಂದು ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಣೆಗೆ ಕುಂಕುಮ ಇಟ್ಟುಕೊಂಡು ಕೋರ್ಟ್ ವಿಚಾರಣೆಗೆ ದರ್ಶನ್ ಹಾಜರು; ಕಿಕ್ಕಿರಿದ ವಕೀಲರು

‘ಆರೋಪಿಗಳ ಸಮ್ಮುಖದಲ್ಲೇ ವಿಚಾರಣೆ ನಡೆಯಬೇಕಿರುವುದು. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕೋ ಅಥವಾ ಖುದ್ದಾಗಿ ಹಾಜರಾಗಬೇಕೋ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ನವೆಂಬರ್ 10ರಂದು ರೆಗ್ಯುಲರ್ ವಿಚಾರಣೆ ಇರುವುದರಿಂದ ಆರೋಪಿಗಳು ಅಂದು ಹಾಜರಾಗಬೇಕಾಗುತ್ತದೆ’ ಎಂದಿದ್ದಾರೆ ದರ್ಶನ ಪರ ವಕೀಲರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ