AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪ್ರಕರಣ: ಆರೋಪಿ 8ರ ಬಂಧನ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತವಾಗಿರುವ ಆರೋಪಿ ಸಂಖ್ಯೆ 8 ರವಿಯ ಬಂಧನವನ್ನು ರದ್ದು ಗೊಳಿಸುವಂತೆ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಪ್ರಕರಣ: ಆರೋಪಿ 8ರ ಬಂಧನ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ
ರೇಣುಕಾ-ದರ್ಶನ್
ಮಂಜುನಾಥ ಸಿ.
|

Updated on: Jun 22, 2024 | 7:59 PM

Share

ರೇಣುಕಾ ಸ್ವಾಮಿ (Renuka Swamy) ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ ಆರೋಪಿಗಳು ಸಹ ಈಗ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ವಾರದ ಹಿಂದೆಯೇ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿತ್ತು, ಪವಿತ್ರಾ ಗೌಡ ಸೇರಿ ಇನ್ನು ಕೆಲವರನ್ನು ಜೂನ್ 20 ರಂದು ನ್ಯಾಯಾಂಗ ಬಂಧನಕ್ಕೆ ಕಳಿಸಲಾಯ್ತು. ಇಂದು (ಜೂನ್ 22) ದರ್ಶನ್ ಸೇರಿದಂತೆ ಒಟ್ಟು ನಾಲ್ಕು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಯ್ತು. ಅಲ್ಲಿಗೆ ಪೊಲೀಸರ ತನಿಖೆಯ ಮೊದಲ ಮತ್ತು ಮಹತ್ವದ ಘಟ್ಟ ಮುಗಿದಿದೆ. ಇದರ ನಡುವೆ ವಕೀಲರ ಕೆಲಸ ಆರಂಭವಾದಂತಿದೆ. ಈಗಾಗಲೇ ಪ್ರಕರಣದ ಆರೋಪಿ ಸಂಖ್ಯೆ 8ರ ಬಂಧನ ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಆರೋಪಿ ಸಂಖ್ಯೆ 8 ರವಿ, ಚಿತ್ರದುರ್ಗದ ಕಾರು ಚಾಲಕನಾಗಿದ್ದು, ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದ ಕಾರನ್ನು ಓಡಿಸಿದ್ದು ಈತನೇ, ಈತನ ಟೊಯೊಟಾ ಇಟಿಯಾಸ್ ಕಾರಿನಲ್ಲಿಯೇ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆ ಶೆಡ್​ಗೆ ಕರೆತರಲಾಗಿತ್ತು. ಜೂನ್ 14 ರಂದು ಈತ ಚಿತ್ರದುರ್ಗದಲ್ಲಿ ಪೊಲೀಸರ ಮುಂದೆ ಶರಣಾಗಿದ್ದ. ಇದೀಗ ರವಿ ಬಂಧನದ ವಿರುದ್ಧ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಹಾಗೂ ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ಬಂಧನಕ್ಕೆ ಕಾರಣಗಳನ್ನು ತಿಳಿಸಿಲ್ಲ, ಆರೋಪಿಗೆ ಅಥವಾ ಆರೋಪಿಯ ಪರ ವಕೀಲರಿಗೆ ರಿಮ್ಯಾಂಡ್ ಅರ್ಜಿಯನ್ನು ಸಹ ನೀಡಿಲ್ಲ. ಈ ಪ್ರಕರಣದಲ್ಲಿ ತಾಂತ್ರಿಕ ದೋಷಗಳಿರುವ ಕಾರಣ ಈ ಬಂಧನವನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿ ಹೈಕೋರ್ಟ್​ಗೆ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ದರ್ಶನ್ ಪರ ವಕೀಲ ರಂಗನಾಥ್, ‘ಪ್ರಕರಣದಲ್ಲಿ ಆರೋಪಿ 8ರ ಬಂಧನದ ಬಗ್ಗೆ ಆರೋಪಿಗೆ ಮಾಹಿತಿ ನೀಡಿಲ್ಲ, ಸಾಕಷ್ಟು ಕಾನೂನುಗಳನ್ನು ಪಾಲಿಸಲಾಗಿಲ್ಲ. ಹಾಗಾಗಿ ನಾವು ಬಂಧನ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದೇವೆ. ಒಂದೊಮ್ಮೆ ರಿಟ್ ಅರ್ಜಿಯನ್ನು ಮಾನ್ಯ ಹೈಕೋರ್ಟ್ ಮಾನ್ಯ ಮಾಡಿದರೆ ಅದರಿಂದ ಪ್ರಕರಣದ ಇತರೆ ಆರೋಪಿಗಳಿಗೂ ಒಳಿತಾಗಲಿದೆ. ಅದರ ಪ್ರಭಾವ ಇತರೆ ಆರೋಪಿಗಳ ಬಂಧನದ ಮೇಲೆ ಸಹ ಬೀರಲಿದೆ’ ಎಂದಿದ್ದಾರೆ.

ರಿಟ್ ಅರ್ಜಿ ಸಲ್ಲಿಕೆಗೆ ನ್ಯೂಸ್​ಕ್ಲಿಕ್​ನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಪುನರ್ ಉಚ್ಛರಿಸಿದ ದರ್ಶನ್ ಪರ ವಕೀಲ, ಬಂಧನದ ವೇಳೆ ಸೂಕ್ತವಾಗಿ ಕಾನೂನು, ಸಾಂವಿಧಾನಿಕ ನಿಯಮ ಪಾಲಿಸದಿದ್ದರೆ ಆ ಬಂಧನವನ್ನು ರದ್ದು ಮಾಡಬಹುದು, ಈ ಪ್ರಕರಣದಲ್ಲಿಯೂ ಸಾಂವಿಧಾನಿಕ ನಿಯಮ ಪಾಲಿಸದೇ ಇರುವುದು ಗೋಚರವಾಗುತ್ತಿದೆ. ನಮ್ಮ ರಿಟ್ ಅರ್ಜಿಯು ಇನ್ನು ಎರಡು-ಮೂರು ದಿನಗಳಲ್ಲಿ ವಿಚಾರಣೆಗೆ ಬರಬಹುದು ನಮ್ಮ ಅರ್ಜಿಯನ್ನು ಹೈಕೋರ್ಟ್ ಪುರಸ್ಕೃತಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ