AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರೋಪಿಗಳ ವಿರುದ್ಧ ಪೂರ್ವಾಗ್ರಹಪೀಡಿತ ಕ್ರಮಗಳನ್ನು ಕೈಗೊಳ್ಳಲಾಗಿದೆ’; ಕೋರ್ಟ್​ನಲ್ಲಿ ವಕೀಲರ ವಾದ

ತನಿಖೆಯ ಲೋಪಗಳ ಬಗ್ಗೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಪ್ರಶ್ನೆಗಳನ್ನೆತ್ತಿದ್ದರು. ‘ಎಲ್ಲದಕ್ಕೂ ಉತ್ತರವಿದೆ’ ಎಂದು ಕೋರ್ಟ್​​ನಲ್ಲಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಈಗ ಅವರು ವಾದ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮೊದಲು ದರ್ಶನ್ ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಅವರ ಅರ್ಜಿ ವಿಚಾರಣೆ ನಡೆದಿದೆ.

‘ಆರೋಪಿಗಳ ವಿರುದ್ಧ ಪೂರ್ವಾಗ್ರಹಪೀಡಿತ ಕ್ರಮಗಳನ್ನು ಕೈಗೊಳ್ಳಲಾಗಿದೆ’; ಕೋರ್ಟ್​ನಲ್ಲಿ ವಕೀಲರ ವಾದ
ದರ್ಶನ್-ರೇಣುಕಾಸ್ವಾಮಿ
Ramesha M
| Updated By: ರಾಜೇಶ್ ದುಗ್ಗುಮನೆ|

Updated on: Oct 08, 2024 | 1:15 PM

Share

ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಅಕ್ಟೋಬರ್ 8) ನಡೆಯಲಿದೆ. ದರ್ಶನ್ ವಿರುದ್ಧ ಪೊಲೀಸರು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು. ಇದಕ್ಕೆ ಪೊಲೀಸರ ಪರ ಎಸ್​​ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಮಾಡುತ್ತಿದ್ದಾರೆ. ಅದಕ್ಕೂ ಮೊದಲು ದರ್ಶನ್ ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಅವರ ಅರ್ಜಿ ವಿಚಾರಣೆ ನಡೆದಿದೆ.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಾಗರಾಜು ಎ11 ಆದರೆ, ಕಾರು ಚಾಲಕ ಲಕ್ಷ್ಮಣ್ ಎ12 ಆಗಿದ್ದಾರೆ.  ಆರೋಪಿಗಳ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡನೆ ಮಾಡಿದ್ದಾರೆ. ‘ಹಿಂದೆಂದೂ ನಡೆಯದ ಘಟನೆಯಂತೆ ಬಿಂಬಿಸಲಾಗಿದೆ. ಘಟನೆ ಆಧರಿಸಿ ಸೆನ್ಸೇಷನ್ ಮಾಡುವ ಬದಲು ವ್ಯಕ್ತಿ ಆಧರಿಸಿ ಸೆನ್ಸೇಷನ್ ಮಾಡಲಾಗುತ್ತಿದೆ. ರಾಜಕಾರಣಿಗಳು, ನಟರ ಪ್ರಕರಣಗಳನ್ನು ಸೆನ್ಸೇಷನ್ ಮಾಡಲಾಗುತ್ತಿದೆ’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಮನೆ ಊಟದ ವಿಚಾರಕ್ಕೂ ಅನಗತ್ಯವಾಗಿ ಪ್ರಚಾರ ನೀಡಲಾಗಿದೆ. ಜೈಲಿನಲ್ಲಿನ ಫೋಟೋ ವೈರಲ್ ಆಗಿದ್ದಕ್ಕೆ ಖೈದಿಗಳನ್ನೇ ವರ್ಗಾಯಿಸಲಾಗಿದೆ. ಒಂದೇ ದಿನ‌ ಮೂರು ಎಫ್ಐಆರ್​​ಗಳನ್ನು ದಾಖಲಿಸಲಾಗಿದೆ. ಪೂರ್ವಾಗ್ರಹಪೀಡಿತ ಕ್ರಮಗಳನ್ನು ಆರೋಪಿಗಳ ವಿರುದ್ಧ ಕೈಗೊಳ್ಳಲಾಗಿದೆ’ ಎಂದು ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆಯ ಲೋಪಗಳ ಬಗ್ಗೆ ವಕೀಲ ಸಿ.ವಿ.ನಾಗೇಶ್ ಪ್ರಶ್ನೆಗಳನ್ನೆತ್ತಿದ್ದರು. ‘ಎಲ್ಲದಕ್ಕೂ ಉತ್ತರವಿದೆ’ ಎಂದು ಕೋರ್ಟ್​​ನಲ್ಲಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಅವರು ಕೂಡ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ? ಸಿಕ್ಕಿತು ಉತ್ತರ

ರೇಣುಕಾ ಸ್ವಾಮಿ ಕೊಲೆ ಜೂನ್​ನಲ್ಲಿ ನಡೆದಿತ್ತು. ಈ ಘಟನೆ ನಡೆದು ಇಂದಿಗೆ ಸರಿಯಾಗಿ ನಾಲ್ಕು ತಿಂಗಳು ಪೂರ್ಣಗೊಂಡಿದೆ. ಈವರೆಗೆ ದರ್ಶನ್​ಗೆ ಜಾಮೀನು ಪಡೆಯೋಕೆ ಸಾಧ್ಯವಾಗುತ್ತಿಲ್ಲ. ಅವರು ಪ್ರಕರಣದಿಂದ ಹೊರ ಬರಲು ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್