AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ದರ್ಶನ್​ಗೆ ಹೀರೋಯಿನ್​ ಆಗಿದ್ದ ನಟಿಗೆ ಈಗ ಸುದೀಪ್ ತಾಯಿ ಪಾತ್ರ?

Abhirami: 2003ರ ಆರಂಭದಲ್ಲಿ ಲಾಲಿ ಹಾಡು ಸಿನಿಮಾ ತೆರೆಗೆ ಬಂದಿತ್ತು. ಎಚ್​.ವಾಸು ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್​, ಅಭಿರಾಮಿ ಹಾಗೂ ಉಮಾಶ್ರೀ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Kotigobba 3: ದರ್ಶನ್​ಗೆ ಹೀರೋಯಿನ್​ ಆಗಿದ್ದ ನಟಿಗೆ ಈಗ ಸುದೀಪ್ ತಾಯಿ ಪಾತ್ರ?
ದರ್ಶನ್​-ಅಭಿರಾಮಿ-ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: May 16, 2021 | 6:50 AM

Share

ದರ್ಶನ್​ ನಟನೆಯ ‘ಲಾಲಿ ಹಾಡು’ ಚಿತ್ರದ ಮೂಲಕ ಅಭಿರಾಮಿ ಸ್ಯಾಂಡಲ್​ವುಡ್​​ಗೆ ಕಾಲಿಟ್ಟರು. ನಂತರ ಕೆಲವು ಕನ್ನಡದ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇತ್ತೀಚೆಗೆ ಅವರು ಪೋಷಕ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ತಾಯಿ ಆಗಿ ಅಭಿರಾಮಿ ಕಾಣಿಸಿಕೊಳ್ಳುತ್ತಿದ್ದರೆ. ಒಂದು ಕಾಲದಲ್ಲಿ ದರ್ಶನ್​ ಹೀರೋಯಿನ್​ ಆಗಿದ್ದ ಅವರು, ಈಗ ಕಿಚ್ಚನ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2003ರ ಆರಂಭದಲ್ಲಿ ಲಾಲಿ ಹಾಡು ಸಿನಿಮಾ ತೆರೆಗೆ ಬಂದಿತ್ತು. ಎಚ್​.ವಾಸು ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್​, ಅಭಿರಾಮಿ ಹಾಗೂ ಉಮಾಶ್ರೀ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ಉಪೇಂದ್ರ ನಟನೆಯ ರಕ್ತಕಣ್ಣೀರು, ಶ್ರೀರಾಮ್​, ಚೌಕ, ದಶರಥ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ಕೋಟಿಗೊಬ್ಬ ಚಿತ್ರಕ್ಕಾಗಿ ಮತ್ತೆ ಕನ್ನಡಕ್ಕೆ ಬಂದಿದ್ದಾರೆ.

ಕೋಟಿಗೊಬ್ಬ 3 ಸಿನಿಮಾ ಈಗಾಗಲೇ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ. ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಆರಂಭಗೊಂಡಿವೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮೇ ಅಥವಾ ಜೂನ್​ ತಿಂಗಳಲ್ಲಿ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದರಲ್ಲಿ ಸುದೀಪ್​ ತಾಯಿ ಆಗಿ ಅಭಿರಾಮಿ ಕಾಣಿಸಿಕೊಂಡಿದ್ದಾರೆ.

ಮಲಯಾಳಂ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ಅಭಿರಾಮಿ. ನಂತರ ತಮಿಳು, ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈಗ ಅವರು ಪೋಷಕರು ಪಾತ್ರದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕೋಟಿಗೊಬ್ಬ 3 ಚಿತ್ರಕ್ಕೆ ಶಿವ ಕಾರ್ತಿಕ್​ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್​ ಜತೆಗೆ ಮಡೋನಾ ಸೆಬಾಸ್ಟಿಯನ್​, ಶ್ರದ್ಧಾ ದಾಸ್​ ನಟಿಸಿದ್ದಾರೆ. ರವಿಶಂಕರ್​, ಅಫ್ತಾಬ್​ ಶಿವದಾಸಿನಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ತೂಗುದೀಪ ಶ್ರೀನಿವಾಸ್​, ದರ್ಶನ್​, ದಿನಕರ್​ ಬಗ್ಗೆ ಮೀನಾ ತೂಗುದೀಪ ಅಪರೂಪದ ಮಾತುಗಳು

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!