AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?
ಊರ್ವಶಿ
TV9 Web
| Edited By: |

Updated on:Jun 15, 2021 | 4:11 PM

Share

ಕೆಲವು ವಿಧದ ಮಣ್ಣನ್ನು ಬಳಕೆ ಮಾಡಿಕೊಂಡು ಸ್ನಾನ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು  ಅನೇಕರ ನಂಬಿಕೆ. ಈ ಬಗ್ಗೆ ಆಯುರ್ವೇದದಲ್ಲೂ ಕೂಡ ಹೇಳಲಾಗಿದೆ. ಇದೇ ಕಾರಣಕ್ಕೆ ಅನೇಕರು ಮಣ್ಣಿನ ಥೆರೆಪಿಗೆ ಒಳಗಾಗುತ್ತಾರೆ. ಇದನ್ನು ದರ್ಶನ್​ ನಟನೆಯ ‘ಮಿಸ್ಟರ್​ ಐರಾವತ’ ಚಿತ್ರದ ನಟಿ ಊರ್ವಶಿ ರೌಟೆಲ್ಲಾ ಕೂಡ ಇದನ್ನು ನಂಬಿದ್ದಾರೆ. ಅವರು ಈಗ ಮಣ್ಣಿನಿಂದ ಸ್ನಾನ ಮಾಡಿದ ಫೋಟೋ ಸಾಕಷ್ಟು ವೈರಲ್​ ಆಗಿದೆ.

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್​ಸ್ಟಾಗ್ರಾಂ ಪೋಸ್ಟ್​ ಹಾಕಿ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ.

ಮಣ್ಣು ನಿಜವಾಗಿಯೂ ಅದ್ಭುತವಾಗಬಹುದು. ಮಣ್ಣಿನ ಸ್ನಾನದಿಂದ ದೇಹದಲ್ಲಿರುವ ಕಲ್ಮಶಗಳೂ ನಾಶವಾಗುತ್ತವೆ. ಚರ್ಮವನ್ನು ಮೃದುಗೊಳ್ಳುತ್ತದೆ, ರಕ್ತ ಸಂಚಾರ ಸುಧಾರಿಸುತ್ತದೆ ಮತ್ತು ನೋವು ನಿವಾರಕವಾಗಿ ಇದು ಕೆಲಸ ಮಾಡುತ್ತದೆ ಎಂದು ಊರ್ವಶಿ ಬರೆದುಕೊಂಡಿದ್ದಾರೆ.

ಲಾಕ್​ಡೌನ್​ ಇದ್ದ ಕಾರಣ ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ಮನೆಯಲ್ಲೇ ಇದ್ದರು. ಈ ವೇಳೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದರು. ಊರ್ವಶಿ ಕೂಡ ಅಭಿಮಾನಿಗಳಿಗೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನು ಮಾಡಬೇಕು ಎಂಬ ಬಗ್ಗೆ ಟಿಪ್ಸ್​ ನೀಡಿದ್ದರು.

2013ರಲ್ಲಿ ತೆರೆಗೆ ಬಂದ ಹಿಂದಿಯ ‘ಸಿಂಗ್​ ಸಾಬ್​ ದಿ ಗ್ರೇಟ್’​ ಚಿತ್ರದಲ್ಲಿ ಊರ್ವಷಿ ನಟಿಸಿದ್ದರು. ಇದಾದ ನಂತರ 2015ರಲ್ಲಿ ತೆರೆಗೆ ಬಂದ ಕನ್ನಡದ ಮಿಸ್ಟರ್​. ಐರಾವತ ಚಿತ್ರದಲ್ಲಿ ದರ್ಶನ್​ಗೆ ಜತೆಯಾಗಿ ನಟಿಸಿದರು. ಎ.ಪಿ. ಅರ್ಜುನ್​ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಸದ್ಯ, ‘ಬ್ಲ್ಯಾಕ್​ ರೋಸ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಹಿಂದಿ, ತೆಲುಗು ಎರಡೂ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಹಿಂದಿ ಮತ್ತು ತಮಿಳಲ್ಲಿ ಒಟ್ಟಿಗೆ ಸಿದ್ಧವಾಗುತ್ತಿರುವ ಚಿತ್ರದಲ್ಲೂ ಊರ್ವಶಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Sanchari Vijay Death: ‘ಕನ್ನಡಿಗರು ಸಂಚಾರಿ ವಿಜಯ್​ ಅವರನ್ನು ಕಡೆಗಣಿಸಿದರು’; ನೋವಿನಿಂದ ಮಾತನಾಡಿದ್ದ ದರ್ಶನ್​

Published On - 3:06 pm, Tue, 15 June 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!