AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?
ಊರ್ವಶಿ
TV9 Web
| Edited By: |

Updated on:Jun 15, 2021 | 4:11 PM

Share

ಕೆಲವು ವಿಧದ ಮಣ್ಣನ್ನು ಬಳಕೆ ಮಾಡಿಕೊಂಡು ಸ್ನಾನ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು  ಅನೇಕರ ನಂಬಿಕೆ. ಈ ಬಗ್ಗೆ ಆಯುರ್ವೇದದಲ್ಲೂ ಕೂಡ ಹೇಳಲಾಗಿದೆ. ಇದೇ ಕಾರಣಕ್ಕೆ ಅನೇಕರು ಮಣ್ಣಿನ ಥೆರೆಪಿಗೆ ಒಳಗಾಗುತ್ತಾರೆ. ಇದನ್ನು ದರ್ಶನ್​ ನಟನೆಯ ‘ಮಿಸ್ಟರ್​ ಐರಾವತ’ ಚಿತ್ರದ ನಟಿ ಊರ್ವಶಿ ರೌಟೆಲ್ಲಾ ಕೂಡ ಇದನ್ನು ನಂಬಿದ್ದಾರೆ. ಅವರು ಈಗ ಮಣ್ಣಿನಿಂದ ಸ್ನಾನ ಮಾಡಿದ ಫೋಟೋ ಸಾಕಷ್ಟು ವೈರಲ್​ ಆಗಿದೆ.

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್​ಸ್ಟಾಗ್ರಾಂ ಪೋಸ್ಟ್​ ಹಾಕಿ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ.

ಮಣ್ಣು ನಿಜವಾಗಿಯೂ ಅದ್ಭುತವಾಗಬಹುದು. ಮಣ್ಣಿನ ಸ್ನಾನದಿಂದ ದೇಹದಲ್ಲಿರುವ ಕಲ್ಮಶಗಳೂ ನಾಶವಾಗುತ್ತವೆ. ಚರ್ಮವನ್ನು ಮೃದುಗೊಳ್ಳುತ್ತದೆ, ರಕ್ತ ಸಂಚಾರ ಸುಧಾರಿಸುತ್ತದೆ ಮತ್ತು ನೋವು ನಿವಾರಕವಾಗಿ ಇದು ಕೆಲಸ ಮಾಡುತ್ತದೆ ಎಂದು ಊರ್ವಶಿ ಬರೆದುಕೊಂಡಿದ್ದಾರೆ.

ಲಾಕ್​ಡೌನ್​ ಇದ್ದ ಕಾರಣ ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ಮನೆಯಲ್ಲೇ ಇದ್ದರು. ಈ ವೇಳೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದರು. ಊರ್ವಶಿ ಕೂಡ ಅಭಿಮಾನಿಗಳಿಗೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನು ಮಾಡಬೇಕು ಎಂಬ ಬಗ್ಗೆ ಟಿಪ್ಸ್​ ನೀಡಿದ್ದರು.

2013ರಲ್ಲಿ ತೆರೆಗೆ ಬಂದ ಹಿಂದಿಯ ‘ಸಿಂಗ್​ ಸಾಬ್​ ದಿ ಗ್ರೇಟ್’​ ಚಿತ್ರದಲ್ಲಿ ಊರ್ವಷಿ ನಟಿಸಿದ್ದರು. ಇದಾದ ನಂತರ 2015ರಲ್ಲಿ ತೆರೆಗೆ ಬಂದ ಕನ್ನಡದ ಮಿಸ್ಟರ್​. ಐರಾವತ ಚಿತ್ರದಲ್ಲಿ ದರ್ಶನ್​ಗೆ ಜತೆಯಾಗಿ ನಟಿಸಿದರು. ಎ.ಪಿ. ಅರ್ಜುನ್​ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಸದ್ಯ, ‘ಬ್ಲ್ಯಾಕ್​ ರೋಸ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಹಿಂದಿ, ತೆಲುಗು ಎರಡೂ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಹಿಂದಿ ಮತ್ತು ತಮಿಳಲ್ಲಿ ಒಟ್ಟಿಗೆ ಸಿದ್ಧವಾಗುತ್ತಿರುವ ಚಿತ್ರದಲ್ಲೂ ಊರ್ವಶಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Sanchari Vijay Death: ‘ಕನ್ನಡಿಗರು ಸಂಚಾರಿ ವಿಜಯ್​ ಅವರನ್ನು ಕಡೆಗಣಿಸಿದರು’; ನೋವಿನಿಂದ ಮಾತನಾಡಿದ್ದ ದರ್ಶನ್​

Published On - 3:06 pm, Tue, 15 June 21

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?