AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?
ಊರ್ವಶಿ
TV9 Web
| Edited By: |

Updated on:Jun 15, 2021 | 4:11 PM

Share

ಕೆಲವು ವಿಧದ ಮಣ್ಣನ್ನು ಬಳಕೆ ಮಾಡಿಕೊಂಡು ಸ್ನಾನ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು  ಅನೇಕರ ನಂಬಿಕೆ. ಈ ಬಗ್ಗೆ ಆಯುರ್ವೇದದಲ್ಲೂ ಕೂಡ ಹೇಳಲಾಗಿದೆ. ಇದೇ ಕಾರಣಕ್ಕೆ ಅನೇಕರು ಮಣ್ಣಿನ ಥೆರೆಪಿಗೆ ಒಳಗಾಗುತ್ತಾರೆ. ಇದನ್ನು ದರ್ಶನ್​ ನಟನೆಯ ‘ಮಿಸ್ಟರ್​ ಐರಾವತ’ ಚಿತ್ರದ ನಟಿ ಊರ್ವಶಿ ರೌಟೆಲ್ಲಾ ಕೂಡ ಇದನ್ನು ನಂಬಿದ್ದಾರೆ. ಅವರು ಈಗ ಮಣ್ಣಿನಿಂದ ಸ್ನಾನ ಮಾಡಿದ ಫೋಟೋ ಸಾಕಷ್ಟು ವೈರಲ್​ ಆಗಿದೆ.

ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್​ಸ್ಟಾಗ್ರಾಂ ಪೋಸ್ಟ್​ ಹಾಕಿ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ.

ಮಣ್ಣು ನಿಜವಾಗಿಯೂ ಅದ್ಭುತವಾಗಬಹುದು. ಮಣ್ಣಿನ ಸ್ನಾನದಿಂದ ದೇಹದಲ್ಲಿರುವ ಕಲ್ಮಶಗಳೂ ನಾಶವಾಗುತ್ತವೆ. ಚರ್ಮವನ್ನು ಮೃದುಗೊಳ್ಳುತ್ತದೆ, ರಕ್ತ ಸಂಚಾರ ಸುಧಾರಿಸುತ್ತದೆ ಮತ್ತು ನೋವು ನಿವಾರಕವಾಗಿ ಇದು ಕೆಲಸ ಮಾಡುತ್ತದೆ ಎಂದು ಊರ್ವಶಿ ಬರೆದುಕೊಂಡಿದ್ದಾರೆ.

ಲಾಕ್​ಡೌನ್​ ಇದ್ದ ಕಾರಣ ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ಮನೆಯಲ್ಲೇ ಇದ್ದರು. ಈ ವೇಳೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದರು. ಊರ್ವಶಿ ಕೂಡ ಅಭಿಮಾನಿಗಳಿಗೆ ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಏನು ಮಾಡಬೇಕು ಎಂಬ ಬಗ್ಗೆ ಟಿಪ್ಸ್​ ನೀಡಿದ್ದರು.

2013ರಲ್ಲಿ ತೆರೆಗೆ ಬಂದ ಹಿಂದಿಯ ‘ಸಿಂಗ್​ ಸಾಬ್​ ದಿ ಗ್ರೇಟ್’​ ಚಿತ್ರದಲ್ಲಿ ಊರ್ವಷಿ ನಟಿಸಿದ್ದರು. ಇದಾದ ನಂತರ 2015ರಲ್ಲಿ ತೆರೆಗೆ ಬಂದ ಕನ್ನಡದ ಮಿಸ್ಟರ್​. ಐರಾವತ ಚಿತ್ರದಲ್ಲಿ ದರ್ಶನ್​ಗೆ ಜತೆಯಾಗಿ ನಟಿಸಿದರು. ಎ.ಪಿ. ಅರ್ಜುನ್​ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಸದ್ಯ, ‘ಬ್ಲ್ಯಾಕ್​ ರೋಸ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಹಿಂದಿ, ತೆಲುಗು ಎರಡೂ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಹಿಂದಿ ಮತ್ತು ತಮಿಳಲ್ಲಿ ಒಟ್ಟಿಗೆ ಸಿದ್ಧವಾಗುತ್ತಿರುವ ಚಿತ್ರದಲ್ಲೂ ಊರ್ವಶಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Sanchari Vijay Death: ‘ಕನ್ನಡಿಗರು ಸಂಚಾರಿ ವಿಜಯ್​ ಅವರನ್ನು ಕಡೆಗಣಿಸಿದರು’; ನೋವಿನಿಂದ ಮಾತನಾಡಿದ್ದ ದರ್ಶನ್​

Published On - 3:06 pm, Tue, 15 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?