AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮತ್ತಷ್ಟು ಸಂಕಷ್ಟ; ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್?

ಸಾಮಾನ್ಯ ಕೋರ್ಟ್​ನಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡೋದಾದರೆ ಸಾಕಷ್ಟು ಸಮಯದ ಅಗತ್ಯತೆ ಇರುತ್ತದೆ. ಈ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರೋದು ಸೆಲೆಬ್ರಿಟಿ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್​ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

ದರ್ಶನ್​ಗೆ ಮತ್ತಷ್ಟು ಸಂಕಷ್ಟ; ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್?
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 07, 2024 | 10:28 AM

Share

ರೇಣುಕಾ ಸ್ವಾಮಿ ಕೊಲೆ ನಡೆದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ದರ್ಶನ್​, ಪವಿತ್ರಾ ಗೌಡ, ವಿನಯ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಶೀಘ್ರವೇ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಾಮಾನ್ಯ ಕೋರ್ಟ್​ನಲ್ಲಿ ವಿಚಾರಣೆ ನಡೆಸುವುದಾದರೆ ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್​ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟು ಎದುರಾಗುವ ಸಾಧ್ಯತೆ ಇದೆ.

ಫಾಸ್ಟ್​​ಟ್ರ್ಯಾಕ್ ನ್ಯಾಯಾಲಯಕ್ಕೆ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತ್ಯೇಕ ಕೋರ್ಟ್ ವಿಚಾರವಾಗಿ​ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ದರ್ಶನ್ ಬಳಿ ಹಣ ಇದೆ, ಆದರೆ ಬೌದ್ಧಿಕ ಪ್ರಜ್ಞೆ ಇಲ್ಲ’; ಮುಖ್ಯಮಂತ್ರಿ ಚಂದ್ರು ಬೇಸರ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನೂ ಮುಗಿದಿಲ್ಲ. ಪೊಲೀಸರು ಕೆಲವು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ತನಿಖೆ ಮುಗಿಸಿದ ಬಳಿಕ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಚಾರ್ಜ್​​ಶೀಟ್ ಸಲ್ಲಿಸಿದ ನಂತರ ಸ್ಪೆಷಲ್ ಕೋರ್ಟ್ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ ನಂತರ ಮತ್ತೆ ಸರ್ಕಾರದ ಎದುರು ಮನವಿ ಮಾಡಲು ಪೊಲೀಸರು ಮುಂಂದಾಗಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಚಾರ್ಜ್​ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ