AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮತ್ತಷ್ಟು ಸಂಕಷ್ಟ; ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್?

ಸಾಮಾನ್ಯ ಕೋರ್ಟ್​ನಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡೋದಾದರೆ ಸಾಕಷ್ಟು ಸಮಯದ ಅಗತ್ಯತೆ ಇರುತ್ತದೆ. ಈ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರೋದು ಸೆಲೆಬ್ರಿಟಿ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್​ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

ದರ್ಶನ್​ಗೆ ಮತ್ತಷ್ಟು ಸಂಕಷ್ಟ; ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್?
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 07, 2024 | 10:28 AM

Share

ರೇಣುಕಾ ಸ್ವಾಮಿ ಕೊಲೆ ನಡೆದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ದರ್ಶನ್​, ಪವಿತ್ರಾ ಗೌಡ, ವಿನಯ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಶೀಘ್ರವೇ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಾಮಾನ್ಯ ಕೋರ್ಟ್​ನಲ್ಲಿ ವಿಚಾರಣೆ ನಡೆಸುವುದಾದರೆ ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್​ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟು ಎದುರಾಗುವ ಸಾಧ್ಯತೆ ಇದೆ.

ಫಾಸ್ಟ್​​ಟ್ರ್ಯಾಕ್ ನ್ಯಾಯಾಲಯಕ್ಕೆ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತ್ಯೇಕ ಕೋರ್ಟ್ ವಿಚಾರವಾಗಿ​ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ದರ್ಶನ್ ಬಳಿ ಹಣ ಇದೆ, ಆದರೆ ಬೌದ್ಧಿಕ ಪ್ರಜ್ಞೆ ಇಲ್ಲ’; ಮುಖ್ಯಮಂತ್ರಿ ಚಂದ್ರು ಬೇಸರ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನೂ ಮುಗಿದಿಲ್ಲ. ಪೊಲೀಸರು ಕೆಲವು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ತನಿಖೆ ಮುಗಿಸಿದ ಬಳಿಕ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಚಾರ್ಜ್​​ಶೀಟ್ ಸಲ್ಲಿಸಿದ ನಂತರ ಸ್ಪೆಷಲ್ ಕೋರ್ಟ್ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ ನಂತರ ಮತ್ತೆ ಸರ್ಕಾರದ ಎದುರು ಮನವಿ ಮಾಡಲು ಪೊಲೀಸರು ಮುಂಂದಾಗಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಚಾರ್ಜ್​ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?