AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಚಿತ್ರಕ್ಕಾಗಿ ಕೈ ಜೋಡಿಸಿದ ದರ್ಶನ್​-ತರುಣ್; ‘ಕಾಟೇರ’ ಬಳಿಕ ಸಿಂಧೂರ ಲಕ್ಷ್ಮಣನ ಕಥೆ

ದರ್ಶನ್​ ಅವರು ಐತಿಹಾಸಿಕ ಸಿನಿಮಾದಲ್ಲಿ ನಟಿಸುತ್ತಾರೆ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬ. ‘D59’ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ. ಈ ಸಿನಿಮಾಗೆ ತುರುಣ್​ ಸುಧೀರ್​ ನಿರ್ದೇಶನ ಮಾಡಲಿದ್ದಾರೆ. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣ ಮಾಡಲಿದ್ದಾರೆ. ವಿ. ಹರಿಕೃಷ್ಣ ಅವರ ಸಂಗೀತ ನಿರ್ದಶನ ಈ ಚಿತ್ರಕ್ಕೆ ಇರಲಿದೆ.

ಐತಿಹಾಸಿಕ ಚಿತ್ರಕ್ಕಾಗಿ ಕೈ ಜೋಡಿಸಿದ ದರ್ಶನ್​-ತರುಣ್; ‘ಕಾಟೇರ’ ಬಳಿಕ ಸಿಂಧೂರ ಲಕ್ಷ್ಮಣನ ಕಥೆ
ದರ್ಶನ್​
ಮದನ್​ ಕುಮಾರ್​
|

Updated on: Feb 16, 2024 | 11:03 AM

Share

ನಟ ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರ ಹುಟ್ಟುಹಬ್ಬವನ್ನು (Darshan Birthday) ಅಭಿಮಾನಿಗಳು ಇಂದು (ಫೆಬ್ರವರಿ 16) ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅವರ ನಿವಾಸದ ಬಳಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ದರ್ಶನ್​ಗೆ ಶುಭಾಶಯ ತಿಳಿಸುತ್ತಿದ್ದಾರೆ. ಇದೇ ಖುಷಿಯಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಮತ್ತು ದರ್ಶನ್​ ಅವರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ. ಈ ಸಿನಿಮಾವನ್ನು ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣ ಮಾಡಲಿದ್ದಾರೆ. ದರ್ಶನ್​ (Darshan) ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ದರ್ಶನ್​ ಅವರಿಗೆ ಐತಿಹಾಸಿಕ ಮತ್ತು ಪೌರಾಣಿಕ ಸಿನಿಮಾ ಎಂದರೆ ವಿಶೇಷ ಆಸಕ್ತಿ. ಹಾಗಾಗಿ ಅವರು ಅಂತಹ ಸ್ಕ್ರಿಪ್ಟ್​ಗಳಿಗೆ ಮೊದಲ ಆದ್ಯತೆ ನೀಡುತ್ತಾರೆ. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ. ಹೌದು, ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ ಎಂಬುದು ವಿಶೇಷ. ಹಾಗಾಗಿ ಅಭಿಮಾನಿಗಳ ಮನದಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ತರುಣ್​ ಸುಧೀರ್ ಎಕ್ಸ್ (ಟ್ವಿಟರ್​) ಪೋಸ್ಟ್​:

‘ರಾಬರ್ಟ್​’ ಮತ್ತು ‘ಕಾಟೇರ’ ಸಿನಿಮಾಗಳಲ್ಲಿ ತರುಣ್​ ಸುಧೀರ್​ ಮತ್ತು ದರ್ಶನ್​ ಅವರ ಕಾಂಬಿನೇಷನ್​ ಜನಮೆಚ್ಚುಗೆ ಗಳಿಸಿತು. ಈಗ ಅವರು ಮೂರನೇ ಬಾರಿಗೆ ಕೈ ಜೋಡಿಸುತ್ತಿರುವುದರಿಂದ ಹೈಪ್​ ಹೆಚ್ಚಾಗಲಿದೆ. ಈಗಾಗಲೇ ತರುಣ್​ ಸುಧೀರ್​ ಅವರು ಈ ಸಿನಿಮಾದ ಸ್ಕ್ರಿಪ್ಟ್​ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ. ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ದರ್ಶನ್ ಮನೆ ಎದುರು ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ..

‘ಸದ್ಯಕ್ಕೆ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರಲಿದೆ’ ಎಂದು ನಿರ್ಮಾಪಕಿ ಶೈಲಜಾ ನಾಗ್​ ಅವರು ಹೇಳಿದ್ದಾರೆ. ಈ ಮೊದಲು ದರ್ಶನ್​ ನಟಿಸಿದ್ದ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳಿಗೆ ‘ಮೀಡಿಯಾ ಹೌಸ್​ ಸ್ಟುಡಿಯೋ’ ಸಂಸ್ಥೆಯ ಮೂಲಕ ಶೈಲಜಾ ನಾಗ್​ ಮತ್ತು ಬಿ. ಸುರೇಶ್​ ಅವರು ಬಂಡವಾಳ ಹೂಡಿದ್ದರು. ಈಗ ಮೂರನೇ ಬಾರಿಗೆ ಅವರು ದರ್ಶನ್​ ಅಭಿನಯದ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ