AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​

ಪರಪ್ಪನ ಅಗ್ರಹಾರದ ರೀತಿ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಪ್ರಭಾವ ನಡೆಯುತ್ತಿಲ್ಲ. ಚಾರ್ಜ್​ಶೀಟ್​ ಸಲ್ಲಿಕೆ ಬಗ್ಗೆ ತಿಳಿದುಕೊಳ್ಳಲು ದರ್ಶನ್​ ಬಯಸಿದ್ದಾರೆ. ಅವಶ್ಯಕತೆ ಇದ್ದರೆ ಟಿವಿ ನೀಡುವುದಾಗಿ ಸಿಬ್ಬಂದಿ ಹೇಳಿದ್ದಾರೆ. ಆದರೆ ಟಿವಿ ಸಹವಾಸ ಬೇಡ ಎಂಬ ರೀತಿಯಲ್ಲಿ ದರ್ಶನ್​ ಸೈಲೆಂಟ್​ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಅವರು ಹೈರಾಣಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 03, 2024 | 3:14 PM

Share

ನಟ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದರಿಂದ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಎಲ್ಲರ ಕಣ್ಣು ಈ ಹೈಪ್ರೊಫೈಲ್​ ಕೇಸ್​ ಮೇಲೆ ಇದೆ. ಇತ್ತ, ಬೆಂಗಳೂರು ಪೊಲೀಸರು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್​ ಸಲ್ಲಿಸುವ ತಯಾರಿ ನಡೆಸಿದ್ದಾರೆ. ಹಾಗಾಗಿ ದರ್ಶನ್​ಗೆ ಚಾರ್ಜ್​ಶೀಟ್​ ಬಗ್ಗೆ ಮಾಹಿತಿ ಬೇಕಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯ ವಿಚಾರದ ಬಗ್ಗೆ ಪದೇ ಪದೇ ಸಿಬ್ಬಂದಿ ಬಳಿ ದರ್ಶನ್​ ವಿಚಾರಿಸಿದ್ದಾರೆ ಎನ್ನಲಾಗಿದೆ.

ಟಿವಿ ಬೇಕು ಎನ್ನುವ ಬಗ್ಗೆ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಬಳ್ಳಾರಿ ಜೈಲಿನ ಸಿಬ್ಬಂದಿಯು ದರ್ಶನ್​ಗೆ ಸಲಹೆ ನೀಡಿದ್ದಾರೆ. ಟಿವಿಯ ಅವಶ್ಯಕತೆ ಇದೆ ಎಂದಾದರೆ ನೀಡಲಾಗುತ್ತದೆ ಎಂದು ಸಿಬ್ಬಂದಿ ಹೇಳಿದ್ದಾರೆ. ಹೈ-ಸೆಕ್ಯುರಿಟಿ ಸೆಲ್​ಗೆ ಊಟ ನೀಡುವ ವೇಳೆ ಈ ಮಾತುಕತೆ ನಡೆದಿದೆ. ಅಚ್ಚರಿ ಏನೆಂದರೆ, ಟಿವಿ ವಿಚಾರ ತೆಗೆಯುತ್ತಿದಂತೆಯೇ ಅದರ ಸಹವಾಸವೇ ಬೇಡ ಎನ್ನುವ ರೀತಿ ದರ್ಶನ್​ ಸೈಲೆಂಟ್ ಆದರು ಎಂಬ ಮಾಹಿತಿ ಸಿಕ್ಕಿದೆ.

ದರ್ಶನ್​ ಅವರು ಸದ್ಯಕ್ಕೆ ಟಿವಿ ಬೇಕು ಎಂಬ ಬೇಡಿಕೆ ಇಟ್ಟಿಲ್ಲ. ಯೋಗ, ವಾಕ್ ಹಾಗೂ ಪುಸ್ತಕದ ಕಡೆಗೆ ಮಾತ್ರ ಅವರು ಗಮನ ಹರಿಸುತ್ತಿದ್ದಾರೆ. ದರ್ಶನ್ ಇರುವ ಅಕ್ಕಪಕ್ಕದ ಸೆಲ್​ಗಳು ಖಾಲಿ ಆಗಿವೆ. ಆ ಕಾರಣದಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅಕ್ಷರಶಃ ಏಕಾಂಗಿ ಆಗಿದ್ದಾರೆ. ಬಳ್ಳಾರಿಗೆ ಶಿಫ್ಟ್ ಆದ ಬಳಿಕ ದರ್ಶನ್​ ಮುಖ ಬಾಡಿದೆ.

ಇದನ್ನೂ ಓದಿ: ‘ನನಗೆ ಅದು ಸಂಬಂಧ ಇಲ್ಲ’: ದರ್ಶನ್​ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್​ ನೇರ ಮಾತು

ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ದರ್ಶನ್​ ಹಲವು ಸೌಕರ್ಯ ಪಡೆದುಕೊಂಡಿದ್ದರು. ಮೊಬೈಲ್​, ಸಿಗರೇಟ್​, ಚೇರ್​, ರೌಡಿಶೀಟರ್​ಗಳ ಜೊತೆ ಹರಟೆ.. ಹೀಗೆ ಹಲವು ಅಕ್ರಮಗಳು ನಡೆದಿದ್ದವು. ಆದರೆ ಬಳ್ಳಾರಿ ಜೈಲಿನಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಸಿಗುತ್ತಿಲ್ಲ. ಮೆಡಿಕಲ್ ರಿಪೋರ್ಟ್ ಇದ್ದರೂ ಕೂಡ ಸರ್ಜಿಕಲ್ ಚೇರ್ ಪಡೆಯಲು ದರ್ಶನ್​ ಮೂರು ದಿನ ಪರದಾಡಬೇಕಾಯಿತು. ಬಳ್ಳಾರಿ ಜೈಲಿನ ಕಠಿಣತೆಗೆ ದರ್ಶನ್ ಹೈರಾಣಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!