AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​

ಪರಪ್ಪನ ಅಗ್ರಹಾರದ ರೀತಿ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಪ್ರಭಾವ ನಡೆಯುತ್ತಿಲ್ಲ. ಚಾರ್ಜ್​ಶೀಟ್​ ಸಲ್ಲಿಕೆ ಬಗ್ಗೆ ತಿಳಿದುಕೊಳ್ಳಲು ದರ್ಶನ್​ ಬಯಸಿದ್ದಾರೆ. ಅವಶ್ಯಕತೆ ಇದ್ದರೆ ಟಿವಿ ನೀಡುವುದಾಗಿ ಸಿಬ್ಬಂದಿ ಹೇಳಿದ್ದಾರೆ. ಆದರೆ ಟಿವಿ ಸಹವಾಸ ಬೇಡ ಎಂಬ ರೀತಿಯಲ್ಲಿ ದರ್ಶನ್​ ಸೈಲೆಂಟ್​ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಅವರು ಹೈರಾಣಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​
ದರ್ಶನ್
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಮದನ್​ ಕುಮಾರ್​|

Updated on: Sep 03, 2024 | 3:14 PM

Share

ನಟ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದರಿಂದ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಎಲ್ಲರ ಕಣ್ಣು ಈ ಹೈಪ್ರೊಫೈಲ್​ ಕೇಸ್​ ಮೇಲೆ ಇದೆ. ಇತ್ತ, ಬೆಂಗಳೂರು ಪೊಲೀಸರು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್​ ಸಲ್ಲಿಸುವ ತಯಾರಿ ನಡೆಸಿದ್ದಾರೆ. ಹಾಗಾಗಿ ದರ್ಶನ್​ಗೆ ಚಾರ್ಜ್​ಶೀಟ್​ ಬಗ್ಗೆ ಮಾಹಿತಿ ಬೇಕಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯ ವಿಚಾರದ ಬಗ್ಗೆ ಪದೇ ಪದೇ ಸಿಬ್ಬಂದಿ ಬಳಿ ದರ್ಶನ್​ ವಿಚಾರಿಸಿದ್ದಾರೆ ಎನ್ನಲಾಗಿದೆ.

ಟಿವಿ ಬೇಕು ಎನ್ನುವ ಬಗ್ಗೆ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಬಳ್ಳಾರಿ ಜೈಲಿನ ಸಿಬ್ಬಂದಿಯು ದರ್ಶನ್​ಗೆ ಸಲಹೆ ನೀಡಿದ್ದಾರೆ. ಟಿವಿಯ ಅವಶ್ಯಕತೆ ಇದೆ ಎಂದಾದರೆ ನೀಡಲಾಗುತ್ತದೆ ಎಂದು ಸಿಬ್ಬಂದಿ ಹೇಳಿದ್ದಾರೆ. ಹೈ-ಸೆಕ್ಯುರಿಟಿ ಸೆಲ್​ಗೆ ಊಟ ನೀಡುವ ವೇಳೆ ಈ ಮಾತುಕತೆ ನಡೆದಿದೆ. ಅಚ್ಚರಿ ಏನೆಂದರೆ, ಟಿವಿ ವಿಚಾರ ತೆಗೆಯುತ್ತಿದಂತೆಯೇ ಅದರ ಸಹವಾಸವೇ ಬೇಡ ಎನ್ನುವ ರೀತಿ ದರ್ಶನ್​ ಸೈಲೆಂಟ್ ಆದರು ಎಂಬ ಮಾಹಿತಿ ಸಿಕ್ಕಿದೆ.

ದರ್ಶನ್​ ಅವರು ಸದ್ಯಕ್ಕೆ ಟಿವಿ ಬೇಕು ಎಂಬ ಬೇಡಿಕೆ ಇಟ್ಟಿಲ್ಲ. ಯೋಗ, ವಾಕ್ ಹಾಗೂ ಪುಸ್ತಕದ ಕಡೆಗೆ ಮಾತ್ರ ಅವರು ಗಮನ ಹರಿಸುತ್ತಿದ್ದಾರೆ. ದರ್ಶನ್ ಇರುವ ಅಕ್ಕಪಕ್ಕದ ಸೆಲ್​ಗಳು ಖಾಲಿ ಆಗಿವೆ. ಆ ಕಾರಣದಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅಕ್ಷರಶಃ ಏಕಾಂಗಿ ಆಗಿದ್ದಾರೆ. ಬಳ್ಳಾರಿಗೆ ಶಿಫ್ಟ್ ಆದ ಬಳಿಕ ದರ್ಶನ್​ ಮುಖ ಬಾಡಿದೆ.

ಇದನ್ನೂ ಓದಿ: ‘ನನಗೆ ಅದು ಸಂಬಂಧ ಇಲ್ಲ’: ದರ್ಶನ್​ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್​ ನೇರ ಮಾತು

ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ದರ್ಶನ್​ ಹಲವು ಸೌಕರ್ಯ ಪಡೆದುಕೊಂಡಿದ್ದರು. ಮೊಬೈಲ್​, ಸಿಗರೇಟ್​, ಚೇರ್​, ರೌಡಿಶೀಟರ್​ಗಳ ಜೊತೆ ಹರಟೆ.. ಹೀಗೆ ಹಲವು ಅಕ್ರಮಗಳು ನಡೆದಿದ್ದವು. ಆದರೆ ಬಳ್ಳಾರಿ ಜೈಲಿನಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಸಿಗುತ್ತಿಲ್ಲ. ಮೆಡಿಕಲ್ ರಿಪೋರ್ಟ್ ಇದ್ದರೂ ಕೂಡ ಸರ್ಜಿಕಲ್ ಚೇರ್ ಪಡೆಯಲು ದರ್ಶನ್​ ಮೂರು ದಿನ ಪರದಾಡಬೇಕಾಯಿತು. ಬಳ್ಳಾರಿ ಜೈಲಿನ ಕಠಿಣತೆಗೆ ದರ್ಶನ್ ಹೈರಾಣಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ