AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​

ಪರಪ್ಪನ ಅಗ್ರಹಾರದ ರೀತಿ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಪ್ರಭಾವ ನಡೆಯುತ್ತಿಲ್ಲ. ಚಾರ್ಜ್​ಶೀಟ್​ ಸಲ್ಲಿಕೆ ಬಗ್ಗೆ ತಿಳಿದುಕೊಳ್ಳಲು ದರ್ಶನ್​ ಬಯಸಿದ್ದಾರೆ. ಅವಶ್ಯಕತೆ ಇದ್ದರೆ ಟಿವಿ ನೀಡುವುದಾಗಿ ಸಿಬ್ಬಂದಿ ಹೇಳಿದ್ದಾರೆ. ಆದರೆ ಟಿವಿ ಸಹವಾಸ ಬೇಡ ಎಂಬ ರೀತಿಯಲ್ಲಿ ದರ್ಶನ್​ ಸೈಲೆಂಟ್​ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಅವರು ಹೈರಾಣಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎನ್ನುವ ರೀತಿ ಸೈಲೆಂಟ್ ಆದ ದರ್ಶನ್​
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 03, 2024 | 3:14 PM

Share

ನಟ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದರಿಂದ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಎಲ್ಲರ ಕಣ್ಣು ಈ ಹೈಪ್ರೊಫೈಲ್​ ಕೇಸ್​ ಮೇಲೆ ಇದೆ. ಇತ್ತ, ಬೆಂಗಳೂರು ಪೊಲೀಸರು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್​ ಸಲ್ಲಿಸುವ ತಯಾರಿ ನಡೆಸಿದ್ದಾರೆ. ಹಾಗಾಗಿ ದರ್ಶನ್​ಗೆ ಚಾರ್ಜ್​ಶೀಟ್​ ಬಗ್ಗೆ ಮಾಹಿತಿ ಬೇಕಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯ ವಿಚಾರದ ಬಗ್ಗೆ ಪದೇ ಪದೇ ಸಿಬ್ಬಂದಿ ಬಳಿ ದರ್ಶನ್​ ವಿಚಾರಿಸಿದ್ದಾರೆ ಎನ್ನಲಾಗಿದೆ.

ಟಿವಿ ಬೇಕು ಎನ್ನುವ ಬಗ್ಗೆ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಬಳ್ಳಾರಿ ಜೈಲಿನ ಸಿಬ್ಬಂದಿಯು ದರ್ಶನ್​ಗೆ ಸಲಹೆ ನೀಡಿದ್ದಾರೆ. ಟಿವಿಯ ಅವಶ್ಯಕತೆ ಇದೆ ಎಂದಾದರೆ ನೀಡಲಾಗುತ್ತದೆ ಎಂದು ಸಿಬ್ಬಂದಿ ಹೇಳಿದ್ದಾರೆ. ಹೈ-ಸೆಕ್ಯುರಿಟಿ ಸೆಲ್​ಗೆ ಊಟ ನೀಡುವ ವೇಳೆ ಈ ಮಾತುಕತೆ ನಡೆದಿದೆ. ಅಚ್ಚರಿ ಏನೆಂದರೆ, ಟಿವಿ ವಿಚಾರ ತೆಗೆಯುತ್ತಿದಂತೆಯೇ ಅದರ ಸಹವಾಸವೇ ಬೇಡ ಎನ್ನುವ ರೀತಿ ದರ್ಶನ್​ ಸೈಲೆಂಟ್ ಆದರು ಎಂಬ ಮಾಹಿತಿ ಸಿಕ್ಕಿದೆ.

ದರ್ಶನ್​ ಅವರು ಸದ್ಯಕ್ಕೆ ಟಿವಿ ಬೇಕು ಎಂಬ ಬೇಡಿಕೆ ಇಟ್ಟಿಲ್ಲ. ಯೋಗ, ವಾಕ್ ಹಾಗೂ ಪುಸ್ತಕದ ಕಡೆಗೆ ಮಾತ್ರ ಅವರು ಗಮನ ಹರಿಸುತ್ತಿದ್ದಾರೆ. ದರ್ಶನ್ ಇರುವ ಅಕ್ಕಪಕ್ಕದ ಸೆಲ್​ಗಳು ಖಾಲಿ ಆಗಿವೆ. ಆ ಕಾರಣದಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅಕ್ಷರಶಃ ಏಕಾಂಗಿ ಆಗಿದ್ದಾರೆ. ಬಳ್ಳಾರಿಗೆ ಶಿಫ್ಟ್ ಆದ ಬಳಿಕ ದರ್ಶನ್​ ಮುಖ ಬಾಡಿದೆ.

ಇದನ್ನೂ ಓದಿ: ‘ನನಗೆ ಅದು ಸಂಬಂಧ ಇಲ್ಲ’: ದರ್ಶನ್​ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್​ ನೇರ ಮಾತು

ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ದರ್ಶನ್​ ಹಲವು ಸೌಕರ್ಯ ಪಡೆದುಕೊಂಡಿದ್ದರು. ಮೊಬೈಲ್​, ಸಿಗರೇಟ್​, ಚೇರ್​, ರೌಡಿಶೀಟರ್​ಗಳ ಜೊತೆ ಹರಟೆ.. ಹೀಗೆ ಹಲವು ಅಕ್ರಮಗಳು ನಡೆದಿದ್ದವು. ಆದರೆ ಬಳ್ಳಾರಿ ಜೈಲಿನಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಸಿಗುತ್ತಿಲ್ಲ. ಮೆಡಿಕಲ್ ರಿಪೋರ್ಟ್ ಇದ್ದರೂ ಕೂಡ ಸರ್ಜಿಕಲ್ ಚೇರ್ ಪಡೆಯಲು ದರ್ಶನ್​ ಮೂರು ದಿನ ಪರದಾಡಬೇಕಾಯಿತು. ಬಳ್ಳಾರಿ ಜೈಲಿನ ಕಠಿಣತೆಗೆ ದರ್ಶನ್ ಹೈರಾಣಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್