AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಆರ್​ಸಿಬಿ ಮ್ಯಾಚ್​ಗೂ ಮುನ್ನ ದರ್ಶನ್​ ವಿಡಿಯೋ ವೈರಲ್​; ನೀವು ಇದನ್ನು ನೋಡಲೇಬೇಕು

ದರ್ಶನ್​ ಕ್ರಿಕೆಟ್​ ಪ್ರಿಯ. ಅವರು ಸಮಯ ಸಿಕ್ಕಾಗೆಲ್ಲ ಗೆಳೆಯರ ಜತೆ ಕ್ರಿಕೆಟ್​ ಆಡುತ್ತಾರೆ. ಇತ್ತೀಚೆಗೆ ಅವರು ಅಭಿಷೇಕ್​ ಅಂಬರೀಶ್​ ಜತೆ ಕ್ರಿಕೆಟ್​ ಆಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

Darshan: ಆರ್​ಸಿಬಿ ಮ್ಯಾಚ್​ಗೂ ಮುನ್ನ ದರ್ಶನ್​ ವಿಡಿಯೋ ವೈರಲ್​; ನೀವು ಇದನ್ನು ನೋಡಲೇಬೇಕು
ಆರ್​​ಸಿಬಿ ಟೀಂ-ದರ್ಶನ್​
ರಾಜೇಶ್ ದುಗ್ಗುಮನೆ
|

Updated on:Apr 08, 2021 | 7:41 PM

Share

ಶುಕ್ರವಾರ (ಏಪ್ರಿಲ್​ 8) ಐಪಿಎಲ್​ ಸೀಸನ್​ 14ರ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಚೆನ್ನೈನ ಚೆಪಾಕ್​ ಸ್ಟೇಡಿಯಂನಲ್ಲಿ ವಿರಾಟ್​ ಕೊಹ್ಲಿ ನಾಯಕತ್ವದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ರೋಹಿತ್​ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​ ಮುಖಾಮುಖಿ ಆಗಲಿವೆ. ಈ ಮ್ಯಾಚ್​ಗೂ ಮುನ್ನ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರ ಹಳೆಯ ವಿಡಿಯೋ ಒಂದು ವೈರಲ್​ ಆಗಿದೆ. ದರ್ಶನ್​ ಕ್ರಿಕೆಟ್​ ಪ್ರಿಯ. ಅವರು ಸಮಯ ಸಿಕ್ಕಾಗೆಲ್ಲ ಗೆಳೆಯರ ಜತೆ ಕ್ರಿಕೆಟ್​ ಆಡುತ್ತಾರೆ. ಇತ್ತೀಚೆಗೆ ಅವರು ಅಭಿಷೇಕ್​ ಅಂಬರೀಶ್​ ಜತೆ ಕ್ರಿಕೆಟ್​ ಆಡಿದ್ದ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಕ್ರಿಕೆಟ್​ಗೆ ಸಂಬಂಧಿಸಿದಂತೆ ಅವರ ಹಳೆಯ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ಐಪಿಎಲ್​ ಎಂದಾಕ್ಷಣ ತಲೆ ಎತ್ತೋದು ಬೆಟ್ಟಿಂಗ್​. ಅನೇಕರು ಬೆಟ್ಟಿಂಗ್​ ದಂಧೆಯಲ್ಲಿ ಸಿಲುಕಿ ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದಾರೆ, ಮನೆ ಮಾರಾಟ ಮಾಡಿ ಬೀದಿಗೆ ಬಂದಿದ್ದಾರೆ. ಬೆಟ್ಟಿಂಗ್​ ಮಾಡದೆ, ನಿಜವಾದ ಕ್ರೀಡಾಭಿಮಾನಿಯಾಗಿ ಮ್ಯಾಚ್​ ನೋಡಬೇಕು ಎನ್ನುವುದು ದರ್ಶನ್​ ಆಶಯ. ಹೀಗಾಗಿ, ಬೆಟ್ಟಿಂಗ್​ಗೆ ಇಳಿಯಬೇಡಿ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಐಪಿಎಲ್​ ಸಮಯವಾದ್ದರಿಂದ ಈಗ ಈ ವಿಡಿಯೋ ಮತ್ತೆ ವೈರಲ್​ ಆಗಿದೆ.

ಐಪಿಎಲ್​ ಆರಂಭವಾದ ತಕ್ಷಣ ಐಪಿಎಲ್​ ಮ್ಯಾಚ್​ ನೋಡೋ ಬದಲು ಅನೇಕರು ಬೆಟ್ಟಿಂಗ್​ ಮಾಡುತ್ತಾ ಕೂತಿರುತ್ತಾರೆ. ಐಪಿಎಲ್​ ಮ್ಯಾಚ್​ನ ಕೇವಲ ಮ್ಯಾಚ್​ ರೀತಿಯಲ್ಲಿ ನೋಡಿ. ಮೈದಾನದಲ್ಲಿ ಆಟಗಾರರು ಕಷ್ಟಪಟ್ಟು ಆಡುತ್ತಿರುತ್ತಾರೆ. ಮ್ಯಾಚ್​ ಮೇಲೆ ಬೆಟ್ಟಿಂಗ್​ ಮಾಡಿ ನೀವು ನಿಮ್ಮ ಲೈಫ್​​ನ ಹಾಳು ಮಾಡಿಕೊಳ್ಳಬೇಡಿ ಎಂದು ದರ್ಶನ್​ ಹೇಳಿದ್ದಾರೆ.

ದರ್ಶನ್​ ಸದ್ಯ, ರಾಬರ್ಟ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ರಿಲೀಸ್​ ಆದ 20 ದಿನಕ್ಕೆ ರಾಬರ್ಟ್​ ಸಿನಿಮಾ ಬರೋಬ್ಬರಿ 100 ಕೋಟಿ ಗಳಿಕೆ ಮಾಡಿತ್ತು. ಈ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರ ಹೇಗಿರಲಿದೆ ಎನ್ನುವ ಕುತೂಹಲ ಕೂಡ ಮೂಡಿದೆ.

ಇದನ್ನೂ ಓದಿ:100 ಕೋಟಿ ರೂ. ಬಾಚಿಕೊಂಡ ರಾಬರ್ಟ್​! ಸ್ಯಾಂಡಲ್​ವುಡ್​ನಲ್ಲಿ ದರ್ಶನ್​ ಹೊಸ ದಾಖಲೆ 

Roberrt: ರಾಬರ್ಟ್​ ಎತ್ತಂಗಡಿ ಮಾಡಿಸಲು ಬಂದ ಪವನ್​ ಕಲ್ಯಾಣ್​ ಸಿನಿಮಾಗೆ ದರ್ಶನ್​ ಫ್ಯಾನ್ಸ್​ ಕೊಟ್ರು ಸಖತ್​ ಡಿಚ್ಚಿ!

Published On - 7:41 pm, Thu, 8 April 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!