AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan on PAN India Cinema: ನಾವು ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್​ ಇಂಡಿಯಾಗಾಗಿ ಅಲ್ಲ; ದರ್ಶನ್ ಟಾಂಗ್ ಕೊಟ್ರಾ?

ದರ್ಶನ್ ಅವರು ತಮ್ಮ ಆಪ್ತ ಧನ್ವೀರ್ ನಟನೆಯ ‘ವಾಮನ’ ಚಿತ್ರವನ್ನು ವೀಕ್ಷಿಸಿ ಪ್ರಶಂಸಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವುದಿಲ್ಲ, ಕರ್ನಾಟಕದ ಜನರಿಗಾಗಿ ಸಿನಿಮಾ ಮಾಡುತ್ತೇವೆ’ ಎಂದು ಹೇಳಿದ್ದಾರೆ. ಈ ಹೇಳಿಕೆಯು ಕನ್ನಡ ಚಿತ್ರರಂಗದಲ್ಲಿ ಚರ್ಚೆಗೆ ಕಾರಣವಾಗಿದೆ .

Darshan on PAN India Cinema: ನಾವು ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್​ ಇಂಡಿಯಾಗಾಗಿ ಅಲ್ಲ; ದರ್ಶನ್ ಟಾಂಗ್ ಕೊಟ್ರಾ?
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on:Apr 10, 2025 | 9:12 AM

Share

ನಟ ದರ್ಶನ್ ಆಪ್ತ ಧನ್ವೀರ್ ನಟನೆಯ ‘ವಾಮನ’ ಸಿನಿಮಾ (Vamana Movie) ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 9ರಂದು ದರ್ಶನ್ ಅವರಿಗಾಗಿ ಈ ಚಿತ್ರದ ವಿಶೇಷ ಶೋನ ಆಯೋಜನೆ ಮಾಡಲಾಗಿತ್ತು. ದರ್ಶನ್ ಅವರು ಈ ಚಿತ್ರ ವೀಕ್ಷಿಸಿ ಹೊಗಳಿದ್ದಾರೆ. ಆ ಬಳಿಕ ಮಾತನಾಡಿ, ‘ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತಿಲ್ಲ, ನಾವು ಮಾಡ್ತಿರೋದು ಕನ್ನಡದ ಜನತೆಗಾಗಿ’ ಎಂದು ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ.

‘ವಾಮನ’ ಸಿನಿಮಾ ವೀಕ್ಷಿಸಿದ ಬಳಿಕ ಮಾಧ್ಯಮಗಳ ಜೊತೆ ದರ್ಶನ್ ಅವರು ಮಾತನಾಡಿದ್ದಾರೆ. ‘ವಾಮನ’ ಸಿನಿಮಾನ ವೀಕ್ಷಣೆ ಮಾಡಿ ಎಂದು ಅವರು ಕೋರಿಕೊಂಡಿದ್ದಾರೆ. ‘ಧನ್ವೀರ್ ಹೈಟ್ ಇದಾನೆ. ಎತ್ತರ ಇರುವವರಿಗೆ ಸಾಮಾನ್ಯವಾಗಿ ಮೇಲ್ಭಾಗ ಸಣ್ಣ ಇರುತ್ತದೆ, ಕಾಲು ಉದ್ದ ಇರುತ್ತದೆ. ಅವನು ಸಿನಿಮಾದಲ್ಲಿ ಕಾಲನ್ನು ಚೆನ್ನಾಗಿ ಬಳಕೆ ಮಾಡಿಕೊಂಡಿದ್ದಾನೆ’ ಎಂದು ದರ್ಶನ್ ಹೇಳಿದರು. ಅಂದರೆ ಫೈಟ್ ದೃಶ್ಯಗಳಲ್ಲಿ ಕಾಲಿನ ಬಳಕೆ ಆಗಿದೆ ಎಂಬುದು ಅವರು ಮಾತಿನ ಅರ್ಥ.

‘ನಾವು ಬೇರೆ ಭಾಷೆ ಸಿನಿಮಾ ಮಾಡ್ತಿಲ್ಲ ಅಥವಾ ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತಾ ಇಲ್ಲ. ಕರ್ನಾಟಕದ ಜನತೆಗೆ, ಇಲ್ಲಿರೋರಿಗೆ, ಇಲ್ಲಿನ ಸಿನಿಮಾಗಳನ್ನೇ ಮಾಡ್ತಿರೋದು. ಅದನ್ನು ವೀಕ್ಷಿಸಿ’ ಎಂದು ದರ್ಶನ್ ಅವರು ಕೋರಿಕೊಂಡಿದ್ದಾರೆ.

ಇದನ್ನೂ ಓದಿ
Image
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
Image
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
Image
ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ
Image
ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್

ಇದನ್ನೂ ಓದಿ: ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

ದರ್ಶನ್ ಅವರು ‘ನಾವು ಯಾವುದೋ ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತಿಲ್ಲ’ ಎಂಬ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಅವರು ಯಾರಿಗಾದರೂ ಟಾಂಗ್ ಕೊಡೋಕೆ ಹೀಗೆ ಹೇಳಿದರಾ ಎಂಬ ಪ್ರಶ್ನೆ ಮೂಡೋದು ಸಹಜ. ಆದರೆ, ಹಾಗಲ್ಲ. ದರ್ಶನ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಪರಭಾಷೆ ಸಿನಿಮಾಗಳನ್ನು ಮಾಡೋದೆ ಇಲ್ಲ ಎಂದು ಯಾವಾಗಲೋ ಶಪಥ ಮಾಡಿಯಾಗಿದೆ. ಅದೇ ರೀತಿ ಅವರು ಯಾವುದನ್ನೂ ಪ್ಯಾನ್ ಇಂಡಿಯಾ ಸಿನಿಮಾಗಳನ್ನು  ಮಾಡಿಲ್ಲ. ಕನ್ನಡದ ಜನತೆಗಾಗಿ ತಾವು ಸಿನಿಮಾ ಮಾಡೋದು ಎಂದು ಹೇಳಿಕೊಳ್ಳುತ್ತಾ ಬಂದಿದ್ದಾರೆ. ಈ ಕಾರಣಕ್ಕೆ ದರ್ಶನ್ ಅವರು ಈ ರೀತಿ ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Thu, 10 April 25

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?