AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಗದೇ ಪರದಾಡುತ್ತಿರುವ ಪವಿತ್ರಾ ಗೌಡ; ಡಿ.3ಕ್ಕೆ ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ಜೈಲು ಸೇರಿ 5 ತಿಂಗಳು ಕಳೆದಿದ್ದರೂ ಕೂಡ ಅವರಿಗೆ ಜಾಮೀನು ಪಡೆಯಲು ಸಾಧ್ಯವಾಗಿಲ್ಲ. ದರ್ಶನ್, ಪವಿತ್ರಾ ಗೌಡ, ನಾಗರಾಜ್​ ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ಜಾಮೀನು ಸಿಗದೇ ಪರದಾಡುತ್ತಿರುವ ಪವಿತ್ರಾ ಗೌಡ; ಡಿ.3ಕ್ಕೆ ಅರ್ಜಿ ವಿಚಾರಣೆ
ಪವಿತ್ರಾ ಗೌಡ, ರೇಣುಕಾ ಸ್ವಾಮಿ
ಮದನ್​ ಕುಮಾರ್​
|

Updated on: Nov 29, 2024 | 8:49 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ಈತನಕ ಜಾಮೀನು ಸಿಕ್ಕಿಲ್ಲ. ಪರಪ್ಪನ ಅಗ್ರಹಾರ ಜೈಲು ಸೇರಿ ಐದು ತಿಂಗಳುಗಳು ಕಳೆದಿದ್ದರೂ ಕೂಡ ಅವರಿಗೆ ಜಾಮೀನು ಪಡೆಯಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡ, ದರ್ಶನ್, ನಾಗರಾಜ್​ ಸೇರಿದಂತೆ ಈ ಕೇಸ್​ಗೆ ಸಂಬಂಧಿಸಿದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು (ನವೆಂಬರ್​ 29) ಕೂಡ ಹೈಕೋರ್ಟ್​ನಲ್ಲಿ ವಾದ ಮಂಡನೆ ಆಗಿದೆ. ಆದರೆ ವಿಚಾರಣೆಯನ್ನು ಡಿಸೆಂಬರ್​ 3ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಎ2 ಆಗಿರುವ ದರ್ಶನ್ ಪರ ವಕೀಲರಾದ ಸಿ.ವಿ. ನಾಗೇಶ್ ಅವರು ಈ ಕೇಸ್​ನ ತನಿಖೆಯಲ್ಲಿ ಇರುವ ಕೆಲವು ಲೋಪಗಳನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ದರ್ಶನ್ ಮ್ಯಾನೇಜರ್​ ನಾಗರಾಜ್​ ಪರ ವಕೀಲ ಸಂದೇಶ್ ಚೌಟ ಅವರು ವಾದ ಮಾಡಿದ್ದಾರೆ. ಎ1 ಪವಿತ್ರಾ ಗೌಡ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್​ನಲ್ಲಿ ವಾದ ಮಂಡನೆ ಆಗುವುದು ಇನ್ನೂ ಬಾಕಿ ಇದೆ.

ದರ್ಶನ್, ನಾಗರಾಜ್​ ಪರ ವಕೀಲರು ಜಾಮೀನಿಗಾಗಿ ವಾದ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಡಿಸೆಂಬರ್​ 3ರಂದು ಎಸ್​ಪಿಪಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ. ಡಿ.3ರಂದು ಹೈಕೋರ್ಟ್​ ತೀರ್ಪು ನೀಡಬಹುದು ಅಥವಾ ಆದೇಶ ಕಾಯ್ದಿರಿಸುವ ಸಾಧ್ಯತೆ ಇದೆ. ಪವಿತ್ರಾ ಗೌಡ ಅವರು ಜಾಮೀನು ಸಿಗುತ್ತೋ ಇಲ್ಲವೋ ಎಂಬ ಚಿಂತೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅವರು ಜೈಲು ವಾಸ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಬಂತು ದರ್ಶನ್ ಹಾಡು; ಕುಣಿದಾಡಿದ ರಜತ್

ದರ್ಶನ್​ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ವಿವಿಧ ಪರೀಕ್ಷೆ ಮಾಡಿ ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ಅವರಿಗೆ ಹೈಕೋರ್ಟ್​ನಲ್ಲಿ ಮಧ್ಯಂತರ ಜಾಮೀನು ನೀಡಲಾಯಿತು. ಜಾಮೀನು ಪಡೆದು ಒಂದು ತಿಂಗಳು ಆಗಿದ್ದರೂ ಕೂಡ ದರ್ಶನ್ ಸರ್ಜರಿ ಮಾಡಿಸಿಲ್ಲ. ಈಗ ರೆಗ್ಯುಲರ್​ ಬೇಲ್​ ಪಡೆಯಲು ಅವರ ಪರ ವಕೀಲರು ಹೈಕೋರ್ಟ್​ನಲ್ಲಿ ವಾದ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!