AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.13ಕ್ಕೆ ದರ್ಶನ್ ಭವಿಷ್ಯ ನಿರ್ಧಾರ; ಪ್ರಕಟ ಆಗಲಿದೆ ಜಾಮೀನು ಅರ್ಜಿಯ ತೀರ್ಪು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್​, ಪವಿತ್ರಾ ಗೌಡ ಮುಂತಾದವರ ಭವಿಷ್ಯ ಶುಕ್ರವಾರ (ಡಿಸೆಂಬರ್​ 13) ನಿರ್ಧಾರ ಆಗಲಿದೆ. ಈಗಾಗಲೇ ಇವರೆಲ್ಲರ ಜಾಮೀನು ಅರ್ಜಿಯ ವಿಚಾರಣೆ ನಡೆದಿದೆ. ಅದರ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಶುಕ್ರವಾರ ಮಧ್ಯಾಹ್ನ 2.30ಕ್ಕೆ ಜಾಮೀನು ಅರ್ಜಿಯ ತೀರ್ಪು ಪ್ರಕಟ ಆಗಲಿದೆ.

ಡಿ.13ಕ್ಕೆ ದರ್ಶನ್ ಭವಿಷ್ಯ ನಿರ್ಧಾರ; ಪ್ರಕಟ ಆಗಲಿದೆ ಜಾಮೀನು ಅರ್ಜಿಯ ತೀರ್ಪು
ದರ್ಶನ್, ಪವಿತ್ರಾ ಗೌಡ, ರೇಣುಕಾಸ್ವಾಮಿ
ಮದನ್​ ಕುಮಾರ್​
|

Updated on: Dec 12, 2024 | 9:33 PM

Share

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್​, ನಾಗರಾಜ್​ ಮುಂತಾದವರಿಗೆ ಶುಕ್ರವಾರ (ಡಿ.13) ಮಹತ್ವದ ದಿನ. ಯಾಕೆಂದರೆ, ಈ ಎಲ್ಲ ಆರೋಪಿಗಳ ಜಾಮೀನು ಅರ್ಜಿಯ ತೀರ್ಪು ಹೊರಬರಲಿದೆ. ಆರೋಪಿಗಳಿಗೆ ಜಾಮೀನು ಕೊಡಿಸಲು ಅವರ ಪರ ವಕೀಲರು ಪ್ರಯತ್ನಿಸಿದ್ದಾರೆ. ಜಾಮೀನು ನೀಡಬಾರದು ಎಂದು ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ಹೈಕೋರ್ಟ್​ ತೀರ್ಪು ಕಾಯ್ದಿರಿಸಿದ್ದು, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಅದಕ್ಕಾಗಿ ಎಲ್ಲರೂ ಕಾದಿದ್ದಾರೆ.

ಜೂನ್​ ತಿಂಗಳಲ್ಲಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು, ಚಿತ್ರಹಿಂಸೆ ನೀಡಿ ಸಾಯಿಸಲಾಗಿತ್ತು. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಗೆ ದರ್ಶನ್​, ಪವಿತ್ರಾ ಗೌಡ ಹಾಗೂ ಗ್ಯಾಂಗ್​ನವರು ಥಳಿಸಿದ್ದರು. ಬಳಿಕ ಆತ ಕೊನೆಯುಸಿರು ಎಳೆದಿದ್ದ. ಆತನ ಶವವನ್ನು ರಾಜಕಾಲುವೆಗೆ ಎಸೆಯಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಪ್ರಮುಖರು ಜಾಮೀನಿನ ನಿರೀಕ್ಷೆಯಲ್ಲಿ ಇದ್ದಾರೆ.

ಶುಕ್ರವಾರ ಮಧ್ಯಾಹ್ನ 2.30ಕ್ಕೆ ದರ್ಶನ್​, ನಾಗರಾಜ್​, ಪವಿತ್ರಾ ಗೌಡ, ಲಕ್ಷ್ಮಣ್ ಎಂ, ಜಗದೀಶ್, ಪ್ರದೋಶ್‌ ರಾವ್, ಅನುಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟ ಆಗಲಿದ್ದು, ಎಲ್ಲರ ಗಮನ ಈ ತೀರ್ಪಿನ ಕಡೆಗಿದೆ. ಹೈಪ್ರೊಫೈಲ್ ಕೇಸ್​ ಆದ್ದರಿಂದ ಹೆಚ್ಚು ಸುದ್ದಿಯಾಗಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಏಕಸದಸ್ಯ ಪೀಠದಲ್ಲಿ ತೀರ್ಪು ಬರಲಿದೆ.

ಈ ಕೇಸ್​ನಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಎ2 ದರ್ಶನ್​ಗೆ ಬೆನ್ನು ನೋವು ಇರುವ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಿ, ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಅವರ ಶಸ್ತ್ರಚಿಕಿತ್ಸೆ ವಿಳಂಬ ಆಗುತ್ತಿದೆ. ಮುಂದಿನ ಆದೇಶದ ತನಕ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್​ ವಿಸ್ತರಿಸಿದೆ. ಶುಕ್ರವಾರ ಪ್ರಕಟ ಆಗಲಿರುವ ತೀರ್ಪಿನ ಮೇಲೆ ದರ್ಶನ್, ಪವಿತ್ರಾ ಗೌಡ ಮುಂತಾದವರು ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ: ದರ್ಶನ್​ ಗೆ 45 ದಿನ ಕಳೆದರೂ ಇಲ್ಲ ಶಸ್ತ್ರಚಿಕಿತ್ಸೆ; ಮುಂದಕ್ಕೆ ಹೋಗುತ್ತಿದೆ ಸರ್ಜರಿ ದಿನಾಂಕ 

ದರ್ಶನ್ ಪರವಾಗಿ ಸಿ.ವಿ. ನಾಗೇಶ್ ವಾದ ಮಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ಲೋಪಗಳಿವೆ ಎಂದು ನಾಗೇಶ್ ವಾದಿಸಿದ್ದಾರೆ. ಆದರೆ ಅವರ ಪ್ರಶ್ನೆಗಳಿಗೆ ಎಸ್​ಪಿಪಿ ಪ್ರಸನ್ನ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ. ಆರೋಪಿಗಳ ವಿರುದ್ಧದ ಅನೇಕ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಇರಿಸಲಾಗಿದೆ. ಹೈಕೋರ್ಟ್​ ನೀಡಲಿರುವ ತೀರ್ಪಿಗಾಗಿ ಎಲ್ಲರೂ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ