AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜು.18ರ ತನಕ ದರ್ಶನ್​, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾ ಸ್ವಾಮಿಯ ಕೊಲೆ ಆರೋಪ ಹೊತ್ತಿರುವ ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರು ಇನ್ನಷ್ಟು ದಿನಗಳ ಕಾಲ ಜೈಲಿನಲ್ಲಿ ಇರುವುದು ಅನಿವಾರ್ಯ ಆಗಿದೆ. ಜುಲೈ 18ರವರೆಗೆ ಎಲ್ಲ ಆರೋಪಿಗಳ ಜೈಲು ವಾಸ ಮುಂದುವರಿಯಲಿದೆ. ಇಂದು (ಜು.4) ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್​ ಆದೇಶಿಸಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಜು.18ರ ತನಕ ದರ್ಶನ್​, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ದರ್ಶನ್​, ಪವಿತ್ರಾ ಗೌಡ
Shivaprasad B
| Edited By: |

Updated on: Jul 04, 2024 | 3:40 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್​ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್​ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್​ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.

ದರ್ಶನ್​ ಸ್ನೇಹಿತೆಯಾದ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪ ದರ್ಶನ್​ ಹಾಗೂ ಡಿ ಗ್ಯಾಂಗ್ ಮೇಲಿದೆ. ರಾಷ್ಟ್ರ ಮಟ್ಟದಲ್ಲಿ ಈ ಪ್ರಕರಣ ಸುದ್ದಿ ಆಗುತ್ತಿದೆ. ದರ್ಶನ್​ ಅವರನ್ನು ನೋಡಲು ಅಭಿಮಾನಿಗಳು ಪ್ರತಿದಿನ ಜೈಲಿನ ಬಳಿ ಬರುತ್ತಿದ್ದಾರೆ.

ಇದನ್ನೂ ಓದಿ: ದರ್ಶನ್​ ಬಂಧನದ ಬಳಿಕ ಸುಮಲತಾ ಅಂಬರೀಷ್​ ಮೊದಲ ಪ್ರತಿಕ್ರಿಯೆ; ಇಲ್ಲಿದೆ ದೀರ್ಘ ಪತ್ರ

ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಒತ್ತಾಯಿಸಿದ್ದಾರೆ. ಇತ್ತ, ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಗಂಡನ ಪರವಾಗಿ ಹೋರಾಡುತ್ತಿದ್ದಾರೆ. ಇಷ್ಟು ದಿನ ಸ್ಟಾರ್​ ನಟನಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ದರ್ಶನ್​ಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ. ಹಾಗಾಗಿ ತಮಗೆ ಆಪ್ತರಾದ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನು ಕೊಡಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಇತ್ತೀಚೆಗೆ ಮಾಹಿತಿ ಲಭ್ಯವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shivaprasad B
Shivaprasad B
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!