AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು

Darshan: ನಟ ದರ್ಶನ್ ಮನೆಯ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಕಡಿದು ಗಾಯಗೊಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯು ದರ್ಶನ್ ಸೇರಿದಂತೆ ಕೆಲವರ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು
ಮಂಜುನಾಥ ಸಿ.
|

Updated on: Oct 31, 2023 | 8:01 PM

Share

ನಟ ತೂಗುದೀಪ ದರ್ಶನ್ (Darshan) ಅವರ ಮನೆಯ ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿದೆ. ಈ ಸಂಬಂಧ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಘಟನೆ ನಡೆದಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ಮಹಿಳೆಯೊಟ್ಟಿಗೆ ವಾಗ್ವಾದ ಮಾಡಿದ್ದರು ಎನ್ನಲಾಗುತ್ತಿದೆ.

ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ. ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಗಾಯಗೊಂಡ ಮಹಿಳೆ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ದರ್ಶನ್​ರನ್ನು ಎರಡನೇ ಆರೋಪಿಯನ್ನಾಗಿಸಿ ದೂರನ್ನು ನೀಡಲಾಗಿದೆ.

ಇದನ್ನೂ ಓದಿ:ದರ್ಶನ್ ಬಳಿ ಇತ್ತು 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್? ಇದ್ಯಾವುದೂ ಅಸಲಿ ಅಲ್ಲ?

ಪ್ರಾಣಿ ಪ್ರಿಯ ದರ್ಶನ್ ಫಾರಂ ಹೌಸ್​ನಲ್ಲಿ ಹಸು, ಎತ್ತು, ಕುದುರೆ ಸೇರಿ ಇನ್ನೂ ಕೆಲವು ಪ್ರಾಣಿ ಹಾಗೂ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ. ದರ್ಶನ್ ತಾವು ವಾಸಿಸುವ ಆರ್​ಆರ್ ನಗರ ನಿವಾಸದಲ್ಲಿ ಕೆಲವು ನಾಯಿಗಳನ್ನು ಸಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ