AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು

Darshan: ನಟ ದರ್ಶನ್ ಮನೆಯ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಕಡಿದು ಗಾಯಗೊಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯು ದರ್ಶನ್ ಸೇರಿದಂತೆ ಕೆಲವರ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು
Follow us
ಮಂಜುನಾಥ ಸಿ.
|

Updated on: Oct 31, 2023 | 8:01 PM

ನಟ ತೂಗುದೀಪ ದರ್ಶನ್ (Darshan) ಅವರ ಮನೆಯ ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿದೆ. ಈ ಸಂಬಂಧ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಘಟನೆ ನಡೆದಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ಮಹಿಳೆಯೊಟ್ಟಿಗೆ ವಾಗ್ವಾದ ಮಾಡಿದ್ದರು ಎನ್ನಲಾಗುತ್ತಿದೆ.

ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ. ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಗಾಯಗೊಂಡ ಮಹಿಳೆ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ದರ್ಶನ್​ರನ್ನು ಎರಡನೇ ಆರೋಪಿಯನ್ನಾಗಿಸಿ ದೂರನ್ನು ನೀಡಲಾಗಿದೆ.

ಇದನ್ನೂ ಓದಿ:ದರ್ಶನ್ ಬಳಿ ಇತ್ತು 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್? ಇದ್ಯಾವುದೂ ಅಸಲಿ ಅಲ್ಲ?

ಪ್ರಾಣಿ ಪ್ರಿಯ ದರ್ಶನ್ ಫಾರಂ ಹೌಸ್​ನಲ್ಲಿ ಹಸು, ಎತ್ತು, ಕುದುರೆ ಸೇರಿ ಇನ್ನೂ ಕೆಲವು ಪ್ರಾಣಿ ಹಾಗೂ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ. ದರ್ಶನ್ ತಾವು ವಾಸಿಸುವ ಆರ್​ಆರ್ ನಗರ ನಿವಾಸದಲ್ಲಿ ಕೆಲವು ನಾಯಿಗಳನ್ನು ಸಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ