AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ರೌಡಿಶೀಟರ್ ಸ್ನೇಹ ಬೆಳೆಸಿದ ದರ್ಶನ್: ವೈರಲ್ ಫೋಟೋದಲ್ಲಿ ಇರುವ ನಾಗ ಯಾರು?

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ದರ್ಶನ್​ ಈಗ ನಟೋರಿಯಸ್​ ವ್ಯಕ್ತಿಗಳ ಸಹವಾಸ ಮಾಡಿರುವುದಕ್ಕೆ ಸಾಕ್ಷಿ ಸಿಕ್ಕಿದೆ. ಜೈಲಿನಲ್ಲಿ ಇರುವ ರೌಡಿಶೀಟರ್​ಗಳ ಜೊತೆ ದರ್ಶನ್​ಗೆ ಸ್ನೇಹ ಬೆಳೆದಿದೆ. ಅವರ ಜೊತೆ ಹಾಗಾಗಿ ಟೀ ಕುಡಿದು, ಸಿಗರೇಟ್​ ಸೇದುತ್ತಾ ಕಾಲ ಕಳೆಯುತ್ತಿರುವ ದರ್ಶನ್​ ಫೋಟೋ ಲಭ್ಯವಾಗಿದೆ. ಈ ನಟೋರಿಯಸ್​ ವ್ಯಕ್ತಿಗಳ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಜೈಲಲ್ಲಿ ರೌಡಿಶೀಟರ್ ಸ್ನೇಹ ಬೆಳೆಸಿದ ದರ್ಶನ್: ವೈರಲ್ ಫೋಟೋದಲ್ಲಿ ಇರುವ ನಾಗ ಯಾರು?
ದರ್ಶನ್ ವೈರಲ್ ಫೋಟೋ
ಮದನ್​ ಕುಮಾರ್​
|

Updated on: Aug 25, 2024 | 4:57 PM

Share

ನಟ ದರ್ಶನ್ ಮೇಲೆ ಗಂಭೀರ ಆರೋಪ ಇದೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಎ2 ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಜೈಲು ಸೇರಿದ ದರ್ಶನ್, ಅಲ್ಲಿಯೂ ರೌಡಿಶೀಟರ್​ಗಳ ಸಹವಾಸ ಮಾಡಿದ್ದಾರಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಈ ಫೋಟೋದಲ್ಲಿ ದರ್ಶನ್​ ಅವರು ರೌಡಿಶೀಟರ್​ ನಾಗನ ಜೊತೆ ಕುಳಿತು ಸಿಗರೇಟ್​ ಸೇದುತ್ತಾ ಇರುವುದು ಕಾಣಿಸಿದೆ. ಅಂದಹಾಗೆ, ದರ್ಶನ್​ ಜೊತೆ ಫೋಟೋದಲ್ಲಿ ಇರುವುದು ನಟೋರಿಯಸ್​ ಕ್ರಿಮಿನಲ್​ ವಿಲ್ಸನ್​ ಗಾರ್ಡನ್​ ನಾಗ.

ಯಾರು ಈ ನಾಗ? ವಿಲ್ಸನ್ ಗಾರ್ಡನ್ ನಾಗ ಎಂಬ ಆತ ಬೆಂಗಳೂರು ದಕ್ಷಿಣ ವಿಭಾಗದ ರೌಡಿಶೀಟರ್. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣದಲ್ಲಿ ನಾಗ ಜೈಲುಪಾಲಾಗಿದ್ದಾನೆ. ಕಳೆದ ಆಗಸ್ಟ್​ನಲ್ಲಿ ಕೋರ್ಟ್​ಗೆ ವಿಲ್ಸನ್ ಗಾರ್ಡನ್ ನಾಗ ಶರಣಾಗಿದ್ದ. ಆತನ ವಿರುದ್ಧ ಕೋಕಾ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ದರ್ಶನ್​ ಜೈಲಿಗೆ ಹೋದಾಗ ವಿಲ್ಸನ್ ಗಾರ್ಡನ್ ನಾಗನ ಭೇಟಿಗೆ ಮುಂದಾಗಿದ್ದರು. ಈಗ ನಾಗನ ಜೊತೆ ಟೀ, ಸಿಗರೇಟ್ ಶೇರ್ ಮಾಡುತ್ತಿರುವ ದರ್ಶನ್ ಫೋಟೋ ಹೊರಬಂದಿದೆ.

ವೈರಲ್​ ಆಗಿರುವ ಫೋಟೋದಲ್ಲಿ ದರ್ಶನ್ ಪಕ್ಕದಲ್ಲೇ ಕುಳಿತಿರುವ ಮತ್ತೊಬ್ಬ ಆರೋಪಿ ನಾಗರಾಜ್. ಈತ ದರ್ಶನ್​ ಮ್ಯಾನೇಜರ್​. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 11ನೇ ಆರೋಪಿಯಾಗಿ ನಾಗರಾಜ್​ ಜೈಲು ಸೇರಿದ್ದಾನೆ. ದರ್ಶನ್​ ಮಾಡುವ ಪಾರ್ಟಿ ಸೇರಿದಂತೆ ಎಲ್ಲ ಕಡೆಗಳಲ್ಲೂ ಈಗ ಜೊತೆಗಿರುತ್ತಿದ್ದ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಾಗ ಕಾಲಿನಿಂದ ಒದ್ದಿದ್ದು ಇದೇ ನಾಗ. ಹಾಗಾಗಿ ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್​ನಲ್ಲಿ ನಾಗನದ್ದು ಪ್ರಮುಖ ಪಾತ್ರವಿತ್ತು ಎನ್ನಲಾಗಿದೆ.

2 ದಿನದ ಹಿಂದೆ ಸೆಂಟ್ರಲ್ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಸ್ಪೆಷಲ್ ಬ್ಯಾರಕ್​ನಿಂದ ಆಚೆ ಕುಳಿತಿರುವ ಕೊಲೆ ಆರೋಪಿ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ಸಹಚರರು ಸಿಗರೇಟ್, ಟೀ ಕಪ್ ಹಿಡಿರುವುದು ತಿಳಿದುಬಂದಿದೆ. ದರ್ಶನ್​ ಮಂದಹಾಸ ಬೀರುತ್ತಾ, ಚೇರ್ ಮೇಲೆ ಕುಳಿತು ಹಾಯಾಗಿ ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್​ಗಾಗಿ 2 ಬ್ಯಾಗ್ ಹಿಡಿದು ಬಂದ ರಚಿತಾ ರಾಮ್​

ದರ್ಶನ್​, ವಿಲ್ಸನ್​ ಗಾರ್ಡನ್​ ನಾಗ ಮತ್ತು ಮ್ಯಾನೇಜರ್​ ನಾಗರಾಜ್ ಜೊತೆ ಇರುವ ಮತ್ತೋರ್ವ ವ್ಯಕ್ತಿ ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಕೂಡ ರೌಡಿಶೀಟರ್! ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರೋ ಕುಳ್ಳ ಸೀನಾ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕೊಲೆ ಕೇಸ್​ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್