AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ರೌಡಿಶೀಟರ್ ಸ್ನೇಹ ಬೆಳೆಸಿದ ದರ್ಶನ್: ವೈರಲ್ ಫೋಟೋದಲ್ಲಿ ಇರುವ ನಾಗ ಯಾರು?

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ದರ್ಶನ್​ ಈಗ ನಟೋರಿಯಸ್​ ವ್ಯಕ್ತಿಗಳ ಸಹವಾಸ ಮಾಡಿರುವುದಕ್ಕೆ ಸಾಕ್ಷಿ ಸಿಕ್ಕಿದೆ. ಜೈಲಿನಲ್ಲಿ ಇರುವ ರೌಡಿಶೀಟರ್​ಗಳ ಜೊತೆ ದರ್ಶನ್​ಗೆ ಸ್ನೇಹ ಬೆಳೆದಿದೆ. ಅವರ ಜೊತೆ ಹಾಗಾಗಿ ಟೀ ಕುಡಿದು, ಸಿಗರೇಟ್​ ಸೇದುತ್ತಾ ಕಾಲ ಕಳೆಯುತ್ತಿರುವ ದರ್ಶನ್​ ಫೋಟೋ ಲಭ್ಯವಾಗಿದೆ. ಈ ನಟೋರಿಯಸ್​ ವ್ಯಕ್ತಿಗಳ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಜೈಲಲ್ಲಿ ರೌಡಿಶೀಟರ್ ಸ್ನೇಹ ಬೆಳೆಸಿದ ದರ್ಶನ್: ವೈರಲ್ ಫೋಟೋದಲ್ಲಿ ಇರುವ ನಾಗ ಯಾರು?
ದರ್ಶನ್ ವೈರಲ್ ಫೋಟೋ
ಮದನ್​ ಕುಮಾರ್​
|

Updated on: Aug 25, 2024 | 4:57 PM

Share

ನಟ ದರ್ಶನ್ ಮೇಲೆ ಗಂಭೀರ ಆರೋಪ ಇದೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಎ2 ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಜೈಲು ಸೇರಿದ ದರ್ಶನ್, ಅಲ್ಲಿಯೂ ರೌಡಿಶೀಟರ್​ಗಳ ಸಹವಾಸ ಮಾಡಿದ್ದಾರಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಈ ಫೋಟೋದಲ್ಲಿ ದರ್ಶನ್​ ಅವರು ರೌಡಿಶೀಟರ್​ ನಾಗನ ಜೊತೆ ಕುಳಿತು ಸಿಗರೇಟ್​ ಸೇದುತ್ತಾ ಇರುವುದು ಕಾಣಿಸಿದೆ. ಅಂದಹಾಗೆ, ದರ್ಶನ್​ ಜೊತೆ ಫೋಟೋದಲ್ಲಿ ಇರುವುದು ನಟೋರಿಯಸ್​ ಕ್ರಿಮಿನಲ್​ ವಿಲ್ಸನ್​ ಗಾರ್ಡನ್​ ನಾಗ.

ಯಾರು ಈ ನಾಗ? ವಿಲ್ಸನ್ ಗಾರ್ಡನ್ ನಾಗ ಎಂಬ ಆತ ಬೆಂಗಳೂರು ದಕ್ಷಿಣ ವಿಭಾಗದ ರೌಡಿಶೀಟರ್. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣದಲ್ಲಿ ನಾಗ ಜೈಲುಪಾಲಾಗಿದ್ದಾನೆ. ಕಳೆದ ಆಗಸ್ಟ್​ನಲ್ಲಿ ಕೋರ್ಟ್​ಗೆ ವಿಲ್ಸನ್ ಗಾರ್ಡನ್ ನಾಗ ಶರಣಾಗಿದ್ದ. ಆತನ ವಿರುದ್ಧ ಕೋಕಾ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ದರ್ಶನ್​ ಜೈಲಿಗೆ ಹೋದಾಗ ವಿಲ್ಸನ್ ಗಾರ್ಡನ್ ನಾಗನ ಭೇಟಿಗೆ ಮುಂದಾಗಿದ್ದರು. ಈಗ ನಾಗನ ಜೊತೆ ಟೀ, ಸಿಗರೇಟ್ ಶೇರ್ ಮಾಡುತ್ತಿರುವ ದರ್ಶನ್ ಫೋಟೋ ಹೊರಬಂದಿದೆ.

ವೈರಲ್​ ಆಗಿರುವ ಫೋಟೋದಲ್ಲಿ ದರ್ಶನ್ ಪಕ್ಕದಲ್ಲೇ ಕುಳಿತಿರುವ ಮತ್ತೊಬ್ಬ ಆರೋಪಿ ನಾಗರಾಜ್. ಈತ ದರ್ಶನ್​ ಮ್ಯಾನೇಜರ್​. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 11ನೇ ಆರೋಪಿಯಾಗಿ ನಾಗರಾಜ್​ ಜೈಲು ಸೇರಿದ್ದಾನೆ. ದರ್ಶನ್​ ಮಾಡುವ ಪಾರ್ಟಿ ಸೇರಿದಂತೆ ಎಲ್ಲ ಕಡೆಗಳಲ್ಲೂ ಈಗ ಜೊತೆಗಿರುತ್ತಿದ್ದ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಾಗ ಕಾಲಿನಿಂದ ಒದ್ದಿದ್ದು ಇದೇ ನಾಗ. ಹಾಗಾಗಿ ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್​ನಲ್ಲಿ ನಾಗನದ್ದು ಪ್ರಮುಖ ಪಾತ್ರವಿತ್ತು ಎನ್ನಲಾಗಿದೆ.

2 ದಿನದ ಹಿಂದೆ ಸೆಂಟ್ರಲ್ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಸ್ಪೆಷಲ್ ಬ್ಯಾರಕ್​ನಿಂದ ಆಚೆ ಕುಳಿತಿರುವ ಕೊಲೆ ಆರೋಪಿ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ಸಹಚರರು ಸಿಗರೇಟ್, ಟೀ ಕಪ್ ಹಿಡಿರುವುದು ತಿಳಿದುಬಂದಿದೆ. ದರ್ಶನ್​ ಮಂದಹಾಸ ಬೀರುತ್ತಾ, ಚೇರ್ ಮೇಲೆ ಕುಳಿತು ಹಾಯಾಗಿ ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್​ಗಾಗಿ 2 ಬ್ಯಾಗ್ ಹಿಡಿದು ಬಂದ ರಚಿತಾ ರಾಮ್​

ದರ್ಶನ್​, ವಿಲ್ಸನ್​ ಗಾರ್ಡನ್​ ನಾಗ ಮತ್ತು ಮ್ಯಾನೇಜರ್​ ನಾಗರಾಜ್ ಜೊತೆ ಇರುವ ಮತ್ತೋರ್ವ ವ್ಯಕ್ತಿ ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಕೂಡ ರೌಡಿಶೀಟರ್! ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರೋ ಕುಳ್ಳ ಸೀನಾ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕೊಲೆ ಕೇಸ್​ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?