AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮಾಪತಿ ಶ್ರೀನಿವಾಸ್ ‘ಏರಿಯಾ’ಕ್ಕೆ ನುಗ್ಗಲು ಸಜ್ಜಾದ ದರ್ಶನ್

Umapathy v/s Darshan: ಉಮಾಪತಿ ಶ್ರೀನಿವಾಸ್ ಹಾಗೂ ದರ್ಶನ್ ನಡುವಿನ ವಿವಾದ ಉಲ್ಬಣವಾಗುತ್ತಾ ಸಾಗುತ್ತಿದೆ. ಈಗ ಉಮಾಪತಿ ಶ್ರೀನಿವಾಸ್​ರ ಕ್ಷೇತ್ರದಲ್ಲಿಯೇ ದರ್ಶನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಉಮಾಪತಿ ಶ್ರೀನಿವಾಸ್ ‘ಏರಿಯಾ’ಕ್ಕೆ ನುಗ್ಗಲು ಸಜ್ಜಾದ ದರ್ಶನ್
ಮಂಜುನಾಥ ಸಿ.
|

Updated on: Feb 25, 2024 | 2:42 PM

Share

ನಿರ್ಮಾಪಕ ಉಮಾಪತಿ ಶ್ರೀನಿವಾಸ್ (Umapathy Srinivas) ಹಾಗೂ ನಟ ದರ್ಶನ್ ತೂಗುದೀಪ (Darshan Thoogudeepa) ನಡುವೆ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗುತ್ತಿದೆ. ‘ಕಾಟೇರ’ ಸಿನಿಮಾದ ಕತೆ ಹಾಗೂ ಟೈಟಲ್ ಹಾಗೂ ತಾವು ಮಾಡಿಸಿದ್ದು ಎಂದು ಉಮಾಪತಿ ಶ್ರೀನಿವಾಸ್ ಈ ಹಿಂದೆ ಹೇಳಿದ್ದರು. ಆದರೆ ಇದು ದರ್ಶನ್​ಗೆ ಇಷ್ಟವಾಗಲಿಲ್ಲ. ‘ಕಾಟೇರ’ ಸಿನಿಮಾದ 50 ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್, ‘ತಗಡು’ ಎಂಬಿತ್ಯಾದಿ ಕಠು ಪದಗಳನ್ನು ಬಳಸಿ ಉಮಾಪತಿಯನ್ನು ನಿಂದಿಸಿದರು. ದರ್ಶನ್​ರ ಮಾತುಗಳಿಗೆ ಖಡಕ್ ಆಗಿಯೇ ಉಮಾಪತಿ ಪ್ರತ್ಯುತ್ತರ ನೀಡಿದ್ದರು. ದರ್ಶನ್ ವಿರುದ್ಧ ಕೆಲವು ದೂರುಗಳು ಸಹ ದಾಖಲಾಗಿದ್ದವು. ಇದರ ಬೆನ್ನಲ್ಲೆ ಇದೀಗ ನಟ ದರ್ಶನ್, ಉಮಾಪತಿ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಉಮಾಪತಿ ಶ್ರೀನಿವಾಸ್ ಕಾಂಗ್ರೆಸ್​ನಿಂದ ಚುನಾವಣೆಗೆ ಸ್ಪರ್ಧಿಸಿದ್ದ, ಮುಂದಿನ ಬಾರಿ ಮತ್ತೆ ಸ್ಪರ್ಧಿಸುವ ಉಮೇದು ಇಟ್ಟುಕೊಂಡಿರುವ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಬೈಕ್ ರ್ಯಾಲಿ ನಡೆಸಲಿದ್ದಾರೆ. ಈ ಬೈಕ್ ರ್ಯಾಲಿಗೆ ದರ್ಶನ್​ರ ಅಭಿಮಾನಿಗಳು ಭಾಗಿಯಾಗಲಿದ್ದಾರೆ. ದೊಡ್ಡ ಮಟ್ಟದಲ್ಲಿಯೇ ಈ ಬೈಕ್ ರ್ಯಾಲಿ ನಡೆಯಲಿದ್ದು, ಉಮಾಪತಿ ಶ್ರೀನಿವಾಸ್ ವಿರುದ್ಧ ಶಕ್ತಿ ಪ್ರದರ್ಶನ ಮಾಡಲೆಂದೇ ಈ ಬೈಕ್ ರ್ಯಾಲಿ ಮಾಡುತ್ತಿದ್ದಾರೆ ದರ್ಶನ್.

ಇದನ್ನೂ ಓದಿ:ದರ್ಶನ್ ಹಾಗೂ ನಾನು ಒಂದೇ ಸಿನಿಮಾದಲ್ಲಿ ನಾಯಕರಾಗಿದ್ದೆವು: ಹರೀಶ್ ರಾಜ್

ಉಮಾಪತಿ ಶ್ರೀನಿವಾಸ್ ಅವರ ಅಡ್ಡಾದಲ್ಲಿಯೇ ತಮ್ಮ ಶಕ್ತಿ ಪ್ರದರ್ಶನ ಮಾಡುವ ಉದ್ದೇಶದಿಂದಲೇ ಈ ಬೈಕ್ ರ್ಯಾಲಿ ಆಯೋಜನೆ ಮಾಡಿದ್ದಾರೆ ದರ್ಶನ್. ವೈಯಕ್ತಿಕ ದ್ವೇಷ ಸಾಧನೆಗಾಗಿ ಮಾಡಲಾಗುತ್ತಿರುವ ಈ ಬೈಕ್ ರ್ಯಾಲಿಗೆ ಪೊಲೀಸರು ಅನುಮತಿ ನೀಡುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ. ಬೈಕ್ ರ್ಯಾಲಿ ನಡೆವ ದಿನವೂ ಸಹ ಉಮಾಪತಿ ಬೆಂಬಲಿಗರು ಹಾಗೂ ದರ್ಶನ್ ಬೆಂಬಲಿಗರ ನಡುವೆ ಜಗಳಗಳು ನಡೆಯುವ ಸಂಭವವೂ ಇದೆ.

ಉಮಾಪತಿ ಶ್ರೀನಿವಾಸ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ಸಂದರ್ಭದಲ್ಲಿ ನಟ ದರ್ಶನ್, ಉಮಾಪತಿ ಶ್ರೀನಿವಾಸ್ ವಿರುದ್ಧವಾಗಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಉಮಾಪತಿ ಶ್ರೀನಿವಾಸ್ ಆ ಚುನಾವಣೆ ಸೋತರು. ಈಗ ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.

‘ಕಾಟೇರ’ ಸಿನಿಮಾದ ಕತೆಯನ್ನು ತಾವು ಮಾಡಿಸಿದ್ದಾಗಿ ಉಮಾಪತಿ ಶ್ರೀನಿವಾಸ್ ಹೇಳಿದ್ದರು. ‘ಕಾಟೇರ’ ಸಿನಿಮಾದ ಟೈಟಲ್ ಸಹ ಉಮಾಪತಿ ಶ್ರೀನಿವಾಸ್ ಅವರ ಬಳಿಯೇ ಇತ್ತು. ಇದನ್ನೇ ಅವರು ಹೇಳಿಕೊಂಡಿದ್ದರು. ಆದರೆ ಉಮಾಪತಿಯವರ ಮಾತು ದರ್ಶನ್​ಗೆ ಹಿಡಿಸಲಿಲ್ಲ, ದರ್ಶನ್ ತುಸು ಖಾರವಾಗಿ ಉಮಾಪತಿಗೆ ಪ್ರತ್ಯುತ್ತರ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?