AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಹಿರೇಮಠ್ ಸಾವಿಗೆ ನ್ಯಾಯ ಕೇಳಿದ ಸೆಲೆಬ್ರಿಟಿಗಳು; ಏನಂದ್ರು ದರ್ಶನ್​?

ಪ್ರಣಿತಾ ಸುಭಾಷ್​, ಶಿವರಾಜ್​ಕುಮಾರ್​, ದರ್ಶನ್​, ಧ್ರುವ ಸರ್ಜಾ, ಕಾರುಣ್ಯಾ ರಾಮ್​, ರಚಿತಾ ರಾಮ್​, ರಿಷಬ್​ ಶೆಟ್ಟಿ ಮುಂತಾದ ಸೆಲೆಬ್ರಿಟಿಗಳು ನೇಹಾ ಹಿರೇಮಠ್ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಹಾ ಸಾವಿಗೆ ಕಾರಣವಾದ ಫಯಾಜ್​ಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ನೇಹಾ ಹಿರೇಮಠ್ ಸಾವಿಗೆ ನ್ಯಾಯ ಕೇಳಿದ ಸೆಲೆಬ್ರಿಟಿಗಳು; ಏನಂದ್ರು ದರ್ಶನ್​?
ದರ್ಶನ್​, ಶಿವರಾಜ್​ಕುಮಾರ್​, ನೇಹಾ ಹಿರೇಮಠ್​
ಮದನ್​ ಕುಮಾರ್​
|

Updated on:Apr 21, 2024 | 12:03 PM

Share

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್​ (Neha Hiremath) ಸಾವಿಗೆ ನ್ಯಾಯ ಸಿಗಬೇಕು ಎಂದು ಎಲ್ಲರೂ ಆಗ್ರಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಈ ಕುರಿತು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಧ್ವನಿ ಎತ್ತಿದ್ದಾರೆ. ನಟ ದರ್ಶನ್​ ಕೂಡ ನೇಹಾ ಹಿರೇಮಠ್ ಹತ್ಯೆ (Neha Hiremath Death) ಬಗ್ಗೆ ಪೋಸ್ಟ್​ ಮಾಡಿದ್ದಾರೆ. ‘ಪ್ರೀತಿಯ ಹೆಸರಲ್ಲಿ ಇಂತಹ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನೂ ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ’ ಎಂದು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್ (Darshan)​ ಬರೆದುಕೊಂಡಿದ್ದಾರೆ. ಇದರ ಜೊತೆಗೆ #JusticeForNehaHiremath ಎಂಬ ಹ್ಯಾಶ್​ಟ್ಯಾಗ್​ ಬಳಸಿದ್ದಾರೆ.

ನಟಿ ಪ್ರಣಿತಾ ಸುಭಾಶ್ ಕೂಡ ಈ ಬಗ್ಗೆ ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ‘ನೇಹಾ ಹಿರೇಮಠ್​ ಅವರ ಕಥೆ ಹೇಳಿ ಬಹಳ ನೋವಾಯಿತು. ಅವರ ಕುಟುಂಬಕ್ಕೆ ದೇವರ ಶಕ್ತಿ ನೀಡಲಿ. ಜಾತಿ, ಧರ್ಮ, ಕೋಮುವಾದದ ವಿಚಾರಗಳು ಕೇವಲ ಓಟ್​ ಬ್ಯಾಂಕ್​ ರಾಜಕೀಯ ಆಗಿರುವ ಈ ದೇಶದಲ್ಲಿ ನ್ಯಾಯ ಗೆಲ್ಲುತ್ತದೆ ಎಂದು ಭರವಸೆ ಇಟ್ಟುಕೊಂಡಿದ್ದೇನೆ’ ಎಂದು ಪ್ರಣಿತಾ ಸುಭಾಷ್​ ಬರೆದುಕೊಂಡಿದ್ದಾರೆ.

‘ಮನಸ್ಸಿನಲ್ಲಿ ಹೆಚ್ಚು ಆತಂಕ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇದೆಯಾ? ನೇಹಾ ಹಿರೇಮಠ್ ಅವರ ಹತ್ಯೆ ಪ್ರತಿಯೊಬ್ಬ ಹೆಣ್ಣುಮಗಳಿಗೂ ಹಾಗು ಪೋಷಕರಿಗೆ ಆತಂಕ ಉಂಟು ಮಾಡಿದೆ. ಈ ಹೀನ ಕೃತ್ಯವನ್ನು ಮಾಡಿರುವ ಪಾಪಿ ಫಯಾಜ್​ಗೆ ಅತ್ಯಂತ ಕ್ರೂರವಾದ ಶಿಕ್ಷೆಯಾಗಬೇಕು. ನೇಹಾ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ’ ಎಂದು ನಟಿ ಕಾರುಣ್​ ರಾಮ್​ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ’ ಎಂದು ನಟ ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ’: ಧ್ರುವ ಸರ್ಜಾ ಆಕ್ರೋಶ

ಕೆಲವು ಸೆಲೆಬ್ರಿಟಿಗಳು ಈ ಘಟನೆ ಬಗ್ಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ. ಆ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:08 am, Sun, 21 April 24

ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ