AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!

ರಾಬರ್ಟ್​ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸೇರಿತ್ತು. ನಿರ್ದೇಶಕ ತರುಣ್​ ಸುಧೀರ್​ ಅವರು ವೇದಿಕೆ ಏರುತ್ತಿದ್ದಂತೆಯೇ ದರ್ಶನ್​ ಒಂದು ಪ್ರಶ್ನೆ ಕೇಳಿಯೇ ಬಿಟ್ಟರು.

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!
ತರುಣ್​ ಸುಧೀರ್​ - ದರ್ಶನ್​
ಮದನ್​ ಕುಮಾರ್​
|

Updated on: Mar 17, 2021 | 1:40 PM

Share

ಖ್ಯಾತ ನಿರ್ದೇಶಕರ ತರುಣ್​ ಸುಧೀರ್​ ಅವರಿಗೆ ‘ರಾಬರ್ಟ್​’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಸಿಕ್ಕಿದೆ. ಸ್ಯಾಂಡಲ್​ವುಡ್​ನಲ್ಲಿ ತಾವೊಬ್ಬ ಭರವಸೆಯ ನಿರ್ದೇಶಕ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ರಾಬರ್ಟ್​ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸೇರಿತ್ತು. ಅಲ್ಲಿಯೇ ತರುಣ್​ ಮದುವೆ ವಿಚಾರ ಪ್ರಸ್ತಾಪ ಆಗಿದೆ!

ಹೌದು, ನಿರ್ದೇಶಕ ತರುಣ್​ ಸುಧೀರ್​ ಅವರ ಮದುವೆ ಬಗ್ಗೆ ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲಿ ಚರ್ಚೆ ಆಗಿದೆ. ಅದಕ್ಕೆ ಕಾರಣ ಆಗಿದ್ದು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಎಂಬುದು ವಿಶೇಷ. ಎಲ್ಲೆಡೆ ರಾಬರ್ಟ್​ ಸಿನಿಮಾ ಧೂಳೆಬ್ಬಿಸಿದೆ. ಬಾಕ್ಸ್​ ಆಫೀಸ್​ನಲ್ಲಿ 60 ಕೋಟಿ ರೂ.ಗಿಂತಲೂ ಹೆಚ್ಚಿನ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ತರುಣ್​ ಸುಧೀರ್​ ಅವರು ವೇದಿಕೆ ಏರುತ್ತಿದ್ದಂತೆಯೇ ದರ್ಶನ್​ ಒಂದು ಪ್ರಶ್ನೆ ಕೇಳಿಯೇ ಬಿಟ್ಟರು. ಮದುವೆ ಯಾವಾಗ ಅಂತ ತರುಣ್​ಗೆ ಕೇಳಿ ಎಂದು ಕಾರ್ಯಕ್ರಮದ ನಿರೂಪಕಿಗೆ ದರ್ಶನ್​ ಸೂಚಿಸಿದರು.

‘ದರ್ಶನ್​ ಸರ್​ ಹೇಳುತ್ತಿದ್ದಾರೆ ಎಂದರೆ ನಾನು ಈ ಪ್ರಶ್ನೆ ಕೇಳಲೇ ಬೇಕು. ಮದುವೆ ಯಾವಾಗ ಮಾಡಿಕೊಳ್ತೀರಿ’ ಎಂದು ತರುಣ್​ಗೆ ನಿರೂಪಕಿ ಪ್ರಶ್ನೆ ಎಸೆದರು. ಕಿಂಚಿತ್ತೂ ನಿರೀಕ್ಷಿಸಿರದ ಇಂಥ ಸಂದರ್ಭದಲ್ಲಿ ತಮ್ಮ ಮದುವೆ ಬಗ್ಗೆ ಪ್ರಸ್ತಾಪ ಆಗಿದ್ದು ನೋಡಿ ತರುಣ್​ ಒಂದು ಕ್ಷಣ ನಾಚಿ ನೀರಾದರು. ‘ಸುಮ್ಮನೆ ಇರಿ ಬಾಸ್​’ ಎಂದು ಆತ್ಮೀಯತೆಯಿಂದ ದರ್ಶನ್​ರನ್ನು ಸುಮ್ಮನಿರಿಸಲು ಪ್ರಯತ್ನಿಸಿದರು. ಆದರೂ ಹಠ ಬಿಡದೆ ದರ್ಶನ್​ ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ‘ಇನ್ನೊಂದು ಸಿನಿಮಾ ಆದ ಮೇಲೆ ಬಾಸ್​’ ಎಂದು ತರುಣ್​ ನಾಚುತ್ತಲೇ ಉತ್ತರ ನೀಡಿದರು.

‘ಈ ಸಿನಿಮಾ ಇಷ್ಟು ದೊಡ್ಡ ಯಶಸ್ಸು ಆಗಲು ನನ್ನ ಹಿಂದೆ ದೊಡ್ಡದೊಂದು ಟೀಮ್​ ಕೆಲಸ ಮಾಡಿದೆ. ಅವರನ್ನು ಬೇರೆ ಯಾವುದೇ ವೇದಿಕೆಯಲ್ಲೂ ಕರೆಸಿಕೊಳ್ಳಲು ಆಗಿರಲಿಲ್ಲ. ಆದರೆ ಈ ವೇದಿಕೆಗೆ ಅವರನ್ನು ಕರೆಯುತ್ತೇನೆ. 108 ದಿನಗಳ ಸವಾಲಿನ ಚಿತ್ರೀಕರಣಕ್ಕೆ ಈ ಟೀಮ್​ ಸಾಥ್​ ನೀಡಿತು. ನಮ್ಮೆಲ್ಲರಿಗೂ ದರ್ಶನ್​ ಸರ್​ ಸ್ಫೂರ್ತಿ ಆಗಿದ್ದರು. ನಾವೆಲ್ಲರೂ ದರ್ಶನ್​ ಅಭಿಮಾನಿಗಳು’ ಎಂದು ತಮ್ಮ ಡೈರೆಕ್ಷನ್​ ಟೀಮ್ ಪರಿಚಯಿಸಿದರು ತರುಣ್​ ಸುಧೀರ್.

ಇದನ್ನೂ ಓದಿ: ಎಲ್ಲಾ ಪಾತ್ರಗಳನ್ನೂ ನಾನೇ ಮಾಡೋಕಾಗಲ್ಲ; ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹೀಗೆ ಅಂದಿದ್ಯಾಕೆ?

ಸಿಕ್ಕಿಬಿದ್ದ ‘ರಾಬರ್ಟ್​’ ಪೈರಸಿ ಮಾಡುತ್ತಿದ್ದ ವ್ಯಕ್ತಿ! ‘ದುಡ್ಡು ಕೊಟ್ಟರೆ ಹೊಸ ಕಾಪಿ ಶೇರ್ ಮಾಡ್ತೀನಿ’ ಎನ್ನುತ್ತಿದ್ದ ಆರೋಪಿ!

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ