AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!

ರಾಬರ್ಟ್​ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸೇರಿತ್ತು. ನಿರ್ದೇಶಕ ತರುಣ್​ ಸುಧೀರ್​ ಅವರು ವೇದಿಕೆ ಏರುತ್ತಿದ್ದಂತೆಯೇ ದರ್ಶನ್​ ಒಂದು ಪ್ರಶ್ನೆ ಕೇಳಿಯೇ ಬಿಟ್ಟರು.

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!
ತರುಣ್​ ಸುಧೀರ್​ - ದರ್ಶನ್​
ಮದನ್​ ಕುಮಾರ್​
|

Updated on: Mar 17, 2021 | 1:40 PM

Share

ಖ್ಯಾತ ನಿರ್ದೇಶಕರ ತರುಣ್​ ಸುಧೀರ್​ ಅವರಿಗೆ ‘ರಾಬರ್ಟ್​’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಸಿಕ್ಕಿದೆ. ಸ್ಯಾಂಡಲ್​ವುಡ್​ನಲ್ಲಿ ತಾವೊಬ್ಬ ಭರವಸೆಯ ನಿರ್ದೇಶಕ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ರಾಬರ್ಟ್​ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸೇರಿತ್ತು. ಅಲ್ಲಿಯೇ ತರುಣ್​ ಮದುವೆ ವಿಚಾರ ಪ್ರಸ್ತಾಪ ಆಗಿದೆ!

ಹೌದು, ನಿರ್ದೇಶಕ ತರುಣ್​ ಸುಧೀರ್​ ಅವರ ಮದುವೆ ಬಗ್ಗೆ ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲಿ ಚರ್ಚೆ ಆಗಿದೆ. ಅದಕ್ಕೆ ಕಾರಣ ಆಗಿದ್ದು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಎಂಬುದು ವಿಶೇಷ. ಎಲ್ಲೆಡೆ ರಾಬರ್ಟ್​ ಸಿನಿಮಾ ಧೂಳೆಬ್ಬಿಸಿದೆ. ಬಾಕ್ಸ್​ ಆಫೀಸ್​ನಲ್ಲಿ 60 ಕೋಟಿ ರೂ.ಗಿಂತಲೂ ಹೆಚ್ಚಿನ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ತರುಣ್​ ಸುಧೀರ್​ ಅವರು ವೇದಿಕೆ ಏರುತ್ತಿದ್ದಂತೆಯೇ ದರ್ಶನ್​ ಒಂದು ಪ್ರಶ್ನೆ ಕೇಳಿಯೇ ಬಿಟ್ಟರು. ಮದುವೆ ಯಾವಾಗ ಅಂತ ತರುಣ್​ಗೆ ಕೇಳಿ ಎಂದು ಕಾರ್ಯಕ್ರಮದ ನಿರೂಪಕಿಗೆ ದರ್ಶನ್​ ಸೂಚಿಸಿದರು.

‘ದರ್ಶನ್​ ಸರ್​ ಹೇಳುತ್ತಿದ್ದಾರೆ ಎಂದರೆ ನಾನು ಈ ಪ್ರಶ್ನೆ ಕೇಳಲೇ ಬೇಕು. ಮದುವೆ ಯಾವಾಗ ಮಾಡಿಕೊಳ್ತೀರಿ’ ಎಂದು ತರುಣ್​ಗೆ ನಿರೂಪಕಿ ಪ್ರಶ್ನೆ ಎಸೆದರು. ಕಿಂಚಿತ್ತೂ ನಿರೀಕ್ಷಿಸಿರದ ಇಂಥ ಸಂದರ್ಭದಲ್ಲಿ ತಮ್ಮ ಮದುವೆ ಬಗ್ಗೆ ಪ್ರಸ್ತಾಪ ಆಗಿದ್ದು ನೋಡಿ ತರುಣ್​ ಒಂದು ಕ್ಷಣ ನಾಚಿ ನೀರಾದರು. ‘ಸುಮ್ಮನೆ ಇರಿ ಬಾಸ್​’ ಎಂದು ಆತ್ಮೀಯತೆಯಿಂದ ದರ್ಶನ್​ರನ್ನು ಸುಮ್ಮನಿರಿಸಲು ಪ್ರಯತ್ನಿಸಿದರು. ಆದರೂ ಹಠ ಬಿಡದೆ ದರ್ಶನ್​ ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ‘ಇನ್ನೊಂದು ಸಿನಿಮಾ ಆದ ಮೇಲೆ ಬಾಸ್​’ ಎಂದು ತರುಣ್​ ನಾಚುತ್ತಲೇ ಉತ್ತರ ನೀಡಿದರು.

‘ಈ ಸಿನಿಮಾ ಇಷ್ಟು ದೊಡ್ಡ ಯಶಸ್ಸು ಆಗಲು ನನ್ನ ಹಿಂದೆ ದೊಡ್ಡದೊಂದು ಟೀಮ್​ ಕೆಲಸ ಮಾಡಿದೆ. ಅವರನ್ನು ಬೇರೆ ಯಾವುದೇ ವೇದಿಕೆಯಲ್ಲೂ ಕರೆಸಿಕೊಳ್ಳಲು ಆಗಿರಲಿಲ್ಲ. ಆದರೆ ಈ ವೇದಿಕೆಗೆ ಅವರನ್ನು ಕರೆಯುತ್ತೇನೆ. 108 ದಿನಗಳ ಸವಾಲಿನ ಚಿತ್ರೀಕರಣಕ್ಕೆ ಈ ಟೀಮ್​ ಸಾಥ್​ ನೀಡಿತು. ನಮ್ಮೆಲ್ಲರಿಗೂ ದರ್ಶನ್​ ಸರ್​ ಸ್ಫೂರ್ತಿ ಆಗಿದ್ದರು. ನಾವೆಲ್ಲರೂ ದರ್ಶನ್​ ಅಭಿಮಾನಿಗಳು’ ಎಂದು ತಮ್ಮ ಡೈರೆಕ್ಷನ್​ ಟೀಮ್ ಪರಿಚಯಿಸಿದರು ತರುಣ್​ ಸುಧೀರ್.

ಇದನ್ನೂ ಓದಿ: ಎಲ್ಲಾ ಪಾತ್ರಗಳನ್ನೂ ನಾನೇ ಮಾಡೋಕಾಗಲ್ಲ; ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹೀಗೆ ಅಂದಿದ್ಯಾಕೆ?

ಸಿಕ್ಕಿಬಿದ್ದ ‘ರಾಬರ್ಟ್​’ ಪೈರಸಿ ಮಾಡುತ್ತಿದ್ದ ವ್ಯಕ್ತಿ! ‘ದುಡ್ಡು ಕೊಟ್ಟರೆ ಹೊಸ ಕಾಪಿ ಶೇರ್ ಮಾಡ್ತೀನಿ’ ಎನ್ನುತ್ತಿದ್ದ ಆರೋಪಿ!

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ