AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಂಗ್ ರೆಬಲ್ ಸ್ಟಾರ್ ಅಲ್ಲ, ಅಭಿಷೇಕ್ ಅಂಬರೀಶ್​ಗೆ ಹೊಸ ಹೆಸರು ಕೊಟ್ಟ ದರ್ಶನ್

Bad Manners: ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಟ್ರೈಲರ್ ಅನ್ನು ನಟ ದರ್ಶನ್ ಹಾಗೂ ಸಂಸದೆ ಸುಮಲತಾ ಬಿಡುಗಡೆ ಮಾಡಿದರು. ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ನಟ ದರ್ಶನ್ ಮಾತನಾಡಿ, ಅಭಿಷೇಕ್ ಅಂಬರೀಶ್​ಗೆ ಹೊಸ ಹೆಸರೊಂದನ್ನು ನೀಡಿದರು.

ಯಂಗ್ ರೆಬಲ್ ಸ್ಟಾರ್ ಅಲ್ಲ, ಅಭಿಷೇಕ್ ಅಂಬರೀಶ್​ಗೆ ಹೊಸ ಹೆಸರು ಕೊಟ್ಟ ದರ್ಶನ್
ಮಂಜುನಾಥ ಸಿ.
|

Updated on: Nov 12, 2023 | 10:05 PM

Share

ಅಭಿಷೇಕ್ ಅಂಬರೀಶ್ (Abhishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್‘ (Bad Manners) ಸಿನಿಮಾ ಇದೇ ತಿಂಗಳ ಕೊನೆಯ ವಾರ ಬಿಡುಗಡೆ ಆಗಲಿದೆ. ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿತ್ತು. ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆಯನ್ನು ನಟ ದರ್ಶನ್, ನಟಿ, ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಜಿಟಿ ಮಾಲ್​ನಲ್ಲಿ ಆಯೋಜಿಸಲಾಗಿತ್ತು.

ಸಿನಿಮಾದ ಟ್ರೈಲರ್ ಅನ್ನು ನಟ ದರ್ಶನ್ ಹಾಗೂ ಸುಮಲತಾ ಅವರು ಒಟ್ಟಿಗೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ನಟ ದರ್ಶನ್, ”ಸೂರಿ ಅವರ ಸಿನಿಮಾಗಳು ಭಿನ್ನವಾಗಿರುತ್ತವೆ. ಅವರದ್ದೇ ಆದ ದಾರಿಯಲ್ಲಿ ಅವರು ಸಿನಿಮಾ ಮಾಡುತ್ತಾರೆ. ಅವರ ಸಿನಿಮಾಗಳಲ್ಲಿ ಸಮಾಜವನ್ನು ಹಾನಿ ಮಾಡುತ್ತಿರುವ ವಿಷಗಳಿರುತ್ತವೆ. ಈ ಹಿಂದೆ ಡ್ರಗ್ಸ್​ ಇತ್ತು. ಈ ಸಿನಿಮಾದಲ್ಲಿ ಗನ್ ಇದೆ. ಯುವಕರು ಹೇಗೆ ಗನ್​ಗಳನ್ನು ಬಳಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರ ಬಗ್ಗೆ ಸೂರಿಯವರು ಸಿನಿಮಾ ಮಾಡಿದ್ದಾರೆ” ಎಂದಿದ್ದಾರೆ ನಟ ದರ್ಶನ್.

”ನೀವೆಲ್ಲ ಸಿನಿಮಾದ ಟ್ರೈಲರ್ ನೋಡಿದ್ದೀರಿ, ನಾನು ಒಟ್ಟಾರೆ ಸಿನಿಮಾ ನೋಡಿದ್ದೇನೆ. ಬಹಳ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಗುಣಮಟ್ಟದ ಸಿನಿಮಾ ನೋಡಿದ ಅನುಭವ ನನಗೆ ಆಯಿತು. ಇದಕ್ಕಾಗಿ ಸಿನಿಮಾಕ್ಕೆ ಕೆಲಸ ಮಾಡಿರುವ ಎಲ್ಲ ತಂತ್ರಜ್ಞರಿಗೂ ನಾನು ಧನ್ಯವಾದ ಹೇಳುತ್ತೀನಿ, ಸಿನಿಮಾದಲ್ಲಿ ಕೆಲಸ ಮಾಡಿರುವ ಎಲ್ಲ ಹಿರಿಯ ನಟರಿಗೂ ನಾನು ಧನ್ಯವಾದ ಹೇಳುತ್ತೀನಿ ಎಂದರು ದರ್ಶನ್.

ಇದನ್ನೂ ಓದಿ: ಬ್ಯಾಡ್ ಮ್ಯಾನರ್ಸ್ ಬಿಡುಗಡೆ ದಿನಾಂಕ ಘೋಷಣೆ: ಬ್ಯಾಕ್ ಲುಕ್​ನಲ್ಲಿ ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್ ಬಗ್ಗೆ ಮಾತನಾಡಿದ ನಟ ದರ್ಶನ್, ”ಮೊದಲ ಸಿನಿಮಾಗೂ ಈ ಸಿನಿಮಾಕ್ಕೂ ಅಭಿಷೇಕ್ ಅಂಬರೀಶ್ ಬಹಳ ಬದಲಾಗಿದ್ದಾರೆ. ಅವರ ಆಕ್ಟಿಂಗ್ ಸ್ಕಿಲ್ ಬದಲಾಗಿದೆ, ಸ್ಟೈಲ್ ಬದಲಾಗಿದೆ, ಇದಕ್ಕೆ ಸೂರಿಯವರೇ ಕಾರಣ. ಬಹಳ ಚೆನ್ನಾಗಿ ಕೆಲಸ ತೆಗೆಸಿಕೊಂಡಿದ್ದಾರೆ. ಇಷ್ಟು ದಿನ ಅವನನ್ನು ‘ಯಂಗ್ ರೆಬಲ್ ಸ್ಟಾರ್’ ಎನ್ನುತ್ತಿದ್ದಿರಿ, ಇನ್ನು ಮುಂದೆ ಅವರು ‘ರಿಯಲ್ ರೆಬಲ್ ಸ್ಟಾರ್’. ಅಭಿ ಈ ಸಿನಿಮಾದಲ್ಲಿ ನೋಡಲು ಸಹ ಬಹಳ ಮುದ್ದಾಗಿ ಕಾಣುತ್ತಿದ್ದಾರೆ. ಸಿನಿಮಾದ ಹೆಸರು ‘ಬ್ಯಾಡ್ ಮ್ಯಾನರ್ಸ್’ ಆದರೆ ಸಿನಿಮಾದಲ್ಲಿ ಒಳ್ಳೆಯ ಮ್ಯಾನರ್ಸ್ ಇದೆ. ಒಳ್ಳೆ ಮ್ಯಾನರ್ಸ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ ದಯವಿಟ್ಟು ಎಲ್ಲರೂ ನವೆಂಬರ್ 24ಕ್ಕೆ ಬಿಡುಗಡೆ ಆಗಲಿರುವ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ವೀಕ್ಷಿಸಿ ಎಂದರು.

ವೇದಿಕೆ ಮೇಲೆ ಹಾಜರಿದ್ದ ರವಿಚಂದ್ರನ್ ಪುತ್ರ ವಿಕ್ಕಿ, ನಟ ಧನ್ವೀರ್, ವಿನೋದ್ ಪ್ರಭಾಕರ್ ಅವರುಗಳ ಸಿನಿಮಾಗಳು ಸಹ ಮುಂದಿನ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅವರ ಸಿನಿಮಾಗಳಿಗೂ ಬೆಂಬಲ ನೀಡಿ ಎಂದು ದರ್ಶನ್ ಮನವಿ ಮಾಡಿದರು. ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ರಚಿತಾ ರಾಮ್, ದತ್ತಣ್ಣ ಇನ್ನೂ ಹಲವು ಪ್ರಮುಖ ನಟರಿದ್ದಾರೆ. ಸಿನಿಮಾದ ವಿತರಣೆ ಹಕ್ಕು, ಡಿಜಿಟಲ್, ಸ್ಯಾಟಲೈಟ್ ಹಕ್ಕುಗಳನ್ನು ಜಯಣ್ಣ ಫಿಲ್ಮ್ಸ್​ ಖರೀದಿ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು