AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ಅರೆಸ್ಟ್ ಆದವರಿಗೆ ಶಾಕ್ ಮೇಲೆ ಶಾಕ್; ಮೃತಪಡುತ್ತಿದ್ದಾರೆ ಕುಟುಂಬಸ್ಥರು

ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ.

ದರ್ಶನ್ ಜೊತೆ ಅರೆಸ್ಟ್ ಆದವರಿಗೆ ಶಾಕ್ ಮೇಲೆ ಶಾಕ್; ಮೃತಪಡುತ್ತಿದ್ದಾರೆ ಕುಟುಂಬಸ್ಥರು
ದರ್ಶನ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jul 20, 2024 | 10:46 AM

Share

ದರ್ಶನ್ ಜೊತೆ ಸೇರಿದ್ದಕ್ಕೆ ಅನೇಕರು ಕೊರಗುವಂತೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆಗುವುದರ ಜೊತೆಗೆ ಇನ್ನೂ ಅನೇಕರು ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ಅವರ ಕುಟುಂಬದವರು ಶಾಕ್​ಗೆ ಒಳಗಾಗುವಂತೆ ಆಗಿದೆ. ಈ ಮೊದಲು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದ ಅನಿಲ್ ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಈಗ ಎ4 ರಘು ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ. ಈಗ ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ.

ರಘು ತಾಯಿ ಮಂಜುಳಮ್ಮ ಕಳೆದ 1 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜುಲೈ 29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಅನಿಲ್ ಕುಮಾರ್ ಅವರ ತಂದೆ ಈ ಮೊದಲು ಮೃತಪಟ್ಟಿದ್ದರು. ಪ್ರಕರಣದಲ್ಲಿ ಪುತ್ರ ಅನಿಲ್‌ ಕುಮಾರ್ ಬಂಧನಕ್ಕೆ ಒಳಗಾಗಿದ್ದಾರೆ ಎನ್ನುವ ವಿಚಾರ ತಿಳಿದು ಅವರ ತಂದೆ ಚಂದ್ರಪ್ಪ ಶಾಕ್ ಆಗಿದ್ದರು. ಅವರು ಕೊರಗಿ ಕೊರಗಿ ನಂತರ ಹೃದಯಾಘಾತ ಆಗಿತ್ತು. ಚಂದ್ರಪ್ಪ ಅವರ ಅಂತ್ಯ ಸಂಸ್ಕಾರಕ್ಕೆ ಅನಿಲ್ ಕುಮಾರ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು