ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ: ವೈದ್ಯಕೀಯ ವರದಿಯಲ್ಲಿ ಶಾಕಿಂಗ್ ವಿಚಾರ

ನಟ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಅವರ ಪರ ವಕೀಲರು ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಎಂಆರ್​ಐ ಮತ್ತು ಸಿಟಿ ಸ್ಕ್ಯಾನ್ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ವೈದ್ಯರು ತಕ್ಷಣದ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದ್ದು, ಎಸ್​ಪಿಪಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ.

ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ: ವೈದ್ಯಕೀಯ ವರದಿಯಲ್ಲಿ ಶಾಕಿಂಗ್ ವಿಚಾರ
ದರ್ಶನ್
Follow us
| Updated By: ಮದನ್​ ಕುಮಾರ್​

Updated on: Oct 28, 2024 | 5:54 PM

ನಟ ದರ್ಶನ್​ ಅವರಿಗೆ ವಿಪರೀತ ಬೆನ್ನು ನೋವು ಇದೆ. ಈ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ತಪಾಸಣೆ ಮಾಡಿಸಲಾಗಿದೆ. ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ನೀಡಿ, ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಇಂದು (ಅಕ್ಟೋಬರ್​ 28) ಹೈಕೋರ್ಟ್​ನಲ್ಲಿ ನಡೆದಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ದರ್ಶನ್ ಅವರ ವೈದ್ಯಕೀಯ ವರದಿ ನೀಡಲಾಯಿತು. ವರದಿಯ ಪ್ರತಿ ನೀಡಲು ನಿರ್ದೇಶಿಸುವಂತೆ ಎಸ್​ಪಿಪಿ ಮನವಿ ಮಾಡಿದರು. ಮಂಗಳವಾರ (ಅ.29) ಮಧ್ಯಾಹ್ನ 2.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದು, ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಅನಾರೋಗ್ಯ ಕಾಡುತ್ತಿರುವುದರಿಂದ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮನವಿ ಮಾಡಿದ್ದಾರೆ.

‘ಎಂಆರ್​ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ನ್ಯೂರೋ ಸರ್ಜನ್ ಮೂರು ಅಂಶ ಹೇಳಿದ್ದಾರೆ. ನಂಬ್​ನೆಸ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ತಕ್ಷಣ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಪ್ಯಾರಾಲಿಸಿಸ್ ಆಗಬಹುದು. ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಬೆಂಗಳೂರಿನ ಆಸ್ಪತ್ರೆ ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮತ್ತು ಆಪರೇಷನ್​ಗೆ ಸೂಚಿಸಲಾಗಿದೆ’ ಎಂದು ವಾದ ಮಾಡಲಾಗಿದೆ.

ಇದನ್ನೂ ಓದಿ: ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಫ್ಯಾನ್ಸ್ ಕಣ್ಣೀರು ಹಾಕುವಂತಿದೆ ಈ ವಿಡಿಯೋ

ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಕಾಲಾವಕಾಶ ಕೋರಿದ್ದಾರೆ. ಹಾಗಾಗಿ ನಾಳೆಗೆ ವಿಚಾರಣೆ ಮುಂದೂಡಿಕೆ ಆಗಿದೆ. ಅಕ್ಟೋಬರ್​ 22ರಂದು ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂಆರ್​ಐ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಸದ್ಯಕ್ಕೆ ದರ್ಶನ್ ಅವರು ನಡೆಯಲು ಕೂಡ ಕಷ್ಟಪಡುತ್ತಿದ್ದಾರೆ. ಇತ್ತೀಚೆಗೆ ಅವರನ್ನು ಭೇಟಿ ಮಾಡಲು ಧನ್ವೀರ್​ ಅವರು ಬಳ್ಳಾರಿ ಜೈಲಿಗೆ ಹೋಗಿದ್ದರು. ಆಗ ದರ್ಶನ್ ಅವರು ನಾಲ್ಕು ಹೆಜ್ಜೆ ಕೂಡ ನಡೆಯಲು ಕಷ್ಟಪಟ್ಟಿದ್ದು ಕಾಣಿಸಿತು. ದರ್ಶನ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ