AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Collection: 95 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಕಾಟೇರ’; ಬಾಕ್ಸ್​ ಆಫೀಸ್​ನಲ್ಲಿ ದರ್ಶನ್​ ದಾಖಲೆ

Kaatera Box Office Collection: ಜಾತಿ ತಾರತಮ್ಯ ಮತ್ತು ರೈತರ ಸಮಸ್ಯೆಗಳ ಕುರಿತ ಕಥೆ ‘ಕಾಟೇರ’ ಸಿನಿಮಾದಲ್ಲಿದೆ. ಡೈಲಾಗ್​ಗಳಿಗೆ ಪ್ರೇಕ್ಷಕರಿಂದ ಚಪ್ಪಾಳೆ ಸಿಕ್ಕಿದೆ. ಆ್ಯಕ್ಷನ್​ ದೃಶ್ಯಗಳನ್ನು ಮಾಸ್​ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. 6 ದಿನಕ್ಕೆ ‘ಕಾಟೇರ’ ಚಿತ್ರ ಬರೋಬ್ಬರಿ 95 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ಚಿತ್ರತಂಡದ ಮೂಲಗಳು ಮಾಹಿತಿ ಹಂಚಿಕೊಂಡಿವೆ.

Kaatera Collection: 95 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಕಾಟೇರ’; ಬಾಕ್ಸ್​ ಆಫೀಸ್​ನಲ್ಲಿ ದರ್ಶನ್​ ದಾಖಲೆ
ದರ್ಶನ್​
ಮದನ್​ ಕುಮಾರ್​
| Edited By: |

Updated on:Jan 04, 2024 | 1:51 PM

Share

ಡಿಸೆಂಬರ್​ 29ರಂದು ಬಿಡುಗಡೆಯಾದ ‘ಕಾಟೇರ’ ಸಿನಿಮಾ (Kaatera Movie) ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ದರ್ಶನ್​ (Darshan) ಅಭಿನಯದ ಈ ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ರೆಟ್ರೋ ಕಹಾನಿ ಇರುವ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್​ (Kaatera Box Office Collection) ಆಗುತ್ತಿದೆ. 6 ದಿನಕ್ಕೆ ‘ಕಾಟೇರ’ ಸಿನಿಮಾ ಬರೋಬ್ಬರಿ 95.36 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ಚಿತ್ರತಂಡದ ಆಪ್ತ ಮೂಲಗಳು ಮಾಹಿತಿ ಹಂಚಿಕೊಂಡಿವೆ. ದರ್ಶನ್​ ವೃತ್ತಿಜೀವನದ ಅತಿ ದೊಡ್ಡ ಸಿನಿಮಾ ಎಂಬ ಖ್ಯಾತಿಗೆ ‘ಕಾಟೇರ’ ಪಾತ್ರವಾಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ.

ಜಾತಿ ತಾರತಮ್ಯ ಮತ್ತು ರೈತರ ಸಮಸ್ಯೆಗಳ ಕುರಿತ ಕಥೆ ‘ಕಾಟೇರ’ ಸಿನಿಮಾದಲ್ಲಿ ಇದೆ. ಡೈಲಾಗ್​ಗಳಿಗೆ ಪ್ರೇಕ್ಷಕರಿಂದ ಚಪ್ಪಾಳೆ ಸಿಕ್ಕಿದೆ. ಆ್ಯಕ್ಷನ್​ ದೃಶ್ಯಗಳನ್ನು ಮಾಸ್​ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಮಾಲಾಶ್ರೀ ಮಗಳು ಆರಾಧನಾ ರಾಮ್​ ಅವರು ಈ ಸಿನಿಮಾದಲ್ಲಿ ದರ್ಶನ್​ಗೆ ಜೋಡಿಯಾಗಿ ನಟಿಸಿದ್ದಾರೆ. ಅವಿನಾಶ್​, ಶ್ರುತಿ, ವೈಜನಾಥ ಬೀರಾದಾರ, ಜಗಪತಿ ಬಾಬು, ವಿನೋದ್​ ಆಳ್ವಾ, ಕುಮಾರ್​ ಗೋವಿಂದ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:  Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್

‘ಕಾಟೇರ’ ಸಿನಿಮಾ ಮೊದಲ ದಿನ 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30) 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ (ಡಿ.31) ಬರೋಬ್ಬರಿ 20.94 ಕೋಟಿ ರೂಪಾಯಿ ಆದಾಯ ಹರಿದುಬಂತು. ಸೋಮವಾರ (ಜ.1) 18.26 ಕೋಟಿ ರೂಪಾಯಿ ಮತ್ತು ಮಂಗಳವಾರ (ಜ.2) 9.24 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಬುಧವಾರ 9.78 ಕೋಟಿ ರೂಪಾಯಿ ಗಳಿಕೆ ಆಗಿದೆ. ಒಟ್ಟು ಕಲೆಕ್ಷನ್​ 95.36 ಕೋಟಿ ರೂ. ಆಗಿದ್ದು, ಶೀಘ್ರದಲ್ಲೇ 100 ಕೋಟಿ ರೂಪಾಯಿ ಗಡಿ ಮುಟ್ಟಲಿದೆ.

ಇದನ್ನೂ ಓದಿ: Kaatera Movie Review: ಸಂಘರ್ಷದ ಕಥೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವ ‘ಕಾಟೇರ’

‘ಕಾಟೇರ’ ಅಪ್ಪಟ ಕನ್ನಡದ ಸಿನಿಮಾ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಇದು ಬಿಡುಗಡೆ ಆಗಿಲ್ಲ. 6 ದಿನಕ್ಕೆ ಕೇವಲ ಕರ್ನಾಟದಲ್ಲೇ ಈ ಪರಿ ಕಲೆಕ್ಷನ್​ ಮಾಡಿದ ಕಾರಣಕ್ಕಾಗಿ ದರ್ಶನ್​ ಅವರು ದಾಖಲೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬದನ್ನು ಕಾದುನೋಡಬೇಕು. ಬುಧವಾರ (ಜ.3) ಬೆಂಗಳೂರಿನಲ್ಲಿ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Thu, 4 January 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು