AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ರೂಪಾಯಿಗೆ ‘ಕಾಟೇರ’ ಪೈರಸಿ ಲಿಂಕ್​ ಮಾರಾಟ; ಒಬ್ಬನ ಬಂಧನ; ಕಿಂಗ್​ಪಿನ್​​ಗಾಗಿ ಶೋಧ

ರಾಯಚೂರಿನ ಸದರ್ ಬಜಾರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಯುವಕನೊಬ್ಬ 40 ರೂಪಾಯಿಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್​ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಈ ಪ್ರಕರಣದಲ್ಲಿ ಭಾಗಿಯಾದ ಇನ್ನುಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

40 ರೂಪಾಯಿಗೆ ‘ಕಾಟೇರ’ ಪೈರಸಿ ಲಿಂಕ್​ ಮಾರಾಟ; ಒಬ್ಬನ ಬಂಧನ; ಕಿಂಗ್​ಪಿನ್​​ಗಾಗಿ ಶೋಧ
ಆರೋಪಿ ಮೌನೇಶ್​, ನಟ ದರ್ಶನ್​
ಭೀಮೇಶ್​​ ಪೂಜಾರ್
| Edited By: |

Updated on:Jan 04, 2024 | 3:23 PM

Share

ರಾಯಚೂರು: ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ (Kaatera Movie) ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಪೈರಸಿ ಕಾಟ ಕೂಡ ಶುರುವಾಗಿದೆ. ಕೆಲವು ಕಿಡಿಗೇಡಿಗಳು ಈ ಸಿನಿಮಾದ ಪೈರಸಿ ಕಾಪಿಯನ್ನು ಟಿಲಿಗ್ರಾಂ ಮೂಲಕ ಮಾರಾಟ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಅಂಥವರ ವಿರುದ್ಧ ದೂರು ದಾಖಲಾಗಿದೆ. ರಾಯಚೂರಿನಲ್ಲಿ ‘ಕಾಟೇರ’ ಚಿತ್ರದ ಪೈರಸಿ (Kaatera Piracy Link) ಲಿಂಕ್​ ಮಾರಾಟ ಮಾಡುತ್ತಿದ್ದ ಮೌನೇಶ್ ಎಂಬಾತನನ್ನು ಬಂಧಿಸಲಾಗಿದೆ. ಕಿಂಗ್​ ಪಿನ್​ ಆಗಿರುವ ಉಪೇಂದ್ರ ಎಂಬ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಯಚೂರಿನ ಸದರ್ ಬಜಾರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಮೌನೇಶ್ ಎಂಬ ಯುವಕ 40 ರೂಪಾಯಿಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್​ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಕಾಪಿ ರೈಟ್ ಆ್ಯಕ್ಟ್ ಮತ್ತು ಐಪಿಸಿ ಸೆಕ್ಷನ್​ 420 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Kaatera Collection: 95 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಕಾಟೇರ’; ಬಾಕ್ಸ್​ ಆಫೀಸ್​ನಲ್ಲಿ ದರ್ಶನ್​ ದಾಖಲೆ

‘ಕಾಟೇರ’ ಸಿನಿಮಾಗೆ ರಾಕ್​ಲೈನ್​ ವೆಂಕಟೇಶ್​ ಬಂಡವಾಳ ಹೂಡಿದ್ದಾರೆ. ಗುರುದೇಶಪಾಂಡೆ ಅವರು ಸಿನಿಮಾ ವಿತರಣೆ ಮಾಡಿದ್ದಾರೆ. ಪೈರಸಿ ಉಂಟಾಗಿದ್ದರಿಂದ ನಿರ್ಮಾಪಕರಿಗೆ ಮತ್ತು ವಿತರಕರಿಗೆ ನಷ್ಟ ಆಗಿದೆ. ಈ ಹಿನ್ನೆಲೆಯಲ್ಲಿ ವಾದಿರಾಜ ಎಂಬುವವರು ದೂರು ದಾಖಲಿಸಿದ್ದಾರೆ. ‘ವಾಟ್ಸ್ ಆಪ್’ ಮೂಲಕ ಚಾಟ್ ಮಾಡಿ 40 ರೂಪಾಯಿ ಫೋನ್ ಪೇ ಮಾಡಿ ಸಿನಿಮಾದ ಲಿಂಕ್ ಪಡೆದಿದ್ದ ವಾದಿರಾಜ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಸಿನಿಮಾ ನೋಡಿ ಮೇಘಾ ಶೆಟ್ಟಿ ಫುಲ್​ ಖುಷ್​; ಒಂದೇ ಮಾತಲ್ಲಿ ವಿಮರ್ಶೆ ತಿಳಿಸಿದ ನಟಿ

ಇತ್ತೀಚೆಗೆ ‘ಕಾಟೇರ’ ಸಿನಿಮಾದ ಸಕ್ಸಸ್​ ಮೀಟ್​ ನಡೆಯಿತು. ಆ ಸಂದರ್ಭದಲ್ಲಿ ದರ್ಶನ್​ ಅವರು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದರು. ಅದರ ನಡುವೆಯೂ ಪೈರಸಿ ಹಾವಳಿ ಮುಂದುವರಿದಿದೆ. ಇದರಿಂದ ಚಿತ್ರತಂಡಕ್ಕೆ ತೊಂದರೆ ಆಗುತ್ತಿದೆ. ‘ಕಾಟೇರ’ ಸಿನಿಮಾಗೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ದರ್ಶನ್​ ಜೊತೆ ಆರಾಧನಾ, ಶ್ರುತಿ, ಕುಮಾರ್​ ಗೋವಿಂದ್​, ಜಗಪತಿ ಬಾಬು, ವಿನೋದ್​ ಆಳ್ವಾ, ವೈಜನಾಥ ಬೀರಾದರ, ಅವಿನಾಶ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Thu, 4 January 24

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು