AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ರೂಪಾಯಿಗೆ ‘ಕಾಟೇರ’ ಪೈರಸಿ ಲಿಂಕ್​ ಮಾರಾಟ; ಒಬ್ಬನ ಬಂಧನ; ಕಿಂಗ್​ಪಿನ್​​ಗಾಗಿ ಶೋಧ

ರಾಯಚೂರಿನ ಸದರ್ ಬಜಾರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಯುವಕನೊಬ್ಬ 40 ರೂಪಾಯಿಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್​ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಈ ಪ್ರಕರಣದಲ್ಲಿ ಭಾಗಿಯಾದ ಇನ್ನುಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

40 ರೂಪಾಯಿಗೆ ‘ಕಾಟೇರ’ ಪೈರಸಿ ಲಿಂಕ್​ ಮಾರಾಟ; ಒಬ್ಬನ ಬಂಧನ; ಕಿಂಗ್​ಪಿನ್​​ಗಾಗಿ ಶೋಧ
ಆರೋಪಿ ಮೌನೇಶ್​, ನಟ ದರ್ಶನ್​
ಭೀಮೇಶ್​​ ಪೂಜಾರ್
| Edited By: |

Updated on:Jan 04, 2024 | 3:23 PM

Share

ರಾಯಚೂರು: ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ (Kaatera Movie) ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಪೈರಸಿ ಕಾಟ ಕೂಡ ಶುರುವಾಗಿದೆ. ಕೆಲವು ಕಿಡಿಗೇಡಿಗಳು ಈ ಸಿನಿಮಾದ ಪೈರಸಿ ಕಾಪಿಯನ್ನು ಟಿಲಿಗ್ರಾಂ ಮೂಲಕ ಮಾರಾಟ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಅಂಥವರ ವಿರುದ್ಧ ದೂರು ದಾಖಲಾಗಿದೆ. ರಾಯಚೂರಿನಲ್ಲಿ ‘ಕಾಟೇರ’ ಚಿತ್ರದ ಪೈರಸಿ (Kaatera Piracy Link) ಲಿಂಕ್​ ಮಾರಾಟ ಮಾಡುತ್ತಿದ್ದ ಮೌನೇಶ್ ಎಂಬಾತನನ್ನು ಬಂಧಿಸಲಾಗಿದೆ. ಕಿಂಗ್​ ಪಿನ್​ ಆಗಿರುವ ಉಪೇಂದ್ರ ಎಂಬ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಯಚೂರಿನ ಸದರ್ ಬಜಾರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಮೌನೇಶ್ ಎಂಬ ಯುವಕ 40 ರೂಪಾಯಿಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್​ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಕಾಪಿ ರೈಟ್ ಆ್ಯಕ್ಟ್ ಮತ್ತು ಐಪಿಸಿ ಸೆಕ್ಷನ್​ 420 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Kaatera Collection: 95 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಕಾಟೇರ’; ಬಾಕ್ಸ್​ ಆಫೀಸ್​ನಲ್ಲಿ ದರ್ಶನ್​ ದಾಖಲೆ

‘ಕಾಟೇರ’ ಸಿನಿಮಾಗೆ ರಾಕ್​ಲೈನ್​ ವೆಂಕಟೇಶ್​ ಬಂಡವಾಳ ಹೂಡಿದ್ದಾರೆ. ಗುರುದೇಶಪಾಂಡೆ ಅವರು ಸಿನಿಮಾ ವಿತರಣೆ ಮಾಡಿದ್ದಾರೆ. ಪೈರಸಿ ಉಂಟಾಗಿದ್ದರಿಂದ ನಿರ್ಮಾಪಕರಿಗೆ ಮತ್ತು ವಿತರಕರಿಗೆ ನಷ್ಟ ಆಗಿದೆ. ಈ ಹಿನ್ನೆಲೆಯಲ್ಲಿ ವಾದಿರಾಜ ಎಂಬುವವರು ದೂರು ದಾಖಲಿಸಿದ್ದಾರೆ. ‘ವಾಟ್ಸ್ ಆಪ್’ ಮೂಲಕ ಚಾಟ್ ಮಾಡಿ 40 ರೂಪಾಯಿ ಫೋನ್ ಪೇ ಮಾಡಿ ಸಿನಿಮಾದ ಲಿಂಕ್ ಪಡೆದಿದ್ದ ವಾದಿರಾಜ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಸಿನಿಮಾ ನೋಡಿ ಮೇಘಾ ಶೆಟ್ಟಿ ಫುಲ್​ ಖುಷ್​; ಒಂದೇ ಮಾತಲ್ಲಿ ವಿಮರ್ಶೆ ತಿಳಿಸಿದ ನಟಿ

ಇತ್ತೀಚೆಗೆ ‘ಕಾಟೇರ’ ಸಿನಿಮಾದ ಸಕ್ಸಸ್​ ಮೀಟ್​ ನಡೆಯಿತು. ಆ ಸಂದರ್ಭದಲ್ಲಿ ದರ್ಶನ್​ ಅವರು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದರು. ಅದರ ನಡುವೆಯೂ ಪೈರಸಿ ಹಾವಳಿ ಮುಂದುವರಿದಿದೆ. ಇದರಿಂದ ಚಿತ್ರತಂಡಕ್ಕೆ ತೊಂದರೆ ಆಗುತ್ತಿದೆ. ‘ಕಾಟೇರ’ ಸಿನಿಮಾಗೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ದರ್ಶನ್​ ಜೊತೆ ಆರಾಧನಾ, ಶ್ರುತಿ, ಕುಮಾರ್​ ಗೋವಿಂದ್​, ಜಗಪತಿ ಬಾಬು, ವಿನೋದ್​ ಆಳ್ವಾ, ವೈಜನಾಥ ಬೀರಾದರ, ಅವಿನಾಶ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Thu, 4 January 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್