AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್

Darshan Thoogudeepa: ದರ್ಶನ್ ತೂಗುದೀಪ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳೆದರು ತೊಡೆತಟ್ಟಲಿದೆ ‘ಕಾಟೇರ’.

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್
ಮಂಜುನಾಥ ಸಿ.
|

Updated on:Nov 29, 2023 | 5:29 PM

Share

ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ತನ್ನ ಹೆಸರು, ಪೋಸ್ಟರ್​ನಿಂದ ಈಗಾಗಲೇ ಗಮನ ಸೆಳೆದಿದೆ. ಇದೀಗ ಸಿನಿಮಾದ ಬಿಡುಗಡೆಯನ್ನೂ ಘೋಷಣೆ ಮಾಡಲಾಗಿದ್ದು, ದರ್ಶನ್, ದೊಡ್ಡ-ದೊಡ್ಡ ಸ್ಟಾರ್ ನಟರ ಎದುರು ಅಖಾಡಕ್ಕೆ ಇಳಿದಿದ್ದಾರೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಿವುಡ್​ನ ಹಾಗೂ ದಕ್ಷಿಣ ಭಾರತದ ಕೆಲವು ದೊಡ್ಡ ಸ್ಟಾರ್​ ನಟರ ಸಿನಿಮಾಗಳು ತೆರೆಗೆ ಬರುತ್ತಿವೆ. ಅದರ ನಡುವೆ ದರ್ಶನ್ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರಿ ನಿರೀಕ್ಷೆಯ ಸಿನಿಮಾಗಳ ನಡುವೆಯೇ ‘ಕಾಟೇರ’ ಸಿನಿಮಾದ ಬಿಡುಗಡೆಗೆ ಸಜ್ಜಾಗಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಎತ್ತಿ ತೋರಿಸುತ್ತಿದೆ.

ಡಿಸೆಂಬರ್ ತಿಂಗಳ 22 ರಂದು ಹೊಂಬಾಳೆ ಫಿಲಮ್ಸ್ ನಿರ್ಮಿಸಿ, ಪ್ರಭಾಸ್ ನಟಿಸಿರುವ ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಹಿಂದೆಯೇ ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ತೆರೆಗೆ ಬರಲಿದೆ. ಈ ಎರಡೂ ಸಿನಿಮಾಗಳ ಮೇಲೆ ಭಾರಿ ದೊಡ್ಡ ನಿರೀಕ್ಷೆ ಇದೆ. ಹೀಗಿರುವಾಗ ದರ್ಶನ್ ಸಿನಿಮಾ ಸಹ ಅದೇ ಸಮಯದಲ್ಲಿ ಬರುತ್ತಿದ್ದು, ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆ ಫೈಟ್ ನೋಡಲು ಸಿಗಲಿದೆ.

ಇದನ್ನೂ ಓದಿ:ಮರಿ ಟೈಗರ್​ಗೆ ಬೆಂಬಲಿಸಿದ ದರ್ಶನ್: ‘ಫೈಟರ್​’ ಅನ್ನು ಬೆಂಬಲಿಸಿ ಎಂದ ಕಾಟೇರ

ಇಂದು (ನವೆಂಬರ್ 29) ಸಣ್ಣ ಟೀಸರ್ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ದರ್ಶನ್​ರ ಅಭಿಮಾನಿಗಳಿಗೆ ಬೇಕಾದ ಮಾಸ್ ಸರಕು ಸಿನಿಮಾದಲ್ಲಿ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ದರ್ಶನ್, ಕುಲುಮೆಯಲ್ಲಿ ಮಚ್ಚುಗಳನ್ನು ಮಾಡುತ್ತಿರುವ ದೃಶ್ಯ, ಮಚ್ಚುಗಳ ರಾಶಿ, ಈ ಸಿನಿಮಾ ಪಕ್ಕಾ ಮಾಸ್ ಆಕ್ಷನ್ ಸಿನಿಮಾ ಎಂಬುದನ್ನು ಜೋರಾಗಿಯೇ ಸಾರುತ್ತಿವೆ. ಟೀಸರ್​ನ ಕೊನೆಯಲ್ಲಿ ದರ್ಶನ್ ನಾಟಿ ಬೀಡಿ ಹೊತ್ತಿಸುವ ಸ್ಟೈಲ್ ಸಹ ಭಿನ್ನವಾಗಿದೆ.

‘ಕಾಟೇರ’ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಇದು ಇವರ ಮೊದಲ ಸಿನಿಮಾ. ಸಿನಿಮಾಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಜಗಪತಿ ಬಾಬು ವಿಲನ್ ಆಗಿ ನಟಿಸಿದ್ದಾರೆ. ‘ರಾಬರ್ಟ್’ ಬಳಿಕ ಮತ್ತೊಮ್ಮೆ ದರ್ಶನ್​ ಸಿನಿಮಾಕ್ಕೆ ವಿಲನ್ ಆಗಿದ್ದಾರೆ ಜಗಪತಿ ಬಾಬು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 29 November 23

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ