AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್

Darshan Thoogudeepa: ದರ್ಶನ್ ತೂಗುದೀಪ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳೆದರು ತೊಡೆತಟ್ಟಲಿದೆ ‘ಕಾಟೇರ’.

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್
ಮಂಜುನಾಥ ಸಿ.
|

Updated on:Nov 29, 2023 | 5:29 PM

Share

ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ತನ್ನ ಹೆಸರು, ಪೋಸ್ಟರ್​ನಿಂದ ಈಗಾಗಲೇ ಗಮನ ಸೆಳೆದಿದೆ. ಇದೀಗ ಸಿನಿಮಾದ ಬಿಡುಗಡೆಯನ್ನೂ ಘೋಷಣೆ ಮಾಡಲಾಗಿದ್ದು, ದರ್ಶನ್, ದೊಡ್ಡ-ದೊಡ್ಡ ಸ್ಟಾರ್ ನಟರ ಎದುರು ಅಖಾಡಕ್ಕೆ ಇಳಿದಿದ್ದಾರೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಿವುಡ್​ನ ಹಾಗೂ ದಕ್ಷಿಣ ಭಾರತದ ಕೆಲವು ದೊಡ್ಡ ಸ್ಟಾರ್​ ನಟರ ಸಿನಿಮಾಗಳು ತೆರೆಗೆ ಬರುತ್ತಿವೆ. ಅದರ ನಡುವೆ ದರ್ಶನ್ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರಿ ನಿರೀಕ್ಷೆಯ ಸಿನಿಮಾಗಳ ನಡುವೆಯೇ ‘ಕಾಟೇರ’ ಸಿನಿಮಾದ ಬಿಡುಗಡೆಗೆ ಸಜ್ಜಾಗಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಎತ್ತಿ ತೋರಿಸುತ್ತಿದೆ.

ಡಿಸೆಂಬರ್ ತಿಂಗಳ 22 ರಂದು ಹೊಂಬಾಳೆ ಫಿಲಮ್ಸ್ ನಿರ್ಮಿಸಿ, ಪ್ರಭಾಸ್ ನಟಿಸಿರುವ ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಹಿಂದೆಯೇ ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ತೆರೆಗೆ ಬರಲಿದೆ. ಈ ಎರಡೂ ಸಿನಿಮಾಗಳ ಮೇಲೆ ಭಾರಿ ದೊಡ್ಡ ನಿರೀಕ್ಷೆ ಇದೆ. ಹೀಗಿರುವಾಗ ದರ್ಶನ್ ಸಿನಿಮಾ ಸಹ ಅದೇ ಸಮಯದಲ್ಲಿ ಬರುತ್ತಿದ್ದು, ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆ ಫೈಟ್ ನೋಡಲು ಸಿಗಲಿದೆ.

ಇದನ್ನೂ ಓದಿ:ಮರಿ ಟೈಗರ್​ಗೆ ಬೆಂಬಲಿಸಿದ ದರ್ಶನ್: ‘ಫೈಟರ್​’ ಅನ್ನು ಬೆಂಬಲಿಸಿ ಎಂದ ಕಾಟೇರ

ಇಂದು (ನವೆಂಬರ್ 29) ಸಣ್ಣ ಟೀಸರ್ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ದರ್ಶನ್​ರ ಅಭಿಮಾನಿಗಳಿಗೆ ಬೇಕಾದ ಮಾಸ್ ಸರಕು ಸಿನಿಮಾದಲ್ಲಿ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ದರ್ಶನ್, ಕುಲುಮೆಯಲ್ಲಿ ಮಚ್ಚುಗಳನ್ನು ಮಾಡುತ್ತಿರುವ ದೃಶ್ಯ, ಮಚ್ಚುಗಳ ರಾಶಿ, ಈ ಸಿನಿಮಾ ಪಕ್ಕಾ ಮಾಸ್ ಆಕ್ಷನ್ ಸಿನಿಮಾ ಎಂಬುದನ್ನು ಜೋರಾಗಿಯೇ ಸಾರುತ್ತಿವೆ. ಟೀಸರ್​ನ ಕೊನೆಯಲ್ಲಿ ದರ್ಶನ್ ನಾಟಿ ಬೀಡಿ ಹೊತ್ತಿಸುವ ಸ್ಟೈಲ್ ಸಹ ಭಿನ್ನವಾಗಿದೆ.

‘ಕಾಟೇರ’ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಇದು ಇವರ ಮೊದಲ ಸಿನಿಮಾ. ಸಿನಿಮಾಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಜಗಪತಿ ಬಾಬು ವಿಲನ್ ಆಗಿ ನಟಿಸಿದ್ದಾರೆ. ‘ರಾಬರ್ಟ್’ ಬಳಿಕ ಮತ್ತೊಮ್ಮೆ ದರ್ಶನ್​ ಸಿನಿಮಾಕ್ಕೆ ವಿಲನ್ ಆಗಿದ್ದಾರೆ ಜಗಪತಿ ಬಾಬು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 29 November 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ