‘ಕಾಟೇರ’ ಟ್ರೈಲರ್ ಬಿಡುಗಡೆ: ಧಣಿಗಳ ವಿರುದ್ಧ ಬಂಡಾಯದ ಕತೆ

Katera Trailer: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ದರ್ಶನ್​ರ ಮಾಸ್ ಅವತಾರ, ಹಳ್ಳಿಗಾಡಿನ ಹಿನ್ನೆಲೆಯ ಹೋರಾಟದ ಕತೆ ಗಮನ ಸೆಳೆಯುತ್ತಿದೆ.

‘ಕಾಟೇರ’ ಟ್ರೈಲರ್ ಬಿಡುಗಡೆ: ಧಣಿಗಳ ವಿರುದ್ಧ ಬಂಡಾಯದ ಕತೆ
ಕಾಟೇರ
Follow us
|

Updated on: Dec 16, 2023 | 10:32 PM

ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಟ್ರೈಲರ್ ಬಿಡುಗಡೆ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ, ನಟ ದರ್ಶನ್ ಸೇರಿದಂತೆ ‘ಕಾಟೇರ’ ಸಿನಿಮಾದ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯೂಟ್ಯೂಬ್​ನಲ್ಲಿ ‘ಕಾಟೇರ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ದರ್ಶನ್ ಮಾಸ್ ಇಮೇಜಿಗೆ ತಕ್ಕಂತೆ ಪಕ್ಕಾ ಆಕ್ಷನ್ ಕತೆಯನ್ನು ಹಳ್ಳಿಯ ಹಿನ್ನೆಲೆಯಲ್ಲಿ ತೆರೆಗೆ ತಂದಿರುವ ಭರವಸೆಯನ್ನು ಟ್ರೈಲರ್ ಮೂಡಿಸುತ್ತಿದೆ.

ಹಳ್ಳಿಯಲ್ಲೊಬ್ಬ ಧಣಿ, ಅದೇ ಹಳ್ಳಿಯ ಕುಲುಮೆಯಲ್ಲಿ ಕಾಯಕ ಮಾಡುವ ಗಟ್ಟಿಮುಟ್ಟು ಯುವಕ. ಧಣಿಯ ದಬ್ಬಾಳಿಕೆ ವಿರುದ್ಧ ಸಿಡಿದೇಳುವ ಯುವಕನ ಕತೆ ‘ಕಾಟೇರ’ ಎಂಬಂತೆ ಟ್ರೈಲರ್ ನೋಡಿದರೆ ಅನ್ನಿಸುತ್ತದೆ. ಆದರೆ ಇದು ಮಾತ್ರವೇ ಅಲ್ಲದೆ ಇನ್ನೂ ಕೆಲವು ಅಂಶಗಳು ಸಿನಿಮಾದಲ್ಲಿ ಇದ್ದಂತಿದೆ. ಸಿನಿಮಾದಲ್ಲಿ ದೇವರು, ದೇವರಿಗಾಗಿ ಹಳ್ಳಿಗಳ ನಡುವೆ ಕಾದಾಟದ ಕತೆ ಇದೆ. ರೈತರ ಸಂಕಷ್ಟಗಳ ಬಗ್ಗೆ ಸಂದೇಶವಿದ್ದಂತಿದೆ. ಜೊತೆಗೆ ಕುಟುಂಬದ ಭಾವನಾತ್ಮಕ ಸನ್ನಿವೇಶಗಳು ಇವೆ.

ಇದೀಗ ಬಿಡುಗಡೆ ಆಗಿರುವ ಟ್ರೈಲರ್​ನಲ್ಲಿ ದರ್ಶನ್ ಬೇರೆ-ಬೇರೆ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾಯಕ ಯುವಕನಾಗಿ, ಅನ್ಯಾಯದ ವಿರುದ್ಧ ಸಿಡಿದೇಳುವ ವ್ಯಕ್ತಿಯಾಗಿ, ಪ್ರೀತಿಸಿದವರಿಗಾಗಿ ನೋವು ನುಂಗುವ ಕರ್ಣನಾಗಿ, ಪ್ರೀತಿಸುವ ರೊಮ್ಯಾಂಟಿಕ್ ಹುಡುಗನಾಗಿ, ರೈತರಲ್ಲಿ ಸ್ಪೂರ್ತಿ ತುಂಬುವ ಸ್ಪೂರ್ತಿಯ ಸೆಲೆಯಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಜೈಲಿನಿಂದ ಬರುತ್ತಿರುವ ಮಾಜಿ ಖೈದಿಯಾಗಿ, ಮಾರಣ ಹೋಮ ಮಾಡುವ ಭೀಬತ್ಸ ದಾಂಡಿಗನಾಗಿಯೂ ದರ್ಶನ್ ಕಾಣುತ್ತಾರೆ.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ದರ್ಶನ್-ಸಿದ್ದರಾಮಯ್ಯ ಹವಾ: ‘ಕಾಟೇರ’ ಟ್ರೈಲರ್ ಲಾಂಚ್ ಲೈವ್ ಇಲ್ಲಿ ನೋಡಿ

ಟ್ರೈಲರ್​ನಲ್ಲಿ ದರ್ಶನ್ ಹೊರತಾಗಿ ನಾಯಕಿ ರಾಧನಾ, ಶ್ರುತಿ, ಕುಮಾರ್ ಗೋವಿಂದ್ ಹಾಗೂ ಜಗಪತಿ ಬಾಬು ಅವರು ಸಖತ್ ಗಮನ ಸೆಳೆಯುತ್ತಾರೆ. ಟ್ರೈಲರ್​ನಲ್ಲಿ ಹಾಡುಗಳ ತುಣುಗಳು ಸಹ ಇಣುಕಿದ್ದು, ಸುಂದರವಾದ ತಾಣಗಳಲ್ಲಿ ಹಾಡುಗಳನ್ನು ಚಿತ್ರೀಕರಿಸಿರುವುದು ಕಾಣುತ್ತಿದೆ. ಸಂಗೀತವೂ ಗಮನ ಸೆಳೆಯುತ್ತಿದೆ. ದೃಶ್ಯಗಳ ಗುಣಮಟ್ಟವೂ ಸಹ ಚೆನ್ನಾಗಿ ಕಾಣುತ್ತಿದೆ.

‘ಕಾಟೇರ’ ಸಿನಿಮಾವು ಡಿಸೆಂಬರ್ 29ರಂದು ಬಿಡುಗಡೆ ಆಗುತ್ತಿದೆ. ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಕುಮಾರ್ ಗೋವಿಂದ್, ಶ್ರುತಿ, ಜಗಪತಿ ಬಾಬು ಸೇರಿದಂತೆ ಇನ್ನೂ ಹಲವು ಹಿರಿಯ ನಟರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು