AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Piracy : ‘ರಾಬರ್ಟ್​’ ಚಿತ್ರದ 3 ಸಾವಿರ ಪೈರಸಿ ಲಿಂಕ್​ ಪತ್ತೆ! ದರ್ಶನ್​ ಸಿನಿಮಾ ಮೇಲೆ ಕಿಡಿಗೇಡಿಗಳ ಕಣ್ಣು

ಎಷ್ಟೇ ಕಷ್ಟಪಟ್ಟು ಸಿನಿಮಾ ಮಾಡಿದರೂ ಪೈರಸಿ ಹಾವಳಿಯಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡಬೇಕು. ದರ್ಶನ್​ ನಟನೆಯ ರಾಬರ್ಟ್ ಚಿತ್ರಕ್ಕೂ ಈ ಸಮಸ್ಯೆ ಎದುರಾಗಿದೆ.

Roberrt Piracy : ‘ರಾಬರ್ಟ್​’ ಚಿತ್ರದ 3 ಸಾವಿರ ಪೈರಸಿ ಲಿಂಕ್​ ಪತ್ತೆ! ದರ್ಶನ್​ ಸಿನಿಮಾ ಮೇಲೆ ಕಿಡಿಗೇಡಿಗಳ ಕಣ್ಣು
ದರ್ಶನ್​ - ಆಶಾ ಭಟ್​
ಮದನ್​ ಕುಮಾರ್​
|

Updated on: Mar 12, 2021 | 3:53 PM

Share

‘ಡಿ ಬಾಸ್’​ ದರ್ಶನ್​ ನಟನೆಯ ‘ರಾಬರ್ಟ್​’ ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡುತ್ತಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಆದರೂ ಈ ನಡುವೆ ಒಂದು ತಲೆ ನೋವು ಶುರು ಆಗಿದೆ. ಪೈರಸಿ ಹಾವಳಿ ವಿರುದ್ಧ ಚಿತ್ರತಂಡ ಹಗಲು-ರಾತ್ರಿ ಹೋರಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಶಿವರಾತ್ರಿ ಪ್ರಯುಕ್ತ ಗುರುವಾರ (ಮಾ.11) ರಾಬರ್ಟ್​ ಸಿನಿಮಾ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆ ಆಗಿತ್ತು. ಒಂದು ದಿನ ಕಳೆಯುವುದರೊಳಗೆ ಪೈರಸಿ ಕಾಟ ಶುರುವಾಗಿದೆ. ಕೆಲವು ಕಿಡಿಗೇಡಿಗಳು ಈ ಸಿನಿಮಾವನ್ನು ಮೊಬೈಲ್​ನಲ್ಲಿ ಚಿತ್ರಿಸಿ, ಆನ್​ಲೈನ್​ಗೆ ಅಪ್​ಲೋಡ್​ ಮಾಡುತ್ತಿದ್ದಾರೆ. ಇದು ಚಿತ್ರತಂಡದ ಗಮನಕ್ಕೂ ಬಂದಿದ್ದು, ಇಂಥ ಖಧೀಮರ ವಿರುದ್ಧ ಸಮರ ಸಾರಿದೆ. ಅಚ್ಚರಿ ಏನೆಂದರೆ, ಮೂರು ಸಾವಿರಕ್ಕೂ ಅಧಿಕ ಪೈರಸಿ ಲಿಂಕ್​ಗಳು ಪತ್ತೆ ಆಗಿವೆ!

ಪೈರಸಿ ಮಾಡುವವರಿಗೆ ಸೂಕ್ತ ಶಿಕ್ಷೆ ಕೊಡಿಸಲಾಗುವುದು ಅಂತ ಸಿನಿಮಾ ಬಿಡುಗಡೆಗಿಂತ ಮುನ್ನವೇ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಖಡಕ್​ ಎಚ್ಚರಿಕೆ ನೀಡಿದ್ದರು. ಈಗ ಅವರ ತಂಡ ಪೈರಸಿ ಲಿಂಕ್​ಗಳನ್ನು ಡಿಲಿಟ್​ ಮಾಡುವ ಕಾರ್ಯದಲ್ಲಿ ನಿರತವಾಗಿದೆ. ಯಾವುದೇ ಕಾರಣಕ್ಕೂ ಇಂಟರ್​ನೆಟ್​ನಲ್ಲಿ ರಾಬರ್ಟ್​ ಸಿನಿಮಾದ ಪೈರಸಿ ಕಾಪಿ ಲಭ್ಯವಾಗಬಾರದು ಎಂದು ಹರಸಾಹಸ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಈ ಸಿನಿಮಾ ಪೈರಸಿ ಕಾಟ ಎದುರಿಸುತ್ತಿರುವುದು ಡಿ ಬಾಸ್​ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಅದೇನೇ ಇದ್ದರೂ ಕಲೆಕ್ಷನ್​ ವಿಚಾರದಲ್ಲಿ ‘ರಾಬರ್ಟ್​’ ಹಿಂದೆ ಬಿದ್ದಿಲ್ಲ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಬಾಕ್ಸ್​ ಆಫೀಸ್​ ಸುಲ್ತಾನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮೊದಲ ದಿನವೇ 17 ಕೋಟಿ ರೂ. ಕಲೆಕ್ಷನ್​ ಆಗಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ 3.12 ಕೋಟಿ ರೂ. ಆದಾಯ ಬಂದಿದೆ. ಶುಕ್ರವಾರ ಕೂಡ ಅನೇಕ ಶೋಗಳು ಹೌಸ್​ಫುಲ್​ ಆಗಿವೆ. ವೀಕೆಂಡ್​ನಲ್ಲೂ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಆದರೆ ಪೈರಸಿ ವಿರುದ್ಧ ಚಿತ್ರತಂಡ ಹಗಲು-ರಾತ್ರಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Roberrt Telugu Collection: ತೆಲುಗು ನೆಲದಲ್ಲಿ ತೊಡೆತಟ್ಟಿದ ‘ರಾಬರ್ಟ್​’! ಆಂಧ್ರ-ತೆಲಂಗಾಣದಲ್ಲಿ ಎಷ್ಟು ಕೋಟಿ ಕಲೆಕ್ಷನ್​?

Roberrt 1st Day Collection: ‘ರಾಬರ್ಟ್​’ ಚಿತ್ರಕ್ಕೆ ಮೊದಲ ದಿನವೇ ಯಾವ ಯಾವ ಜಿಲ್ಲೆಗಳಿಂದ ಎಷ್ಟು ಕಲೆಕ್ಷನ್​? ಇಲ್ಲಿದೆ ರಿಪೋರ್ಟ್​

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ