AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Collection: 59.8 ಕೋಟಿ ರೂ. ಬಾಚಿಕೊಂಡ ‘ರಾಬರ್ಟ್​’! ಇಲ್ಲಿದೆ 4 ದಿನದ ಬಾಕ್ಸ್​ ಆಫೀಸ್​ ರಿಪೋರ್ಟ್​

ರಾಬರ್ಟ್​ ಸಿನಿಮಾದ ನಾಗಾಲೋಟ ಮುಂದುವರಿದಿದೆ. ಸತತ ನಾಲ್ಕನೇ ದಿನ ಎಲ್ಲೆಡೆ ಹೌಸ್​ ಫುಲ್​ ಪ್ರದರ್ಶನ ಕಂಡಿದ್ದು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್​ ಆಗಿದೆ.

Roberrt Collection: 59.8 ಕೋಟಿ ರೂ. ಬಾಚಿಕೊಂಡ ‘ರಾಬರ್ಟ್​’! ಇಲ್ಲಿದೆ 4 ದಿನದ ಬಾಕ್ಸ್​ ಆಫೀಸ್​ ರಿಪೋರ್ಟ್​
ದರ್ಶನ್​ ರಾಬರ್ಟ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Mar 15, 2021 | 11:15 AM

Share

ಭಾರೀ ನಿರೀಕ್ಷೆಗಳೊಂದಿಗೆ ತೆರೆಕಂಡ ‘ರಾಬರ್ಟ್​’ ಚಿತ್ರಕ್ಕೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಅದರ ಪರಿಣಾಮವಾಗಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಉತ್ತಮ ಕಮಾಯಿ ಆಗುತ್ತಿದೆ. ಸತತ ನಾಲ್ಕು ದಿನಗಳ ಕಾಲ ಬಹುತೇಕ ಚಿತ್ರಮಂದಿರಗಳಲ್ಲಿ ‘ರಾಬರ್ಟ್​’ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈವರೆಗೂ ಒಟ್ಟು 59.8 ಕೋಟಿ ರೂ. ಕಲೆಕ್ಷನ್​ ಆಗಿದೆ.

ಕೊರೊನಾ ಲಾಕ್​ಡೌನ್​ ಕಾರಣದಿಂದ ಎಲ್ಲ ಭಾಷೆಯ ಚಿತ್ರರಂಗಗಳು ಸೊರಗಿದ್ದವು. ಯಾವುದೇ ವಹಿವಾಟು ಇಲ್ಲದೆ ಹೀನಾಯವಾಗಿ ಮಲಗಿದ್ದ ಚಿತ್ರೋದ್ಯಮಕ್ಕೆ ರಾಬರ್ಟ್​ ಸಿನಿಮಾದಿಂದಾಗಿ ಹೊಸ ಚೈತನ್ಯ ಸಿಕ್ಕಿದೆ. ಬಿಡುಗಡೆಯಾದ ಮೊದಲ ದಿನವೇ (ಮಾ.11) ಈ ಸಿನಿಮಾ 17.24 ಕೋಟಿ ರೂ. ಬಾಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿತ್ತು. ಅಲ್ಲಿಂದ ಮುಂದಿನ ಮೂರು ದಿನವೂ ಭರ್ಜರಿ ಕಲೆಕ್ಷನ್​ ಆಗಿದೆ.

ಎರಡನೇ ದಿನ 12.78 ಕೋಟಿ, ಮೂರನೇ ದಿನ 14.10 ಕೋಟಿ ಹಾಗೂ ನಾಲ್ಕನೇ ದಿನ ಬರೋಬ್ಬರಿ 15.68 ಕೋಟಿ ರೂ. ಹರಿದುಬಂದಿದೆ. ಈ ನಾಲ್ಕು ದಿನಗಳ ಕಲೆಕ್ಷನ್​ ಸೇರಿದರೆ 59.8 ಕೋಟಿ ರೂ. ಆಗಲಿದೆ. ನಾಲ್ಕೇ ದಿನದಲ್ಲಿ ಹಾಫ್​ ಸೆಂಚುರಿ ಬಾರಿಸಿದ ಕೀರ್ತಿ ರಾಬರ್ಟ್​ಗೆ ಸಲ್ಲುತ್ತದೆ. ಈ ಗೆಲುವನ್ನು ದರ್ಶನ್​ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಫ್ಯಾಮಿಲಿ ಪ್ರೇಕ್ಷಕರು ಕೂಡ ಸಿನಿಮಾವನ್ನು ಮೆಚ್ಚಿಕೊಂಡಿರುವುದು ಚಿತ್ರತಂಡಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

ಇನ್ನು, ಆಂಧ್ರ ಮತ್ತು ತೆಲಂಗಾಣದಲ್ಲೂ ‘ರಾಬರ್ಟ್​’ ಅಬ್ಬರಿಸುತ್ತಿದ್ದಾನೆ. ನಾಲ್ಕು ದಿನಗಳಲ್ಲಿ ಚಿತ್ರದ ತೆಲುಗು ವರ್ಷನ್​ನಿಂದ 6.19 ರೂ. ಸಂಗ್ರಹ ಆಗಿದೆ. ಸದ್ಯಕ್ಕಂತೂ ಎಲ್ಲೆಲ್ಲೂ ರಾಬರ್ಟ್​ನದ್ದೇ ಹವಾ. ಸತತ 5ನೇ ದಿನ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಈಗ 59.8 ಕೋಟಿ ರೂ. ಬಾಚಿಕೊಂಡಿರುವ ಈ ಸಿನಿಮಾ 100 ಕೋಟಿ ರೂ. ಕ್ಲಬ್​ ಸೇರಿಕೊಳ್ಳುತ್ತಾ ಎಂಬ ಕೌತುಕ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ.

ಇದನ್ನೂ ಓದಿ: Roberrt Kannada Movie Review: ಒಂದೇ ಟಿಕೆಟ್​ನಲ್ಲಿ ದರ್ಶನ್​ ಫ್ಯಾನ್ಸ್​ಗೆ ರಾಬರ್ಟ್​ ಮತ್ತು ರಾಘವನ ಡಬಲ್​ ಧಮಾಕಾ!

ಸಿಕ್ಕಿಬಿದ್ದ ‘ರಾಬರ್ಟ್​’ ಪೈರಸಿ ಮಾಡುತ್ತಿದ್ದ ವ್ಯಕ್ತಿ! ‘ದುಡ್ಡು ಕೊಟ್ಟರೆ ಹೊಸ ಕಾಪಿ ಶೇರ್ ಮಾಡ್ತೀನಿ’ ಎನ್ನುತ್ತಿದ್ದ ಆರೋಪಿ!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್