AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ರೂ. ಬಾಚಿಕೊಂಡ ರಾಬರ್ಟ್​! ಸ್ಯಾಂಡಲ್​ವುಡ್​ನಲ್ಲಿ ದರ್ಶನ್​ ಹೊಸ ದಾಖಲೆ

Roberrt Box Office collection: 100 ಕೋಟಿ ರೂ. ಕ್ಲಬ್​ ಸೇರುವತ್ತ ಹೆಜ್ಜೆ ಹಾಕುತ್ತಿದ್ದ ರಾಬರ್ಟ್​ ಸಿನಿಮಾ ಕಡೆಗೂ 20ನೇ ದಿನಕ್ಕೆ ಈ ಗುರಿ ಮುಟ್ಟಿದೆ. ಸ್ಯಾಂಡಲ್​ವುಡ್​ ಇತಿಹಾಸದಲ್ಲೇ ಇಂಥ ಸಾಥನೆ ಮಾಡಿದ ಮೊದಲ ಸಿನಿಮಾ ಎಂಬ ಖ್ಯಾತಿಗೆ ರಾಬರ್ಟ್​ ಪಾತ್ರವಾಗಿದೆ.

100 ಕೋಟಿ ರೂ. ಬಾಚಿಕೊಂಡ ರಾಬರ್ಟ್​! ಸ್ಯಾಂಡಲ್​ವುಡ್​ನಲ್ಲಿ ದರ್ಶನ್​ ಹೊಸ ದಾಖಲೆ
ದರ್ಶನ್​ - ರಾಬರ್ಟ್​
ಮದನ್​ ಕುಮಾರ್​
|

Updated on:Mar 31, 2021 | 2:19 PM

Share

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಗೆದ್ದು ಬೀಗಿದೆ. ಚಂದನವನದ ಬಾಕ್ಸ್​ ಆಫೀಸ್​ನಲ್ಲಿ ಈವರೆಗೂ ಯಾವ ಚಿತ್ರವೂ ಮಾಡಿರದ ಸಾಧನೆಯನ್ನು ‘ರಾಬರ್ಟ್​’ ಮಾಡಿದೆ. ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂ. ಕಲೆಕ್ಷನ್​ ಆಗಿದೆ. ದರ್ಶನ್​ ಅವರು ಬಾಕ್ಸ್​ ಆಫೀಸ್​ ಸುಲ್ತಾನ ಎಂಬುದು ಮತ್ತೆ ಸಾಬೀತಾಗಿದೆ.

ಮಾ.11ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದ್ದ ರಾಬರ್ಟ್ ಸಿನಿಮಾ ಮೊದಲ ದಿನವೇ 17.24 ಕೋಟಿ ರೂ. ಕಲೆಕ್ಷನ್​ ಮಾಡಿತ್ತು. ಎರಡನೇ ದಿನ 12.78 ಕೋಟಿ, ಮೂರನೇ ದಿನ 14.10 ಕೋಟಿ ಹಾಗೂ ನಾಲ್ಕನೇ ದಿನ ಬರೋಬ್ಬರಿ 15.68 ಕೋಟಿ ರೂ. ಹರಿದುಬಂತು. ಒಂದು ವಾರದ ಬಳಿಕವೂ ರಾಬರ್ಟ್​ ನಾಗಾಲೋಟ ಮುಂದುವರಿದಿತ್ತು. 8 ದಿನಗಳಲ್ಲಿ ಈ ಚಿತ್ರ 78.36 ಕೋಟಿ ರೂ. ಬಾಚಿಕೊಂಡು ಗೆಲುವಿನ ಪತಾಕೆ ಹಾರಿಸಿತ್ತು. ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.

ರಾಬರ್ಟ್​ ಬಿಡುಗಡೆಯಾಗಿ 20 ದಿನ ಕಳೆದಿದೆ. ಒಂದು ವಾರದ ಬಳಿಕ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಇಳಿಮುಖ ಆಗಿದ್ದರೂ ಕೂಡ ಉತ್ತಮ ಪ್ರದರ್ಶನ ಕಾಣುತ್ತಿತ್ತು. 100 ಕೋಟಿ ಕ್ಲಬ್​ ಸೇರುವತ್ತ ನಿಧಾನವಾಗಿ ಹೆಜ್ಜೆ ಹಾಕುತ್ತಿದ್ದ ಈ ಸಿನಿಮಾ ಕಡೆಗೂ 20ನೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್​ ಮಾಡಿದೆ. ಸ್ಯಾಂಡಲ್​ವುಡ್​ ಇತಿಹಾಸದಲ್ಲೇ ಇಂಥ ಸಾಥನೆ ಮಾಡಿದ ಮೊದಲ ಸಿನಿಮಾ ಎಂಬ ಖ್ಯಾತಿಗೆ ರಾಬರ್ಟ್​ ಪಾತ್ರವಾಗಿದೆ.

ತರುಣ್​ ಸುಧೀರ್​ ನಿರ್ದೇಶನ ಹಾಗೂ ಉಮಾಪತಿ ಶ್ರೀನಿವಾಸ್​ ಗೌಡ ನಿರ್ಮಾಣದ ‘ರಾಬರ್ಟ್​’ಗೆ ಆಶಾ ಭಟ್​ ನಾಯಕಿ. ಚಂದನವನದಲ್ಲಿ ಆಶಾ ಭಟ್​ಗೆ ಇದು ಮೊದಲ ಸಿನಿಮಾ. ಹೀಗೆ ಅವರ ಚೊಚ್ಚಲ ಚಿತ್ರವೇ ​100 ಕೋಟಿ ರೂ. ಕ್ಲಬ್​ ಸೇರಿಕೊಂಡಿರುವುದು ಹೆಚ್ಚುಗಾರಿಕೆ. ದರ್ಶನ್​ ವೃತ್ತಿಜೀವನಕ್ಕೆ ರಾಬರ್ಟ್​ನಿಂದ ಅತಿ ದೊಡ್ಡ ಹಿಟ್​ ಸಿಕ್ಕಿದೆ. ನಿರ್ದೇಶಕ ತರುಣ್​ ಸುಧೀರ್​ ಒಬ್ಬ ಯಶಸ್ವಿ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.

2018ರಲ್ಲಿ ತೆರೆಕಂಡ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಕೇವಲ 7 ದಿನಕ್ಕೆ 100 ಕೋಟಿ ರೂ. ಗಳಿಸಿತ್ತು ಎಂದು ವರದಿ ಆಗಿತ್ತು. ಆದರೆ ಆ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಿಗೂ ಡಬ್​ ಆಗಿ ಅಷ್ಟು ಕಲೆಕ್ಷನ್​ ಮಾಡಿತ್ತು. ಕೇವಲ ಕನ್ನಡದಲ್ಲೇ 100 ಕೋಟಿ ರೂ. ಗಳಿಸುವ ಮೂಲಕ ‘ರಾಬರ್ಟ್​’ ತನ್ನದೇ ಹಾದಿಯಲ್ಲಿ ರೆಕಾರ್ಡ್​ ಮಾಡಿದೆ.

ರಾಬರ್ಟ್​ಗೆ ಈ ಪರಿ ಯಶಸ್ಸು ಸಿಗುವುದಕ್ಕೆ ಕಾರಣವಾದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸುವ ಸಲುವಾಗಿ ರಾಜ್ಯಾದ್ಯಂತ ವಿಜಯ ಯಾತ್ರೆ ಮಾಡಬೇಕು ಎಂದು ದರ್ಶನ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಆದರೆ ಕೋವಿಡ್​-19 ಎರಡನೇ ಅಲೆ ಹರಡುವ ಭೀತಿಯಿಂದಾಗಿ ಸದ್ಯಕ್ಕೆ ವಿಜಯ ಯಾತ್ರೆಯನ್ನು ಕ್ಯಾನ್ಸಲ್​ ಮಾಡಲಾಗಿದೆ. ಸೋಶಿಯಲ್​ ಮೀಡಿಯಾ ಮೂಲಕವೇ ದರ್ಶನ್​ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಕೋವಿಡ್​ ವಿಘ್ನಗಳ ನಡುವೆಯೂ ರಾಬರ್ಟ್​ 100 ಕೋಟಿ ರೂ. ಸಾಧನೆ ಮಾಡಿರುವುದಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಅಭಿಮಾನಿಗಳಿಗೆ ರಾಬರ್ಟ್​ ಕಡೆಯಿಂದ ಸಿಕ್ತು ಕಲರ್​ಫುಲ್​ ಗಿಫ್ಟ್​!

Darshan: ರಿಯಲ್ ಸಾರಥಿ ಜೊತೆ ರೀಲ್​ ಸಾರಥಿ ಭೇಟಿ! ಡಿ ಬಾಸ್​ ದರ್ಶನ್​ ಬಾಲ್ಯದ ವಿಶೇಷ ವ್ಯಕ್ತಿ ಇವರು

Published On - 10:38 am, Wed, 31 March 21

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್