AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಬಿದ್ದ ‘ರಾಬರ್ಟ್​’ ಪೈರಸಿ ಮಾಡುತ್ತಿದ್ದ ವ್ಯಕ್ತಿ! ‘ದುಡ್ಡು ಕೊಟ್ಟರೆ ಹೊಸ ಕಾಪಿ ಶೇರ್ ಮಾಡ್ತೀನಿ’ ಎನ್ನುತ್ತಿದ್ದ ಆರೋಪಿ!

ಒಂದೆಡೆ ರಾಬರ್ಟ್​ ಸಿನಿಮಾ ಅದ್ಭುತ ಕಲೆಕ್ಷನ್​ ಮಾಡುತ್ತಿದೆ. ಇನ್ನೊಂದೆಡೆ ಪೈರಸಿ ಹಾವಳಿ ಶುರು ಆಗಿದೆ. ಪೈರಸಿ ಮಾಡುವ ವ್ಯಕ್ತಿಗಳನ್ನು ಚಿತ್ರತಂಡ ಪತ್ತೆ ಹಚ್ಚಿದೆ.

ಸಿಕ್ಕಿಬಿದ್ದ ‘ರಾಬರ್ಟ್​’ ಪೈರಸಿ ಮಾಡುತ್ತಿದ್ದ ವ್ಯಕ್ತಿ! ‘ದುಡ್ಡು ಕೊಟ್ಟರೆ ಹೊಸ ಕಾಪಿ ಶೇರ್ ಮಾಡ್ತೀನಿ’ ಎನ್ನುತ್ತಿದ್ದ ಆರೋಪಿ!
ದರ್ಶನ್​ ರಾಬರ್ಟ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
| Edited By: |

Updated on:Mar 14, 2021 | 1:16 PM

Share

ಇನ್ನೇನು ಕನ್ನಡ ಚಿತ್ರರಂಗ ಚೇತರಿಸಿಕೊಳ್ಳುತ್ತಿದೆ ಎನ್ನವಾಗಲೇ ಒಂದು ದೊಡ್ಡ ಸಮಸ್ಯೆ ಕಾಡುತ್ತಿದೆ. ಅದುವೇ ಪೈರಸಿ. ಹೌದು, ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಸಿನಿಮಾಗಳು ಪೈರಸಿಗೆ ಬಲಿ ಆಗುತ್ತಿವೆ. ರಾಜ್ಯಾದ್ಯಂತ ಅಬ್ಬರಿಸುತ್ತಿರುವ ‘ರಾಬರ್ಟ್​’ ಸಿನಿಮಾ ಕೂಡ ಈ ಸಮಸ್ಯೆಯಿಂದ ಬಚಾವ್​ ಆಗಲು ಸಾಧ್ಯವಾಗಿಲ್ಲ. ಹಾಗಂತ ಚಿತ್ರತಂಡ ಕೈಕಟ್ಟಿ ಕುಳಿತಿಲ್ಲ.

ಪೈರಸಿ ಮಾಡುವವರನ್ನು ಪತ್ತೆ ಹಚ್ಚುವ ಕೆಲಸದಲ್ಲಿ ರಾಬರ್ಟ್​ ತಂಡದವರು ನಿರತರಾಗಿದ್ದಾರೆ. ಎಲ್ಲಿಂದ ಪೈರಸಿ ಆಗುತ್ತಿದೆ ಎಂಬುದನ್ನು ಕಂಡು ಹಿಡಿದು, ಅಂಥವರಿಗೆ ತಕ್ಕ ಪಾಠ ಕಲಿಸುವ ಕಾಯಕ ನಡೆಯುತ್ತಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಪ್ರಸನ್ನ ಥಿಯೇಟರ್​ನಲ್ಲಿ ಚಿತ್ರದ ಪೈರಸಿ ಕಾಪಿ ಮಾರುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ. ಅಲ್ಲದೆ, ಆತನ ವಿರುದ್ದ ಎಫ್​ಐಆರ್​ ಕೂಡ ದಾಖಲಿಸಲಾಗಿದೆ.

‘ಚಿತ್ರದ ಪೈರಸಿ ಕಾಪಿಯನ್ನು ತನ್ನ ಮೊಬೈಲ್​ನಲ್ಲಿ ಸೆರೆಹಿಡಿದು ಇಟ್ಟುಕೊಂಡು, ರಾಬರ್ಟ್ ಚಿತ್ರವನ್ನು ನೋಡಲು ಬರುವ ಜನರ ಬಳಿ ನನ್ನತ್ರ ರಾಬರ್ಟ್ ಚಿತ್ರದ ಹೊಸ ಕಾಪಿ ಇದೆ ದುಡ್ಡು ಕೊಟ್ಟರೆ ನಿಮಗೆ ಶೇರ್​ ಮಾಡುತ್ತೇನೆ ಎಂದು ಹೇಳಿ ಹಲವರ ಬಳಿ ಶೇರ್ ಮಾಡಿ ದುಡ್ಡು ಪಡೆದು ಹಂಚುತ್ತಿರುವುದು ನಮ್ಮ ರಾಬರ್ಟ್ ಚಿತ್ರತಂಡದ ಗಮನಕ್ಕೆ ಬಂತು. ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಇವನ ಜೊತೆ ಇನ್ನೂ ಇಬ್ಬರು ಸೇರಿ ಪೈರಸಿ ಮಾಡಿ ಅದನ್ನು ಶೇರ್ ಮಾಡಿ ಹಣ ಪಡೆದಿರುವ ಬಗ್ಗೆ ತಿಳಿದ ಮೇಲೆ ವಿಶ್ವನಾಥ ಎಂಬ ವ್ಯಕ್ತಿಯನ್ನು ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಒಪ್ಪಿಸಿ, ದೂರು ನೀಡಿರುತ್ತೇವೆ. ಈತನ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಪೈರಸಿ ಹಾವಳಿ ಏನೇ ಇದ್ದರೂ ಭರ್ಜರಿ ಕಮಾಯಿ ಮಾಡುವಲ್ಲಿ ರಾಬರ್ಟ್​ ಸಿನಿಮಾ ಹಿಂದೆ ಬಿದ್ದಿಲ್ಲ. ಮೊದಲ ಮೂರು ದಿನ ಎಲ್ಲ ಕಡೆ ಹೌಸ್​ ಫುಲ್​ ಪ್ರದರ್ಶನ ಕಂಡಿದೆ. ಪರಿಣಾಮವಾಗಿ ಅಂದಾಜು 47.33 ಕೋಟಿ ರೂ. ಕಲೆಕ್ಷನ್​ ಆಗಿದೆ. ಇದರಲ್ಲಿ ಮೊದಲ ದಿನ ತೆಲುಗು ವರ್ಷನ್​ ಮಾಡಿದ ಗಳಿಕೆ ಕೂಡ ಸೇರಿದೆ. ಎರಡು ಮತ್ತು ಮೂರನೇ ದಿನ ತೆಲುಗು ವರ್ಷನ್​ನಿಂದ ಎಷ್ಟು ಆದಾಯ ಬಂದಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಭಾನುವಾರ (ಮಾ.14) ಕೂಡ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿದ್ದು ದೊಡ್ಡ ಮಟ್ಟದ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Roberrt Piracy : ‘ರಾಬರ್ಟ್​’ ಚಿತ್ರದ 3 ಸಾವಿರ ಪೈರಸಿ ಲಿಂಕ್​ ಪತ್ತೆ! ದರ್ಶನ್​ ಸಿನಿಮಾ ಮೇಲೆ ಕಿಡಿಗೇಡಿಗಳ ಕಣ್ಣು

Roberrt Collection: ಅಬ್ಬಬ್ಬಾ…! ರಾಬರ್ಟ್​ 3ನೇ ದಿನದ ಕಲೆಕ್ಷನ್​ ಇಷ್ಟೊಂದಾ? 50 ಕೋಟಿಗೆ ಕೆಲವೇ ನಂಬರ್​ ಬಾಕಿ!

Published On - 1:10 pm, Sun, 14 March 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು