AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!

‘ರಾಬರ್ಟ್’​ ಸಿನಿಮಾದ ತೆರೆಹಿಂದಿನ ವಿಷಯಗಳು ಒಂದಕ್ಕಿಂತ ಒಂದು ಇಂಟರೆಸ್ಟಿಂಗ್​ ಆಗಿವೆ. ಕೆಲವು ರಿಸ್ಕಿ ದೃಶ್ಯಗಳ ಶೂಟಿಂಗ್​ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾಹಿತಿ ನೀಡಿದ್ದಾರೆ.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ಮದನ್​ ಕುಮಾರ್​
| Edited By: ಆಯೇಷಾ ಬಾನು|

Updated on: Mar 10, 2021 | 6:35 AM

Share

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರ ‘ರಾಬರ್ಟ್’​ ಸಿನಿಮಾ ಮಾ.11ರಂದು ರಿಲೀಸ್​ ಆಗುತ್ತಿದೆ. ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರದಲ್ಲಿ ಅದ್ದೂರಿ ಆ್ಯಕ್ಷನ್​ ದೃಶ್ಯಗಳಿವೆ. ಆ ಕಾರಣದಿಂದ ಅಭಿಮಾನಿಗಳಿಗೆ ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಅದರಲ್ಲೂ ಒಂದು ಅಂಡರ್​ ವಾಟರ್​ ದೃಶ್ಯವನ್ನು ದರ್ಶನ್​ ತುಂಬ ಚಾಲೆಂಜಿಂಗ್​ ಆಗಿ ಮಾಡಿದ್ದಾರೆ.

ಆ ದೃಶ್ಯದ ಚಿತ್ರೀಕರಣದ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾತನಾಡಿದ್ದಾರೆ. ‘ಅಂಡರ್​ ವಾಟರ್​ ಸೀಕ್ವೆನ್ಸ್​ ಚಾಲೆಂಜಿಂಗ್​ ಎನಿಸಿತು. ದರ್ಶನ್​ ಸರ್​ಗೆ ಸ್ವಿಮಿಂಗ್​ ಬರಲ್ಲ. ನೀರಿನ ಆಳ 30 ಅಡಿ ಇರುತ್ತಿತ್ತು. ಎಲ್ಲರೂ ಸ್ವಿಮಿಂಗ್​ ಸ್ಯೂಟ್​ ತೆಗೆದುಕೊಂಡು ಬರಬೇಕು ಅಂತ ಅವರು ಹೇಳಿದ್ದರು. ನಾನು ಮುಳುಗುವಾಗ ನಿಮ್ಮನ್ನೂ ಮುಳುಗಿಸುತ್ತೀನಿ. ಕಷ್ಟ ನಿಮಗೂ ಗೊತ್ತಾಗಲಿ ಅಂತ ತಮಾಷೆಗೆ ಹೇಳಿದರು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್​ ಗೌಡ.

‘ಆಗ ಚಳಿ ಬೇರೆ ಇತ್ತು. ಆದಷ್ಟು ದರ್ಶನ್​ ಸರ್​ಗೆ ಏನೂ ತೊಂದರೆ ಆಗದಂತೆ ಮಾಸ್ಟರ್​ ಕಿಶನ್​ ಅವರು ಸರಿಯಾಗಿ ಹ್ಯಾಂಡಲ್​ ಮಾಡಿದರು. ಅದು ನಾವು ತುಂಬ ರಿಸ್ಕಿ ಎಂದುಕೊಂಡಿದ್ದೆವು. ನಂತರ ಇಲ್ಲೇ ಮಾಡಿದ್ವಿ. ಅದು ಬಿಟ್ಟರೆ ವಾರಾಣಸಿ ಚಿತ್ರೀಕರಣ ಕೂಡ ಚಾಲೆಂಜಿಂಗ್​ ಆಗಿತ್ತು. ಯಾಕೆಂದರೆ ಅಲ್ಲಿ ಜನರು ಇರುತ್ತಾರೆ. ಅಷ್ಟೊಂದು ಜನರ ಮಧ್ಯೆ ಶೂಟ್​ ಮಾಡುವುದು ತುಂಬ ಕಷ್ಟ. ಅಲ್ಲಿನ ಜನ ದರ್ಶನ್​ರನ್ನು ನೋಡುತ್ತ ನಿಂತು ಬಿಡುತ್ತಿದ್ದರು’ ಎಂಬುದು ಉಮಾಪತಿ ಶ್ರೀನಿವಾಸ್​ ಗೌಡ ಮಾತುಗಳು.

‘ಸೌತ್​ ಇಂಡಿಯಾ ಸ್ಟಾರ್​ಗಳೆಲ್ಲ ಇಲ್ಲಿಗೆ ಬಂದರೆ ಇಷ್ಟಿಷ್ಟೇ ಇರುತ್ತಾರೆ. ಅವರ ಜೊತೆ ನಮಗೆ ಫೋಟೋ ತೆಗೆಸಿಕೊಳ್ಳಬೇಕು ಎನಿಸಿಲ್ಲ. ಆದರೆ ನೀವು​ ಬಂದರೆ ಆನೆ ಬಂದಂತೆ ಇರುತ್ತದೆ. ನಿಮ್ಮನ್ನು ನೋಡಿದರೆ ಖುಷಿ ಆಗುತ್ತದೆ’ ಎಂದು ದರ್ಶನ್​ಗೆ ವಾರಾಣಸಿಯ ಜನರು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ ನಿರ್ಮಾಪಕರು. ಈ ಸಿನಿಮಾದಲ್ಲಿ ದರ್ಶನ್​ಗೆ ಜೋಡಿಯಾಗಿ ಆಶಾ ಭಟ್​ ನಟಿಸಿದ್ದಾರೆ. ರವಿ ಕಿಶನ್​, ಜಗಪತಿ ಬಾಬು, ವಿನೋದ್​ ಪ್ರಭಾಕರ್​, ರವಿಶಂಕರ್​, ಅಶೋಕ್​, ದೇವರಾಜ್​ ಮುಂತಾದವರು ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್​’ನಲ್ಲಿ ದರ್ಶನ್​ ಖಡಕ್​ ಆಗಿ ಹೇಳಿದ ‘ಏ ತುಕಾಲಿ…’ ಡೈಲಾಗ್​ನ ಹಿಂದಿದೆ ಇಂಟರೆಸ್ಟಿಂಗ್​ ವಿಷ್ಯ!

Roberrt vs Kotigobba 3: ಸಿನಿಮಾಗಳ ರಿಲೀಸ್​ಗೂ ಮುನ್ನ ಇನ್ನೊಂದು ರೀತಿಯಲ್ಲಿ ದರ್ಶನ್​-ಸುದೀಪ್​ ಪೈಪೋಟಿ!

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ