AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!

‘ರಾಬರ್ಟ್’​ ಸಿನಿಮಾದ ತೆರೆಹಿಂದಿನ ವಿಷಯಗಳು ಒಂದಕ್ಕಿಂತ ಒಂದು ಇಂಟರೆಸ್ಟಿಂಗ್​ ಆಗಿವೆ. ಕೆಲವು ರಿಸ್ಕಿ ದೃಶ್ಯಗಳ ಶೂಟಿಂಗ್​ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾಹಿತಿ ನೀಡಿದ್ದಾರೆ.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
Follow us
ಮದನ್​ ಕುಮಾರ್​
| Updated By: ಆಯೇಷಾ ಬಾನು

Updated on: Mar 10, 2021 | 6:35 AM

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರ ‘ರಾಬರ್ಟ್’​ ಸಿನಿಮಾ ಮಾ.11ರಂದು ರಿಲೀಸ್​ ಆಗುತ್ತಿದೆ. ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರದಲ್ಲಿ ಅದ್ದೂರಿ ಆ್ಯಕ್ಷನ್​ ದೃಶ್ಯಗಳಿವೆ. ಆ ಕಾರಣದಿಂದ ಅಭಿಮಾನಿಗಳಿಗೆ ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಅದರಲ್ಲೂ ಒಂದು ಅಂಡರ್​ ವಾಟರ್​ ದೃಶ್ಯವನ್ನು ದರ್ಶನ್​ ತುಂಬ ಚಾಲೆಂಜಿಂಗ್​ ಆಗಿ ಮಾಡಿದ್ದಾರೆ.

ಆ ದೃಶ್ಯದ ಚಿತ್ರೀಕರಣದ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾತನಾಡಿದ್ದಾರೆ. ‘ಅಂಡರ್​ ವಾಟರ್​ ಸೀಕ್ವೆನ್ಸ್​ ಚಾಲೆಂಜಿಂಗ್​ ಎನಿಸಿತು. ದರ್ಶನ್​ ಸರ್​ಗೆ ಸ್ವಿಮಿಂಗ್​ ಬರಲ್ಲ. ನೀರಿನ ಆಳ 30 ಅಡಿ ಇರುತ್ತಿತ್ತು. ಎಲ್ಲರೂ ಸ್ವಿಮಿಂಗ್​ ಸ್ಯೂಟ್​ ತೆಗೆದುಕೊಂಡು ಬರಬೇಕು ಅಂತ ಅವರು ಹೇಳಿದ್ದರು. ನಾನು ಮುಳುಗುವಾಗ ನಿಮ್ಮನ್ನೂ ಮುಳುಗಿಸುತ್ತೀನಿ. ಕಷ್ಟ ನಿಮಗೂ ಗೊತ್ತಾಗಲಿ ಅಂತ ತಮಾಷೆಗೆ ಹೇಳಿದರು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್​ ಗೌಡ.

‘ಆಗ ಚಳಿ ಬೇರೆ ಇತ್ತು. ಆದಷ್ಟು ದರ್ಶನ್​ ಸರ್​ಗೆ ಏನೂ ತೊಂದರೆ ಆಗದಂತೆ ಮಾಸ್ಟರ್​ ಕಿಶನ್​ ಅವರು ಸರಿಯಾಗಿ ಹ್ಯಾಂಡಲ್​ ಮಾಡಿದರು. ಅದು ನಾವು ತುಂಬ ರಿಸ್ಕಿ ಎಂದುಕೊಂಡಿದ್ದೆವು. ನಂತರ ಇಲ್ಲೇ ಮಾಡಿದ್ವಿ. ಅದು ಬಿಟ್ಟರೆ ವಾರಾಣಸಿ ಚಿತ್ರೀಕರಣ ಕೂಡ ಚಾಲೆಂಜಿಂಗ್​ ಆಗಿತ್ತು. ಯಾಕೆಂದರೆ ಅಲ್ಲಿ ಜನರು ಇರುತ್ತಾರೆ. ಅಷ್ಟೊಂದು ಜನರ ಮಧ್ಯೆ ಶೂಟ್​ ಮಾಡುವುದು ತುಂಬ ಕಷ್ಟ. ಅಲ್ಲಿನ ಜನ ದರ್ಶನ್​ರನ್ನು ನೋಡುತ್ತ ನಿಂತು ಬಿಡುತ್ತಿದ್ದರು’ ಎಂಬುದು ಉಮಾಪತಿ ಶ್ರೀನಿವಾಸ್​ ಗೌಡ ಮಾತುಗಳು.

‘ಸೌತ್​ ಇಂಡಿಯಾ ಸ್ಟಾರ್​ಗಳೆಲ್ಲ ಇಲ್ಲಿಗೆ ಬಂದರೆ ಇಷ್ಟಿಷ್ಟೇ ಇರುತ್ತಾರೆ. ಅವರ ಜೊತೆ ನಮಗೆ ಫೋಟೋ ತೆಗೆಸಿಕೊಳ್ಳಬೇಕು ಎನಿಸಿಲ್ಲ. ಆದರೆ ನೀವು​ ಬಂದರೆ ಆನೆ ಬಂದಂತೆ ಇರುತ್ತದೆ. ನಿಮ್ಮನ್ನು ನೋಡಿದರೆ ಖುಷಿ ಆಗುತ್ತದೆ’ ಎಂದು ದರ್ಶನ್​ಗೆ ವಾರಾಣಸಿಯ ಜನರು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ ನಿರ್ಮಾಪಕರು. ಈ ಸಿನಿಮಾದಲ್ಲಿ ದರ್ಶನ್​ಗೆ ಜೋಡಿಯಾಗಿ ಆಶಾ ಭಟ್​ ನಟಿಸಿದ್ದಾರೆ. ರವಿ ಕಿಶನ್​, ಜಗಪತಿ ಬಾಬು, ವಿನೋದ್​ ಪ್ರಭಾಕರ್​, ರವಿಶಂಕರ್​, ಅಶೋಕ್​, ದೇವರಾಜ್​ ಮುಂತಾದವರು ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್​’ನಲ್ಲಿ ದರ್ಶನ್​ ಖಡಕ್​ ಆಗಿ ಹೇಳಿದ ‘ಏ ತುಕಾಲಿ…’ ಡೈಲಾಗ್​ನ ಹಿಂದಿದೆ ಇಂಟರೆಸ್ಟಿಂಗ್​ ವಿಷ್ಯ!

Roberrt vs Kotigobba 3: ಸಿನಿಮಾಗಳ ರಿಲೀಸ್​ಗೂ ಮುನ್ನ ಇನ್ನೊಂದು ರೀತಿಯಲ್ಲಿ ದರ್ಶನ್​-ಸುದೀಪ್​ ಪೈಪೋಟಿ!

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ