AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!

‘ರಾಬರ್ಟ್’​ ಸಿನಿಮಾದ ತೆರೆಹಿಂದಿನ ವಿಷಯಗಳು ಒಂದಕ್ಕಿಂತ ಒಂದು ಇಂಟರೆಸ್ಟಿಂಗ್​ ಆಗಿವೆ. ಕೆಲವು ರಿಸ್ಕಿ ದೃಶ್ಯಗಳ ಶೂಟಿಂಗ್​ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾಹಿತಿ ನೀಡಿದ್ದಾರೆ.

ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ಮದನ್​ ಕುಮಾರ್​
| Edited By: |

Updated on: Mar 10, 2021 | 6:35 AM

Share

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರ ‘ರಾಬರ್ಟ್’​ ಸಿನಿಮಾ ಮಾ.11ರಂದು ರಿಲೀಸ್​ ಆಗುತ್ತಿದೆ. ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರದಲ್ಲಿ ಅದ್ದೂರಿ ಆ್ಯಕ್ಷನ್​ ದೃಶ್ಯಗಳಿವೆ. ಆ ಕಾರಣದಿಂದ ಅಭಿಮಾನಿಗಳಿಗೆ ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಅದರಲ್ಲೂ ಒಂದು ಅಂಡರ್​ ವಾಟರ್​ ದೃಶ್ಯವನ್ನು ದರ್ಶನ್​ ತುಂಬ ಚಾಲೆಂಜಿಂಗ್​ ಆಗಿ ಮಾಡಿದ್ದಾರೆ.

ಆ ದೃಶ್ಯದ ಚಿತ್ರೀಕರಣದ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾತನಾಡಿದ್ದಾರೆ. ‘ಅಂಡರ್​ ವಾಟರ್​ ಸೀಕ್ವೆನ್ಸ್​ ಚಾಲೆಂಜಿಂಗ್​ ಎನಿಸಿತು. ದರ್ಶನ್​ ಸರ್​ಗೆ ಸ್ವಿಮಿಂಗ್​ ಬರಲ್ಲ. ನೀರಿನ ಆಳ 30 ಅಡಿ ಇರುತ್ತಿತ್ತು. ಎಲ್ಲರೂ ಸ್ವಿಮಿಂಗ್​ ಸ್ಯೂಟ್​ ತೆಗೆದುಕೊಂಡು ಬರಬೇಕು ಅಂತ ಅವರು ಹೇಳಿದ್ದರು. ನಾನು ಮುಳುಗುವಾಗ ನಿಮ್ಮನ್ನೂ ಮುಳುಗಿಸುತ್ತೀನಿ. ಕಷ್ಟ ನಿಮಗೂ ಗೊತ್ತಾಗಲಿ ಅಂತ ತಮಾಷೆಗೆ ಹೇಳಿದರು’ ಎಂದಿದ್ದಾರೆ ಉಮಾಪತಿ ಶ್ರೀನಿವಾಸ್​ ಗೌಡ.

‘ಆಗ ಚಳಿ ಬೇರೆ ಇತ್ತು. ಆದಷ್ಟು ದರ್ಶನ್​ ಸರ್​ಗೆ ಏನೂ ತೊಂದರೆ ಆಗದಂತೆ ಮಾಸ್ಟರ್​ ಕಿಶನ್​ ಅವರು ಸರಿಯಾಗಿ ಹ್ಯಾಂಡಲ್​ ಮಾಡಿದರು. ಅದು ನಾವು ತುಂಬ ರಿಸ್ಕಿ ಎಂದುಕೊಂಡಿದ್ದೆವು. ನಂತರ ಇಲ್ಲೇ ಮಾಡಿದ್ವಿ. ಅದು ಬಿಟ್ಟರೆ ವಾರಾಣಸಿ ಚಿತ್ರೀಕರಣ ಕೂಡ ಚಾಲೆಂಜಿಂಗ್​ ಆಗಿತ್ತು. ಯಾಕೆಂದರೆ ಅಲ್ಲಿ ಜನರು ಇರುತ್ತಾರೆ. ಅಷ್ಟೊಂದು ಜನರ ಮಧ್ಯೆ ಶೂಟ್​ ಮಾಡುವುದು ತುಂಬ ಕಷ್ಟ. ಅಲ್ಲಿನ ಜನ ದರ್ಶನ್​ರನ್ನು ನೋಡುತ್ತ ನಿಂತು ಬಿಡುತ್ತಿದ್ದರು’ ಎಂಬುದು ಉಮಾಪತಿ ಶ್ರೀನಿವಾಸ್​ ಗೌಡ ಮಾತುಗಳು.

‘ಸೌತ್​ ಇಂಡಿಯಾ ಸ್ಟಾರ್​ಗಳೆಲ್ಲ ಇಲ್ಲಿಗೆ ಬಂದರೆ ಇಷ್ಟಿಷ್ಟೇ ಇರುತ್ತಾರೆ. ಅವರ ಜೊತೆ ನಮಗೆ ಫೋಟೋ ತೆಗೆಸಿಕೊಳ್ಳಬೇಕು ಎನಿಸಿಲ್ಲ. ಆದರೆ ನೀವು​ ಬಂದರೆ ಆನೆ ಬಂದಂತೆ ಇರುತ್ತದೆ. ನಿಮ್ಮನ್ನು ನೋಡಿದರೆ ಖುಷಿ ಆಗುತ್ತದೆ’ ಎಂದು ದರ್ಶನ್​ಗೆ ವಾರಾಣಸಿಯ ಜನರು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ ನಿರ್ಮಾಪಕರು. ಈ ಸಿನಿಮಾದಲ್ಲಿ ದರ್ಶನ್​ಗೆ ಜೋಡಿಯಾಗಿ ಆಶಾ ಭಟ್​ ನಟಿಸಿದ್ದಾರೆ. ರವಿ ಕಿಶನ್​, ಜಗಪತಿ ಬಾಬು, ವಿನೋದ್​ ಪ್ರಭಾಕರ್​, ರವಿಶಂಕರ್​, ಅಶೋಕ್​, ದೇವರಾಜ್​ ಮುಂತಾದವರು ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್​’ನಲ್ಲಿ ದರ್ಶನ್​ ಖಡಕ್​ ಆಗಿ ಹೇಳಿದ ‘ಏ ತುಕಾಲಿ…’ ಡೈಲಾಗ್​ನ ಹಿಂದಿದೆ ಇಂಟರೆಸ್ಟಿಂಗ್​ ವಿಷ್ಯ!

Roberrt vs Kotigobba 3: ಸಿನಿಮಾಗಳ ರಿಲೀಸ್​ಗೂ ಮುನ್ನ ಇನ್ನೊಂದು ರೀತಿಯಲ್ಲಿ ದರ್ಶನ್​-ಸುದೀಪ್​ ಪೈಪೋಟಿ!

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​