AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Telugu Collection: ತೆಲುಗು ನೆಲದಲ್ಲಿ ತೊಡೆತಟ್ಟಿದ ‘ರಾಬರ್ಟ್​’! ಆಂಧ್ರ-ತೆಲಂಗಾಣದಲ್ಲಿ ಎಷ್ಟು ಕೋಟಿ ಕಲೆಕ್ಷನ್​?

ಎಲ್ಲೆಲ್ಲೂ ‘ರಾಬರ್ಟ್​’ ಜ್ವರ ಜೋರಾಗಿದೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅಭಿಮಾನಿಗಳು ಪರರಾಜ್ಯಗಳಲ್ಲೂ ಮುಗಿಬಿದ್ದು ಈ ಸಿನಿಮಾ ನೋಡುತ್ತಿದ್ದಾರೆ.

Roberrt Telugu Collection: ತೆಲುಗು ನೆಲದಲ್ಲಿ ತೊಡೆತಟ್ಟಿದ ‘ರಾಬರ್ಟ್​’! ಆಂಧ್ರ-ತೆಲಂಗಾಣದಲ್ಲಿ ಎಷ್ಟು ಕೋಟಿ ಕಲೆಕ್ಷನ್​?
ದರ್ಶನ್​ನಲ್ಲಿ ರಾಬರ್ಟ್​
Follow us
ಮದನ್​ ಕುಮಾರ್​
|

Updated on: Mar 12, 2021 | 12:30 PM

ದರ್ಶನ್​ ನಟನೆಯ ‘ರಾಬರ್ಟ್​’ ಸಿನಿಮಾ ಶಿವರಾತ್ರಿ ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಎಲ್ಲ ಚಿತ್ರಮಂದಿರಗಳ ಎದುರಲ್ಲಿ ಜಾತ್ರೆಯ ವಾತಾವರಣ ನಿರ್ಮಾಣ ಆಗಿದೆ. ಮೊದಲ ದಿನದ ಎಲ್ಲಾ ಶೋಗಳು ಹೌಸ್​ ಫುಲ್​ ಆಗಿವೆ. ಎರಡನೇ ದಿನವಾದ ಶುಕ್ರವಾರ ಕೂಡ ಬಹುತೇಕ ಅದೇ ವಾತಾವರಣ ಮುಂದುವರಿದಿದೆ. ಆಂಧ್ರ ಮತ್ತು ತೆಲಂಗಾಣದಲ್ಲೂ ಈ ಸಿನಿಮಾ ಧೂಳೆಬ್ಬಿಸುತ್ತಿದೆ.

ಕನ್ನಡ ಸಿನಿಮಾಗಳ ಮಾರುಕಟ್ಟೆ ವಿಸ್ತಾರ ಆಗುತ್ತಿದೆ. ಒಂದು ಕಾಲದಲ್ಲಿ ಪರಭಾಷೆ ಸಿನಿಮಾಗಳ ಹಾವಳಿ ನಡುವೆ ಕನ್ನಡ ಸಿನಿಮಾಗಳಿಗೆ ಕರುನಾಡಿನಲ್ಲಿಯೇ ಚಿತ್ರಮಂದಿರಗಳು ಸಿಗುತ್ತಿರಲಿಲ್ಲ. ಆದರೆ ಈಗ ಪಕ್ಕದ ರಾಜ್ಯಗಳಲ್ಲಿ ಕನ್ನಡ ಸಿನಿಮಾಗಳು ಭರ್ಜರಿ ಸೌಂಡು ಮಾಡುವ ಸಮಯ ಬಂದಿದೆ. ರಾಬರ್ಟ್​ ಚಿತ್ರ ಕನ್ನಡದ ಜೊತೆಗೆ ತೆಲುಗು ವರ್ಷನ್​ನಲ್ಲೂ ತೆರೆಕಂಡಿದ್ದು, ಆಂಧ್ರ ಹಾಗೂ ತೆಲಂಗಾಣದಲ್ಲಿ ಗಮನಾರ್ಹ ಗಳಿಕೆ ಮಾಡಿದೆ.

ಚಿತ್ರತಂಡವೇ ಹೇಳಿಕೊಂಡಿರುವಂತೆ ಆಂಧ್ರ ಹಾಗೂ ತೆಲಂಗಾಣದಲ್ಲಿ ರಾಬರ್ಟ್​ ಚಿತ್ರಕ್ಕೆ ಮೊದಲ ದಿನ 3.12 ಕೋಟಿ ರೂ. ಗಳಿಕೆ ಆಗಿದೆ. ಚಿತ್ರದ ಬಗ್ಗೆ ಅಲ್ಲಿಯೂ ಮೆಚ್ಚುಗೆ ಮಾತುಗಳು ಕೇಳಿಬರುತ್ತಿದ್ದು, ವೀಕೆಂಡ್​ನಲ್ಲಿ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ಸಾಧ್ಯತೆ ದಟ್ಟವಾಗಿದೆ. ಟಾಲಿವುಡ್​ ಸಿನಿಪ್ರಿಯರ ವಲಯದಲ್ಲಿಯೂ ರಾಬರ್ಟ್​ ಬಗ್ಗೆ ಹಲವು ದಿನಗಳ ಮುಂಚೆಯೇ ಕ್ರೇಜ್​ ಸೃಷ್ಟಿ ಆಗಿತ್ತು. ಅದಕ್ಕೆ ಪ್ರಮುಖ ಕಾರಣ ಆಗಿದ್ದು ‘ಕಣ್ಣೆ ಅದಿರಿಂದಿ…’ ಹಾಡು. ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಗಾಯಕಿ ಮಂಗ್ಲಿ ಹಾಡಿದ ಈ ಗೀತೆ ತೆಲುಗು ಭಾಷಿಕರಿಗೆ ಹೊಸ ಗುಂಗು ಹತ್ತಿಸಿತ್ತು. ಚಿತ್ರಮಂದಿರದಲ್ಲಿ ಈ ಹಾಡು ಪ್ಲೇ ಆಗುತ್ತಿದ್ದಂತೆಯೇ ಜನರು ಹುಚ್ಚೆದ್ದು ಕುಣಿಯುತ್ತಿದ್ದಾರೆ.

ಕರ್ನಾಟಕದಲ್ಲಿ ದರ್ಶನ್​ ಅವರು ಬಾಕ್ಸ್​ ಆಫೀಸ್​ ಸುಲ್ತಾನ ಎಂಬುದು ಮತ್ತೆ ಸಾಬೀತಾಗಿದೆ. ರಾಜ್ಯಾದ್ಯಂತ ಈ ಸಿನಿಮಾ 17 ಕೋಟಿ ರೂ. ಗಳಿಸಿ ದಾಖಲೆ ಬರೆದಿದೆ. ಕರ್ನಾಟಕ ಮತ್ತು ತೆಲುಗು ರಾಜ್ಯಗಳ ಕಲೆಕ್ಷನ್​ ಒಟ್ಟು ಸೇರಿಸಿದರೆ ಮೊದಲ ದಿನವೇ 20 ಕೋಟಿ ರೂ.ಗಳಿಗೂ ಅಧಿಕ ಕಮಾಯಿ ಆದಂತೆ ಆಗುತ್ತದೆ. ದರ್ಶನ್​ ಅವರ ಸಿನಿಖಾತೆಗೆ ಒಂದು ಭರ್ಜರಿ ಹಿಟ್​ ಸಿಕ್ಕಂತಾಗಿದೆ. ಫ್ಯಾಮಿಲಿ ಪ್ರೇಕ್ಷಕರು ಕೂಡ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಅವರು ‘ರಾಬರ್ಟ್​’ ಮೂಲಕ ಗೆಲುವಿನ ಮಾಲೆ ಧರಿಸಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಮೊಗದಲ್ಲಿ ಯಶಸ್ಸಿನ ನಗು ಮೂಡಿದೆ. ನಟಿ ಆಶಾ ಭಟ್​ ಅವರಿಗೆ ಕನ್ನಡದ ಮೊದಲ ಸಿನಿಮಾದಲ್ಲಿಯೇ ಕರುನಾಡಿನ ಜನರ ಆಶೀರ್ವಾದ ಸಿಕ್ಕಿದೆ. ಒಟ್ಟಾರೆಯಾಗಿ ‘ರಾಬರ್ಟ್​’ ಸಿನಿಮಾ ಸೂಪರ್​ ಹಿಟ್​ ಆಗಿದ್ದು, ಡಿ ಫ್ಯಾನ್ಸ್​ ಹಿರಿಹಿರಿ ಹಿಗ್ಗುತ್ತಿದ್ದಾರೆ.

ಇದನ್ನೂ ಓದಿ: Roberrt 1st Day Collection: ‘ರಾಬರ್ಟ್​’ ಚಿತ್ರಕ್ಕೆ ಮೊದಲ ದಿನವೇ ಯಾವ ಯಾವ ಜಿಲ್ಲೆಗಳಿಂದ ಎಷ್ಟು ಕಲೆಕ್ಷನ್​? ಇಲ್ಲಿದೆ ರಿಪೋರ್ಟ್​

Roberrt Kannada Movie Review: ಒಂದೇ ಟಿಕೆಟ್​ನಲ್ಲಿ ದರ್ಶನ್​ ಫ್ಯಾನ್ಸ್​ಗೆ ರಾಬರ್ಟ್​ ಮತ್ತು ರಾಘವನ ಡಬಲ್​ ಧಮಾಕಾ!

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ