AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

Darshan: ರಾಜ್ಯಾದ್ಯಂತ ಇರುವ ದರ್ಶನ್​ ಅಭಿಮಾನಿಗಳಿಗೆ ರಾಬರ್ಟ್​ ತಂಡದ ಕಡೆಯಿಂದ ಒಂದು ಸಿಹಿ ಸುದ್ದಿ ಸಿಕ್ಕಿದೆ. ಹಲವು ಜಿಲ್ಲೆಗಳಿಗೆ ಡಿ ಬಾಸ್​ ಭೇಟಿ ನೀಡಿ, ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ.

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!
ದರ್ಶನ್​- ರಾಬರ್ಟ್​ ವಿಜಯ ಯಾತ್ರೆ ವೇಳಾಪಟ್ಟಿ
ಮದನ್​ ಕುಮಾರ್​
|

Updated on: Mar 23, 2021 | 2:47 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಅದ್ದೂರಿ ಯಶಸ್ಸು ಕಂಡಿದೆ. ಮೊದಲ ವಾರವೇ 78.36 ಕೋಟಿ ರೂ. ಗಳಿಸಿದ ಈ ಸಿನಿಮಾ ದರ್ಶನ್​ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಪ್ರೇಕ್ಷಕರು ಎರಡನೇ ವಾರ ಕೂಡ ಚಿತ್ರಮಂದಿರಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಫ್ಯಾಮಿಲಿ ಪ್ರೇಕ್ಷಕರು ಸಹ ರಾಬರ್ಟ್​ಗೆ ಮನ ಸೋತಿದ್ದಾರೆ. ಕೊರೊನಾ ಎರಡನೇ ಅಲೆ ಭೀತಿ ನಡುವೆಯೂ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ದರ್ಶನ್​ ಸಜ್ಜಾಗಿದ್ದಾರೆ.

ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಆ ಬಗ್ಗೆ ಆಲೋಚನೆ ಮಾಡುವುದಾಗಿ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಕೂಡ ಹೇಳಿದ್ದರು. ಆ ಕುರಿತು ತಂಡ ನಿರ್ಧಾರ ತೆಗೆದುಕೊಂಡಿದ್ದು, ಈಗ ವಿಜಯ ಯಾತ್ರೆಯ ವೇಳಾಪಟ್ಟಿಯನ್ನು ಹಂಚಿಕೊಂಡಿದೆ. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡಲಿದ್ದಾರೆ.

ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ ರಾಬರ್ಟ್​ ತಂಡದ ಜೊತೆ ದರ್ಶನ್​ ತೆರಳಲಿದ್ದಾರೆ. ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಭೇಟಿ ನೀಡಲಿದ್ದಾರೆ. ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗದ ಅಭಿಮಾನಿಗಳನ್ನು ದರ್ಶನ್​ ಭೇಟಿ ಆಗಲಿದ್ದಾರೆ. ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಿದ್ದಾರೆ.

ರಾಜ್ಯಾದ್ಯಂತ ದರ್ಶನ್​ಗೆ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಪ್ರತಿ ವರ್ಷ ತಮ್ಮ ನೆಚ್ಚಿನ ನಟನ ಬರ್ತ್​ಡೇ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಸಾಧ್ಯವಾಗಿರಲಿಲ್ಲ. ಈಗ ಸ್ವತಃ ದರ್ಶನ್​ ಅವರೇ ಎಲ್ಲ ಜಿಲ್ಲೆಗಳಿಗೂ ತೆರಳಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುತ್ತಿರುವುದು ವಿಶೇಷ. ರಾಬರ್ಟ್​ ಸಿನಿಮಾದ ಅಭೂತಪೂರ್ವ ಗೆಲುವಿಗೆ ಕಾರಣರಾದ ತಮ್ಮ ಎಲ್ಲ ಅಭಿಮಾನಿಗಳಿಗೆ ಈ ವೇಳೆ ದರ್ಶನ್​ ಧನ್ಯವಾದ ತಿಳಿಸಲಿದ್ದಾರೆ.

ದರ್ಶನ್​ ಅವರನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಮುಗಿಬೀಳುವುದು ಗ್ಯಾರಂಟಿ. ಅವರು ಹೋದಲ್ಲೆಲ್ಲ ಜಾತ್ರೆಯ ವಾತಾವರಣ ನಿರ್ಮಾಣ ಆಗುತ್ತದೆ. ಇನ್ನುಳಿದ ಜಿಲ್ಲೆಗಳಲ್ಲಿನ ವಿಜಯ ಯಾತ್ರೆ ಕುರಿತಂತೆ ಇನ್ನೂ ಹೆಚ್ಚಿನ ವಿವರವನ್ನು ಚಿತ್ರತಂಡ ಸದ್ಯದಲ್ಲೇ ಹಂಚಿಕೊಳ್ಳಲಿದೆ. ನಿರ್ದೇಶಕ ತರುಣ್​ ಸುಧೀರ್​, ನಾಯಕಿ ಆಶಾ ಭಟ್​ ಮುಂತಾದವರು ದರ್ಶನ್​ಗೆ ಸಾಥ್​ ನೀಡಲಿದ್ದಾರೆ.

ಇದನ್ನೂ ಓದಿ: Darshan: ರಿಯಲ್ ಸಾರಥಿ ಜೊತೆ ರೀಲ್​ ಸಾರಥಿ ಭೇಟಿ! ಡಿ ಬಾಸ್​ ದರ್ಶನ್​ ಬಾಲ್ಯದ ವಿಶೇಷ ವ್ಯಕ್ತಿ ಇವರು

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ