AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

Darshan: ರಾಜ್ಯಾದ್ಯಂತ ಇರುವ ದರ್ಶನ್​ ಅಭಿಮಾನಿಗಳಿಗೆ ರಾಬರ್ಟ್​ ತಂಡದ ಕಡೆಯಿಂದ ಒಂದು ಸಿಹಿ ಸುದ್ದಿ ಸಿಕ್ಕಿದೆ. ಹಲವು ಜಿಲ್ಲೆಗಳಿಗೆ ಡಿ ಬಾಸ್​ ಭೇಟಿ ನೀಡಿ, ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ.

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!
ದರ್ಶನ್​- ರಾಬರ್ಟ್​ ವಿಜಯ ಯಾತ್ರೆ ವೇಳಾಪಟ್ಟಿ
ಮದನ್​ ಕುಮಾರ್​
|

Updated on: Mar 23, 2021 | 2:47 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಅದ್ದೂರಿ ಯಶಸ್ಸು ಕಂಡಿದೆ. ಮೊದಲ ವಾರವೇ 78.36 ಕೋಟಿ ರೂ. ಗಳಿಸಿದ ಈ ಸಿನಿಮಾ ದರ್ಶನ್​ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಪ್ರೇಕ್ಷಕರು ಎರಡನೇ ವಾರ ಕೂಡ ಚಿತ್ರಮಂದಿರಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಫ್ಯಾಮಿಲಿ ಪ್ರೇಕ್ಷಕರು ಸಹ ರಾಬರ್ಟ್​ಗೆ ಮನ ಸೋತಿದ್ದಾರೆ. ಕೊರೊನಾ ಎರಡನೇ ಅಲೆ ಭೀತಿ ನಡುವೆಯೂ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ದರ್ಶನ್​ ಸಜ್ಜಾಗಿದ್ದಾರೆ.

ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಆ ಬಗ್ಗೆ ಆಲೋಚನೆ ಮಾಡುವುದಾಗಿ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಕೂಡ ಹೇಳಿದ್ದರು. ಆ ಕುರಿತು ತಂಡ ನಿರ್ಧಾರ ತೆಗೆದುಕೊಂಡಿದ್ದು, ಈಗ ವಿಜಯ ಯಾತ್ರೆಯ ವೇಳಾಪಟ್ಟಿಯನ್ನು ಹಂಚಿಕೊಂಡಿದೆ. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡಲಿದ್ದಾರೆ.

ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ ರಾಬರ್ಟ್​ ತಂಡದ ಜೊತೆ ದರ್ಶನ್​ ತೆರಳಲಿದ್ದಾರೆ. ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಭೇಟಿ ನೀಡಲಿದ್ದಾರೆ. ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗದ ಅಭಿಮಾನಿಗಳನ್ನು ದರ್ಶನ್​ ಭೇಟಿ ಆಗಲಿದ್ದಾರೆ. ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಿದ್ದಾರೆ.

ರಾಜ್ಯಾದ್ಯಂತ ದರ್ಶನ್​ಗೆ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಪ್ರತಿ ವರ್ಷ ತಮ್ಮ ನೆಚ್ಚಿನ ನಟನ ಬರ್ತ್​ಡೇ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಸಾಧ್ಯವಾಗಿರಲಿಲ್ಲ. ಈಗ ಸ್ವತಃ ದರ್ಶನ್​ ಅವರೇ ಎಲ್ಲ ಜಿಲ್ಲೆಗಳಿಗೂ ತೆರಳಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುತ್ತಿರುವುದು ವಿಶೇಷ. ರಾಬರ್ಟ್​ ಸಿನಿಮಾದ ಅಭೂತಪೂರ್ವ ಗೆಲುವಿಗೆ ಕಾರಣರಾದ ತಮ್ಮ ಎಲ್ಲ ಅಭಿಮಾನಿಗಳಿಗೆ ಈ ವೇಳೆ ದರ್ಶನ್​ ಧನ್ಯವಾದ ತಿಳಿಸಲಿದ್ದಾರೆ.

ದರ್ಶನ್​ ಅವರನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಮುಗಿಬೀಳುವುದು ಗ್ಯಾರಂಟಿ. ಅವರು ಹೋದಲ್ಲೆಲ್ಲ ಜಾತ್ರೆಯ ವಾತಾವರಣ ನಿರ್ಮಾಣ ಆಗುತ್ತದೆ. ಇನ್ನುಳಿದ ಜಿಲ್ಲೆಗಳಲ್ಲಿನ ವಿಜಯ ಯಾತ್ರೆ ಕುರಿತಂತೆ ಇನ್ನೂ ಹೆಚ್ಚಿನ ವಿವರವನ್ನು ಚಿತ್ರತಂಡ ಸದ್ಯದಲ್ಲೇ ಹಂಚಿಕೊಳ್ಳಲಿದೆ. ನಿರ್ದೇಶಕ ತರುಣ್​ ಸುಧೀರ್​, ನಾಯಕಿ ಆಶಾ ಭಟ್​ ಮುಂತಾದವರು ದರ್ಶನ್​ಗೆ ಸಾಥ್​ ನೀಡಲಿದ್ದಾರೆ.

ಇದನ್ನೂ ಓದಿ: Darshan: ರಿಯಲ್ ಸಾರಥಿ ಜೊತೆ ರೀಲ್​ ಸಾರಥಿ ಭೇಟಿ! ಡಿ ಬಾಸ್​ ದರ್ಶನ್​ ಬಾಲ್ಯದ ವಿಶೇಷ ವ್ಯಕ್ತಿ ಇವರು

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ