ಪವಿತ್ರಾ ಗೌಡ ಜತೆ ನನ್ನದು ಲಿವ್​ಇನ್ ರಿಲೇಷನ್​ಶಿಪ್​; ದರ್ಶನ್​ ಒಪ್ಪಿಕೊಂಡ ಹಲವು ಸತ್ಯಗಳು

ಕಳೆದ 10 ವರ್ಷಗಳಿಂದಲೂ ದರ್ಶನ್​ ಮತ್ತು ಪವಿತ್ರಾ ಗೌಡ ಲಿವ್​ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ. ಈ ಪ್ರಕರಣದ ಇನ್ನುಳಿದ ಆರೋಪಿಗಳ ಜೊತೆ ತಮ್ಮ ಸ್ನೇಹ-ಸಂಬಂಧ ಎಂಥದ್ದು ಎಂಬುದನ್ನು ದರ್ಶನ್​ ವಿವರಿಸಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಈ ಅಂಗಳು ಉಲ್ಲೇಖ ಆಗಿವೆ.

ಪವಿತ್ರಾ ಗೌಡ ಜತೆ ನನ್ನದು ಲಿವ್​ಇನ್ ರಿಲೇಷನ್​ಶಿಪ್​; ದರ್ಶನ್​ ಒಪ್ಪಿಕೊಂಡ ಹಲವು ಸತ್ಯಗಳು
ಪವಿತ್ರಾ ಗೌಡ, ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Sep 09, 2024 | 3:35 PM

ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ಟಿವಿ9ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್ ಪ್ರತಿ ಲಭ್ಯವಾಗಿದೆ. ಇದರಲ್ಲಿ ಆರೋಪಿ ದರ್ಶನ್​ ನೀಡಿದ ಸ್ವಇಚ್ಛಾ ಹೇಳಿಕೆ ಇದೆ. ಈ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ ವಿರುದ್ಧ ಪೊಲೀಸರಿಗೆ ಹಲವು ಸಾಕ್ಷಿಗಳು ಸಿಕ್ಕಿವೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಮೆಸೇಜ್​ ಮಾಡಿದ್ದಕ್ಕೆ ಇಷ್ಟೆಲ್ಲ ದುರಂತ ನಡೆದು ಹೋಗಿದೆ. ತನಿಖೆಯ ವೇಳೆ ದರ್ಶನ್​ ನೀಡಿದ ಹೇಳಿಕೆಯಲ್ಲಿ ಅನೇಕ ಶಾಕಿಂಗ್​ ಸಂಗತಿಗಳು ತಿಳಿದುಬಂದಿವೆ. ದರ್ಶನ್​ ನೀಡಿದ ಸ್ವಇಚ್ಛಾ ಹೇಳಿಕೆ ಹೀಗಿದೆ..

‘ನಾನು ರಾಜರಾಜೇಶ್ವರಿನಗರದಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದು, ಚಿತ್ರನಟನಾಗಿ ಮತ್ತು ಇತರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುತ್ತೇನೆ. 2011ರ ಸೆ.9ರಂದು ನನ್ನ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದರು. ನನ್ನ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಮೊ.ಸಂ: 425/2011 ಐಪಿಸಿ ಸೆಕ್ಷನ್ 498ಎ, 355, 307, 323, 5060 ಕೇಸ್ ದಾಖಲಾಗಿ ಖುಲಾಸೆಯಾಗಿರುತ್ತದೆ. ನಾನು, ನನ್ನ ಪತ್ನಿ, ಮಗ ಹೊಸಕೆರೆಹಳ್ಳಿ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದೇವೆ.’

‘ನನ್ನ ಪತ್ನಿ ಗೃಹಿಣಿ, ಮಗ 10ನೇ ತರಗತಿ ವ್ಯಾಸಂಗ ಮಾಡುತ್ತಿರುತ್ತಾನೆ. ನಾನು, ವಿಜಯಲಕ್ಷ್ಮೀ ಮದುವೆಯಾಗಿ 22 ವರ್ಷವಾಗಿದ್ದು, ಪವಿತ್ರಾಗೌಡ 10 ವರ್ಷಗಳಿಂದ ಲೀವ್​ಇನ್ ರಿಲೇಷನ್​ಶಿಪ್​ನಲ್ಲಿದ್ದು ಪವಿತ್ರಾಗೌಡ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿರುತ್ತಾರೆ. ಪವನ್ ಮನೆ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿರುತ್ತಾನೆ. ನಂದೀಶ್ ಎಂಬುವನು ನನ್ನ ಅಭಿಮಾನಿ, ಆತನ ಪರಿಚಯವಿದೆ.’

ಇದನ್ನೂ ಓದಿ: ದರ್ಶನ್​​ಗೆ ಅಭಿಮಾನಿಗಳಿಂದಲೇ ಸಂಕಷ್ಟ? ಪ್ರಕರಣದಲ್ಲಿ ಮುಂದಿನ ಹೆಜ್ಜೆಯೇನು?

‘ಲಕ್ಷ್ಮಣ ನನ್ನ ಬಳಿ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿರುತ್ತಾರೆ. ವಿನಯ್ ಸುಮಾರು 3-4 ವರ್ಷಗಳಿಂದ ನನಗೆ ಪರಿಚಯ ಇದೆ. ವಿನಯ್​ ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿರುತ್ತಾರೆ. ನಾಗರಾಜ್ ಮೈಸೂರಿನ ನನ್ನ ಫಾರ್ಮ್​ಹೌಸ್​ ನೋಡಿಕೊಳ್ತಿದ್ದರು. ಪ್ರದೋಶ್​ ನನಗೆ ಸುಮಾರು 16 ವರ್ಷಗಳಿಂದ ಪರಿಚಯವಿದೆ. ಪ್ರದೋಶ್ ಆಗಾಗ ನನ್ನ ಮನೆಗೆ ಬಂದು ಹೋಗುತ್ತಿರುತ್ತಾನೆ. ಚಿತ್ರದುರ್ಗದ ರಾಘವೇಂದ್ರ ನನ್ನ ಅಭಿಮಾನಿಯಾಗಿದ್ದು, ಚಿತ್ರದುರ್ಗದಲ್ಲಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನಾಗಿರುತ್ತಾನೆ’ ಎಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್​​ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ