AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜತೆ ನನ್ನದು ಲಿವ್​ಇನ್ ರಿಲೇಷನ್​ಶಿಪ್​; ದರ್ಶನ್​ ಒಪ್ಪಿಕೊಂಡ ಹಲವು ಸತ್ಯಗಳು

ಕಳೆದ 10 ವರ್ಷಗಳಿಂದಲೂ ದರ್ಶನ್​ ಮತ್ತು ಪವಿತ್ರಾ ಗೌಡ ಲಿವ್​ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ. ಈ ಪ್ರಕರಣದ ಇನ್ನುಳಿದ ಆರೋಪಿಗಳ ಜೊತೆ ತಮ್ಮ ಸ್ನೇಹ-ಸಂಬಂಧ ಎಂಥದ್ದು ಎಂಬುದನ್ನು ದರ್ಶನ್​ ವಿವರಿಸಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಈ ಅಂಗಳು ಉಲ್ಲೇಖ ಆಗಿವೆ.

ಪವಿತ್ರಾ ಗೌಡ ಜತೆ ನನ್ನದು ಲಿವ್​ಇನ್ ರಿಲೇಷನ್​ಶಿಪ್​; ದರ್ಶನ್​ ಒಪ್ಪಿಕೊಂಡ ಹಲವು ಸತ್ಯಗಳು
ಪವಿತ್ರಾ ಗೌಡ, ದರ್ಶನ್​
Shivaprasad B
| Edited By: |

Updated on: Sep 09, 2024 | 3:35 PM

Share

ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ಟಿವಿ9ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್ ಪ್ರತಿ ಲಭ್ಯವಾಗಿದೆ. ಇದರಲ್ಲಿ ಆರೋಪಿ ದರ್ಶನ್​ ನೀಡಿದ ಸ್ವಇಚ್ಛಾ ಹೇಳಿಕೆ ಇದೆ. ಈ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ ವಿರುದ್ಧ ಪೊಲೀಸರಿಗೆ ಹಲವು ಸಾಕ್ಷಿಗಳು ಸಿಕ್ಕಿವೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಮೆಸೇಜ್​ ಮಾಡಿದ್ದಕ್ಕೆ ಇಷ್ಟೆಲ್ಲ ದುರಂತ ನಡೆದು ಹೋಗಿದೆ. ತನಿಖೆಯ ವೇಳೆ ದರ್ಶನ್​ ನೀಡಿದ ಹೇಳಿಕೆಯಲ್ಲಿ ಅನೇಕ ಶಾಕಿಂಗ್​ ಸಂಗತಿಗಳು ತಿಳಿದುಬಂದಿವೆ. ದರ್ಶನ್​ ನೀಡಿದ ಸ್ವಇಚ್ಛಾ ಹೇಳಿಕೆ ಹೀಗಿದೆ..

‘ನಾನು ರಾಜರಾಜೇಶ್ವರಿನಗರದಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದು, ಚಿತ್ರನಟನಾಗಿ ಮತ್ತು ಇತರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುತ್ತೇನೆ. 2011ರ ಸೆ.9ರಂದು ನನ್ನ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದರು. ನನ್ನ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಮೊ.ಸಂ: 425/2011 ಐಪಿಸಿ ಸೆಕ್ಷನ್ 498ಎ, 355, 307, 323, 5060 ಕೇಸ್ ದಾಖಲಾಗಿ ಖುಲಾಸೆಯಾಗಿರುತ್ತದೆ. ನಾನು, ನನ್ನ ಪತ್ನಿ, ಮಗ ಹೊಸಕೆರೆಹಳ್ಳಿ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದೇವೆ.’

‘ನನ್ನ ಪತ್ನಿ ಗೃಹಿಣಿ, ಮಗ 10ನೇ ತರಗತಿ ವ್ಯಾಸಂಗ ಮಾಡುತ್ತಿರುತ್ತಾನೆ. ನಾನು, ವಿಜಯಲಕ್ಷ್ಮೀ ಮದುವೆಯಾಗಿ 22 ವರ್ಷವಾಗಿದ್ದು, ಪವಿತ್ರಾಗೌಡ 10 ವರ್ಷಗಳಿಂದ ಲೀವ್​ಇನ್ ರಿಲೇಷನ್​ಶಿಪ್​ನಲ್ಲಿದ್ದು ಪವಿತ್ರಾಗೌಡ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿರುತ್ತಾರೆ. ಪವನ್ ಮನೆ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿರುತ್ತಾನೆ. ನಂದೀಶ್ ಎಂಬುವನು ನನ್ನ ಅಭಿಮಾನಿ, ಆತನ ಪರಿಚಯವಿದೆ.’

ಇದನ್ನೂ ಓದಿ: ದರ್ಶನ್​​ಗೆ ಅಭಿಮಾನಿಗಳಿಂದಲೇ ಸಂಕಷ್ಟ? ಪ್ರಕರಣದಲ್ಲಿ ಮುಂದಿನ ಹೆಜ್ಜೆಯೇನು?

‘ಲಕ್ಷ್ಮಣ ನನ್ನ ಬಳಿ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿರುತ್ತಾರೆ. ವಿನಯ್ ಸುಮಾರು 3-4 ವರ್ಷಗಳಿಂದ ನನಗೆ ಪರಿಚಯ ಇದೆ. ವಿನಯ್​ ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿರುತ್ತಾರೆ. ನಾಗರಾಜ್ ಮೈಸೂರಿನ ನನ್ನ ಫಾರ್ಮ್​ಹೌಸ್​ ನೋಡಿಕೊಳ್ತಿದ್ದರು. ಪ್ರದೋಶ್​ ನನಗೆ ಸುಮಾರು 16 ವರ್ಷಗಳಿಂದ ಪರಿಚಯವಿದೆ. ಪ್ರದೋಶ್ ಆಗಾಗ ನನ್ನ ಮನೆಗೆ ಬಂದು ಹೋಗುತ್ತಿರುತ್ತಾನೆ. ಚಿತ್ರದುರ್ಗದ ರಾಘವೇಂದ್ರ ನನ್ನ ಅಭಿಮಾನಿಯಾಗಿದ್ದು, ಚಿತ್ರದುರ್ಗದಲ್ಲಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನಾಗಿರುತ್ತಾನೆ’ ಎಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್​​ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ