AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಸಂಬಳಕ್ಕೆ ಇವಳನ್ನು ಮೇಂಟೇನ್ ಮಾಡೋಕಾಗತ್ತಾ? ರೇಣುಕಾ ಸ್ವಾಮಿಗೆ ಪ್ರಶ್ನಿಸಿದ್ದ ದರ್ಶನ್

ರೇಣುಕಾ ಸ್ವಾಮಿ ಕೊಲೆ ನಡೆಯುವುದಕ್ಕೂ ಮುನ್ನ ಏನೆಲ್ಲ ನಡೆಯಿತು ಎಂಬುದನ್ನು ದರ್ಶನ್​ ವಿವರಿಸಿದ್ದಾರೆ. ಪವಿತ್ರಾ ಗೌಡ ಹಾಗೂ ದರ್ಶನ್​ ಒಟ್ಟಿಗೆ ಶೆಡ್​ ಬಳಿ ಹೋಗಿದ್ದರು. ಆಗ ರೇಣುಕಾ ಸ್ವಾಮಿಯ ಕೆಟ್ಟ ಮೆಸೇಜ್​ ಬಗ್ಗೆ ಪ್ರಶ್ನೆ ಮಾಡಲಾಯಿತು. ಚಾರ್ಜ್​ಶೀಟ್​ನಲ್ಲಿ ದರ್ಶನ್​ ಅವರು ಅನೇಕ ವಿಚಾರಗಳನ್ನು ಒಪ್ಪಿಕೊಂಡಿದ್ದಾರೆ. ಆ ಮಾಹಿತಿ ಇಲ್ಲಿದೆ..

20 ಸಾವಿರ ಸಂಬಳಕ್ಕೆ ಇವಳನ್ನು ಮೇಂಟೇನ್ ಮಾಡೋಕಾಗತ್ತಾ? ರೇಣುಕಾ ಸ್ವಾಮಿಗೆ ಪ್ರಶ್ನಿಸಿದ್ದ ದರ್ಶನ್
ದರ್ಶನ್​, ಪವಿತ್ರಾ ಗೌಡ, ರೇಣುಕಾ ಸ್ವಾಮಿ
TV9 Web
| Edited By: |

Updated on:Sep 09, 2024 | 4:12 PM

Share

ದರ್ಶನ್​, ಪವಿತ್ರಾ ಗೌಡ, ವಿನಯ್​, ಪ್ರದೋಶ್​ ಮುಂತಾದವರು ಕೊಲೆ ಆರೋಪ ಎದುರಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ದಿನ ನಟ ಚಿಕ್ಕಣ್ಣ ಅವರನ್ನೂ ದರ್ಶನ್​ ಭೇಟಿ ಆಗಿದ್ದರು. ಆ ಕಾರಣದಿಂದಲೇ ಚಿಕ್ಕಣ್ಣನನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಜೂನ್​ 8ರಂದು ಏನೆಲ್ಲ ನಡೆಯಿತು ಎಂಬುದನ್ನು ಪೊಲೀಸರ ವಿಚಾರಣೆ ವೇಳೆ ದರ್ಶನ್​ ಬಾಯಿ ಬಿಟ್ಟಿದ್ದಾರೆ. ಟಿವಿ9ಗೆ ಈ ಕೇಸ್​ನ ಚಾರ್ಜ್​ಶೀಟ್​ ಪ್ರತಿ ಸಿಕ್ಕಿದೆ. ದರ್ಶನ್​ ಸ್ವಇಚ್ಛಾ ಹೇಳಿಕೆಯಲ್ಲಿ ಏನೆಲ್ಲ ಇದೆ ಎಂಬುದು ತಿಳಿದುಬಂದಿದೆ. ದರ್ಶನ್​ ಹೇಳಿಕೆಯ ಒಂದು ಭಾಗ ಇಲ್ಲಿದೆ..

‘ಚಿಕ್ಕಣ್ಣ ಸಹ ಚಿತ್ರನಟನಾಗಿದ್ದು ಆಗಾಗ ನನ್ನನ್ನು ಭೇಟಿಯಾಗುತ್ತಿದ್ದ. ಜೂನ್ 8ರ ಬೆಳಗ್ಗೆ ಕತ್ರಿಗುಪ್ಪೆ ಫ್ಲ್ಯಾಟ್​ನಿಂದ ಮನೆಗೆ ಬಂದಿದ್ದೆ. ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್​ನ ಮನೆಗೆ ಬಂದಿದ್ದೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರದೋಶ್ ನಮ್ಮ ಮನೆಗೆ ಬಂದಿದ್ದ. ನಂತರ ಸ್ಟೋನಿಬ್ರೂಕ್ಸ್​ನ ರೆಸ್ಟೋರೆಂಟ್​ಗೆ ಮೂವರು ಹೋಗಿದ್ದೆವು. ಸ್ಟೋನಿಬ್ರೂಕ್ಸ್ ರೆಸ್ಟೋರೆಂಟ್​ಗೆ ಚಿತ್ರ ನಟ ಚಿಕ್ಕಣ್ಣ ಸಹ ಬಂದಿದ್ದರು.’

‘ನಾವು ಅಲ್ಲೇ ಮಧ್ಯಾಹ್ನ ಊಟ ಮುಗಿಸಿ ಟೇಬಲ್​ನಲ್ಲಿ ಕುಳಿತು ಚರ್ಚೆ ಮಾಡಿದೆವು. ಅಲ್ಲಿಗೆ ಪವನ್ ಬಂದಿದ್ದ, ತನ್ನ ಮೊಬೈಲ್​ನಲ್ಲಿ ಫೋಟೋ ತೋರಿಸಿದ್ದ. ಗೌತಮ್ ಹೆಸರಿನ ಇನ್​ಸ್ಟಾಗ್ರಾಂ ಖಾತೆಯಿಂದ ರೇಣುಕಾ ಸ್ವಾಮಿಯು ಫೋಟೋ ಕಳಿಸಿದ್ದ. ಪವಿತ್ರಾ ಅಕ್ಕನಿಗೆ ದಿನ ಖಾಸಗಿ ಅಂಗಾಂಗ ಫೋಟೋ ಕಳಿಸುತ್ತಿದ್ದಲ್ಲದೇ, ಪವಿತ್ರಾ ಅಕ್ಕನಿಗೆ ನಿನ್ನ ರೇಟ್ ಎಷ್ಟು, ನಾನೇ ರೂಮ್ ಮಾಡುವೆ ಬಾ, ನೀನು ರೂಮ್​ಗೆ ಬಾ, ನಾನು ದರ್ಶನ್​ಗಿಂತ ಚೆನ್ನಾಗಿದ್ದೇನೆಂದು ಮೆಸೇಜ್ ಮಾಡುತ್ತಿದ್ದ ಎಂದು ಮಾಹಿತಿ ನೀಡಿದ. ಆತನನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕರೆತಂದಿದ್ದರು.’

‘ರಾಘವೇಂದ್ರ ಮತ್ತು ಸ್ನೇಹಿತರು ಅಪಹರಿಸಿ ತಂದು ಶೆಡ್​ನಲ್ಲಿದ್ದಾಗಿ ಮಾಹಿತಿ ಬಂತು. ಆಗ ಪವಿತ್ರಾಗೆ ಕರೆ ಮಾಡಿ ಸ್ಟೋನಿ ಬ್ರೂಕ್ಸ್​ನಿಂದ ಊಟ ಕಳುಹಿಸಿರುತ್ತೇನೆ. ಪವಿತ್ರಾಗೌಡ ಊಟ ಮಾಡುತ್ತಿದ್ದ ವೇಳೆ ವಿಡಿಯೋ ಕಾಲ್ ಮಾಡಿದ್ದೆ. ಊಟದ ನಂತರ ಶೆಡ್​ಗೆ ಹೋಗೋಣ ಎಂದು ಪವಿತ್ರಾ ಗೌಡಗೆ ಹೇಳಿದ್ದೆ. ಅವನನ್ನು ವಿಚಾರಿಸಿಕೊಂಡು ಬರೋಣ ಎಂದು ಪವಿತ್ರಾಗೌಡಗೆ ತಿಳಿಸಿದ್ದೆ. ನನ್ನ ಜೊತೆಗಿದ್ದ ಚಿಕ್ಕಣ್ಣ ಮತ್ತಿತರರನ್ನು ಮನೆಗೆ ಹೋಗಿ ಎಂದು ಹೇಳಿದ್ದೆ.’

‘ನಾನು, ವಿನಯ್, ಪ್ರದೋಶ್​ ಜೊತೆ ಸ್ಕಾರ್ಪಿಯೊ ಕಾರಿನಲ್ಲಿ ತೆರಳಿದ್ದೆವು. ಪವಿತ್ರಾ ಮನೆ ಬಳಿಗೆ ಹೋಗಿ ಕರೆದುಕೊಂಡು ಒಟ್ಟಿಗೆ ಕಾರಿನಲ್ಲಿ ಹೊರಟೆವು. ಸಂಜೆ 4.30ರ ಸುಮಾರಿಗೆ ನಾವು ವಿನಯ್​ಗೆ ಸೇರಿದ ಶೆಡ್​ ತಲುಪಿದೆವು. ವಾಹನದಿಂದ ಇಳಿದು ನೋಡಿದಾಗ ವಾಹನಕ್ಕೆ ಒರಗಿ ಓರ್ವ ಕೂತಿದ್ದ. ಆತನನ್ನು ತೋರಿಸಿದ ಪವನ್ ಇವನೇ ಮೆಸೇಜ್ ಮಾಡುತ್ತಿದ್ದವನು ಎಂದಿದ್ದ. ಪವಿತ್ರಾ ಅಕ್ಕನಿಗೆ ಖಾಸಗಿ ಅಂಗಾಂಗ ಫೋಟೋ ಕಳುಹಿಸುತ್ತಿದ್ದ ಎಂದಿದ್ದ.’

ಇದನ್ನೂ ಓದಿ: ಪವಿತ್ರಾ ಗೌಡ ಜತೆ ನನ್ನದು ಲಿವ್​ಇನ್ ರಿಲೇಷನ್​ಶಿಪ್​; ದರ್ಶನ್​ ಒಪ್ಪಿಕೊಂಡ ಹಲವು ಸತ್ಯಗಳು

‘ರಾಘವೇಂದ್ರ, ದೀಪಕ್, ನಂದೀಶ್ ಕೂಡ ಪಟ್ಟಣಗೆರೆ ಶೆಡ್​ನಲ್ಲೇ ಇದ್ದರು. ತೀವ್ರ ಆಯಾಸಗೊಂಡಿದ್ದ ವ್ಯಕ್ತಿ ಬ್ಲೂಜೀನ್ಸ್ ಪ್ಯಾಂಟ್, ಶರ್ಟ್ ಧರಿಸಿದ್ದ. ನಾನು ಅಲ್ಲಿಗೆ ಹೋಗುವ ಮೊದಲೇ ಹೊಡೆದಿರುವಂತೆ ಕಂಡು ಬಂತು. ಆತನ ಬಳಿಗೆ ಹೋಗಿ ನೀನೇನಾ ಈ ತರ ಮೆಸೇಜ್ ಮಾಡಿದ್ದ ಎಂದಿದ್ದೆ. ಹೌದು ನಾನೇ ಮೆಸೇಜ್ ಕಳಿಸಿದ್ದು ಎಂದು ಆತ ಒಪ್ಪಿಕೊಂಡಿದ್ದ. ನಿನಗೆ ಎಷ್ಟು ಸಂಬಳ ಎಂದಾಗ 20 ಸಾವಿರ ರೂ. ಬರುತ್ತೆ ಎಂದು ಹೇಳಿದ್ದ. 20 ಸಾವಿರ ರೂ. ಸಂಬಳದಲ್ಲಿ ಇವಳನ್ನು ಮೇಂಟೇನ್ ಮಾಡಲಾಗುತ್ತಾ? ನನ್ ಮಗನೇ.. ನೀನು ಇವಳನ್ನು ಮೇಂಟೇನ್ ಮಾಡಲು ಆಗುತ್ತಾ ಎಂದಿದ್ದೆ. ಕೆಟ್ಟದಾಗಿ ಮೆಸೇಜ್ ಮಾಡಿದ್ಯಲ್ಲ ಎಂದು ಪ್ರಶ್ನಿಸಿದಾಗ ಮಾತನಾಡಲಿಲ್ಲ’ ಎಂದು ಹೇಳಿಕೆಯಲ್ಲಿ ದರ್ಶನ್​ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:10 pm, Mon, 9 September 24

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು